NASA Developing: ಶನಿಯ ಉಪ ಗ್ರಹದತ್ತ “ಹಾವಿನ’ ಸಂಚಾರ!

ಎನ್‌ಸೆಲಡಸ್‌ ಅಧ್ಯಯನಕ್ಕೆ ಉರಗ ರೂಪದ ರೊಬೋಟ್‌

Team Udayavani, May 9, 2023, 7:45 AM IST

NASA Developing: ಶನಿಯ ಉಪ ಗ್ರಹದತ್ತ “ಹಾವಿನ’ ಸಂಚಾರ!

ವಾಷಿಂಗ್ಟನ್‌: ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಪ್ರಯೋಗವೊಂದಕ್ಕೆ ಈಗ ನಾಸಾ ಮುಂದಾಗಿದೆ. ಶನಿ ಗ್ರಹದ ಉಪ ಗ್ರಹವಾದ “ಎನ್‌ಸೆಲಡಸ್‌’ನ ಅಂಗಳದಲ್ಲಿ ಅಧ್ಯಯನ ನಡೆಸಲು ಹಾವಿನ ಆಕಾರದ ರೊಬೋಟ್‌ವೊಂದನ್ನು ನಾಸಾ ಅಭಿವೃದ್ಧಿಪಡಿಸುತ್ತಿದೆ!

ಎನ್‌ಸೆಲಡಸ್‌ನಲ್ಲಿನ ಭೌಗೋಳಿಕ ರಚನೆಯನ್ನು ಅಭ್ಯಸಿಸಿ, ಅದು ವಾಸಯೋಗ್ಯವೇ, ಅಲ್ಲಿ ಜೀವಸಂಕುಲದ ಕುರುಹೇನಾದರೂ ಇದೆಯೇ ಎಂಬ ಬಗ್ಗೆ ಈ ರೊಬೋಟ್‌ ಅಧ್ಯಯನ ನಡೆಸಲಿದೆ.

ಈ ಅಧ್ಯಯನಕ್ಕೆಂದೇ ಎಕೊಬಯಾಲಜಿ ಎಕ್ಸ್‌ಟೆಂಟ್‌ ಲೈಫ್ ಸರ್ವೇಯರ್‌(ಈಲ್ಸ್‌) ಎಂಬ ಸಂಚಾರಿ ಸಾಧನವನ್ನು ನಾಸಾ ಅಭಿವೃದ್ಧಿಪಡಿಸುತ್ತಿದೆ. ಈ ಸಾಧನವು ನೋಡಲು ಥೇಟ್‌ ಹಾವಿನಂತಿರಲಿದೆ. ಉಬ್ಬು, ತಗ್ಗು ಸೇರಿದಂತೆ ಎಲ್ಲ ರೀತಿಯ ಭೂ ಪ್ರದೇಶದಲ್ಲೂ ಸುಗಮವಾಗಿ ಸಂಚರಿಸಲು ಆಗಬೇಕು ಎಂಬ ಕಾರಣದಿಂದಲೇ ಇದಕ್ಕೆ ಹಾವಿನ ಆಕಾರ ನೀಡಲಾಗುತ್ತಿದೆ.

ಏನಿದು ಎನ್‌ಸೆಲಡಸ್‌?
ಇದು ಶನಿ ಗ್ರಹದ ಉಪ ಗ್ರಹವಾಗಿದ್ದು, ಇದನ್ನು 1789ರಲ್ಲಿ ಆವಿಷ್ಕರಿಸಲಾಯಿತು. ಮಂಜುಗಡ್ಡೆ ಆವೃತ ಪುಟ್ಟ ಗ್ರಹ ಇದಾಗಿದ್ದು, ಇದನ್ನು “ವೈಜ್ಞಾನಿಕವಾಗಿ ಅತ್ಯಂತ ಆಸಕ್ತಿದಾಯಕ ತಾಣ’ ಎಂದು ಪರಿಗಣಿಸಲಾಗಿದೆ. ಎನ್‌ಸೆಲಡಸ್‌ನಲ್ಲಿನ ಮಂಜುಗಡ್ಡೆಯ ತಿರುಳಿನ ತಳಭಾಗದಲ್ಲಿ ದ್ರವರೂಪದ ಸಾಗರವೇ ಇದೆ. ಅಲ್ಲದೇ, ಇದರ ಮೇಲ್ಮೈ ತಾಪಮಾನ ಸುಮಾರು ಮೈನಸ್‌ 201 ಡಿ.ಸೆ.ನಷ್ಟಿದೆ ಎಂದು ಕ್ಯಾಸಿನಿ ಬಾಹ್ಯಾಕಾಶ ನೌಕೆಯ ದತ್ತಾಂಶ ಹೇಳಿದೆ.

ಅಧ್ಯಯನದ ಉದ್ದೇಶ
ಎನ್‌ಸೆಲಡಸ್‌ನಲ್ಲಿರುವ ಸಮುದ್ರ ಮತ್ತು ಆಂತರಿಕ ಉಷ್ಣತೆಯ ಕಾರಣಕ್ಕೆ ಇದು ವಾಸಯೋಗ್ಯವೇ ಎಂಬ ಪ್ರಶ್ನೆ ನಾಸಾಗೆ ಹುಟ್ಟಿದೆ. ಇದಕ್ಕೆ ಉತ್ತರ ಕಂಡುಕೊಳ್ಳಲೆಂದೇ ಈಲ್ಸ್‌ ಅನ್ನು ಕಳುಹಿಸಲಾಗುತ್ತದೆ. ಹಾವಿನ ರೂಪದಲ್ಲಿರುವ ಈಲ್ಸ್‌ನಲ್ಲಿ ಟ್ರ್ಯಾಕ್‌ಗಳು, ಬಿಗಿಹಿಡಿತದ ಮತ್ತು ನೀರಿನಡಿಯೂ ಸಂಚರಿಸಬಲ್ಲ ವ್ಯವಸ್ಥೆಯಿರುತ್ತದೆ. ಹೀಗಾಗಿ, ಎನ್‌ಸೆಲಡಸ್‌ನಲ್ಲಿನ ಸಮುದ್ರದ ಕಡೆಗೂ ಇದು ಹೋಗಲು ಸಾಧ್ಯವಾಗಲಿದೆ. ಈ ಮೂಲಕ ಹಿಂದೆಂದೂ ಆವಿಷ್ಕರಿಸಿರದ ಪ್ರದೇಶಗಳಲ್ಲಿ ಅಧ್ಯಯನ ನಡೆಸಲು ಅನುಕೂಲವಾಗಲಿದೆ ಎನ್ನುತ್ತದೆ ನಾಸಾ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.