ಕ್ಷೀರಪಥದ ಅಮೋಘ ಚಿತ್ರ ಬಿಡುಗಡೆಗೊಳಿಸಿದೆ ನಾಸಾ..!
Team Udayavani, Apr 16, 2021, 11:57 AM IST
ವಾಷಿಂಗ್ಟನ್ : ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಸೆರೆಹಿಡಿಯಲಾದ ಮಿಲ್ಕಿ ವೇ ಗೆಲಾಕ್ಸಿಯ ಚಿತ್ರವೊಂದನ್ನು ನಾಸಾ (NASA – National Aeronautics and Space Administration) ತನ್ನ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪ್ರಕಟಿಸಿದೆ. ನಾಸಾ ಬಿಡುಗಡೆಗೊಳಿಸಿದ ಈ ಕುತೂಹಲಕಾರಿ ಚಿತ್ರ ಲಕ್ಷಾಂತರ ಮಂದಿಯ ಗಮನ ಸೆಳೆದಿದೆ.
ಓದಿ : ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ
ನಾವು ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಸೆರೆಹಿಡಿಯಲ್ಪಟ್ಟ ಮಿಲ್ಕಿ ವೇ ಗ್ಯಾಲಕ್ಸಿಯ ಚಿತ್ರವನ್ನು ನಾವು ಇಲ್ಲಿ ಪ್ರಕಟಿಸಿದ್ದೇವೆ. ಈ ಚಿತ್ರ ಎಲ್ಲವನ್ನೂ ವರ್ಣಿಸುತ್ತದೆ. ನಾವು ವಾಸಿಸುವ ಭೂಮಿಯೂ ಇದೇ ಮಿಲ್ಕಿ ವೇ ನಲ್ಲಿದೆ. ಎಂದು ನಾಸಾ ಅಡಿ ಟಿಪ್ಪಣಿಯೊಂದಿಗೆ ಈ ಚಿತ್ರವನ್ನು ಹಂಚಿಕೊಂಡಿದೆ.
ಇನ್ನು, ಕ್ಷೀರಪಥವು ನಮ್ಮ ಸೌರವ್ಯೂಹವನ್ನು ಒಳಗೊಂಡಿರುವ ಒಂದು ನೀಹಾರಿಕೆ ಅಥವಾ ಗ್ಯಾಲಕ್ಸಿ. ‘ಮಿಲ್ಕೀ ವೇ‘ ಪದ ಲ್ಯಾಟಿನ್ ನ ‘ವಿಯಾ ಲಾಕ್ಟಿಯಾ’ ಎಂಬ ಪದದಿಂದ ಬಂದಿದೆ. ಈ ಗ್ಯಾಲಕ್ಸಿಯ ಆಕಾಶದಲ್ಲಿ ಅದರ ಗೋಚರತೆಯನ್ನು ನೋಡಿ, ಮಂದವಾಗಿ ಪ್ರಜ್ವಲಿಸುವ ಅದರ ಪಟ್ಟಿಯನ್ನು ಅನುಸರಿಸಿ ಕ್ಷೀರಪಥ ಅಥವಾ ಹಾಲು-ದಾರಿ/ಹಾಲಿನ ದಾರಿ, ಎಂಬ ಹೆಸರು ಎಂದು ಹೇಳಲಾಗುತ್ತದೆ.
ಭಾರತದಲ್ಲಿ ಅದನ್ನು “ಆಕಾಶಗಂಗೆ” ಎಂದು ಕರೆಯುವ ರೂಢಿಯೂ ಕೂಡ ಇದೆ. ಆಕಾಶದಿಂದ ಭೂಮಿಗೆ ಇಳಿಯುತ್ತಿರುವ ಗಂಗಾನದಿ /ಗಂಗಾಮಾತೆ ಎಂದು ಪ್ರಾಚೀನರು ಭಾವಿಸಿದ್ದರು. ಪೌರಾಣಿಕ ಕಥೆಯಲ್ಲಿ ಗಂಗೆಯು ವಿಷ್ಣುಸ್ವರೂಪ ತ್ರಿವಿಕ್ರಮನ ಪಾದದಲ್ಲಿ ಹುಟ್ಟಿ ಸ್ವರ್ಗದಲ್ಲಿ ಹರಿಯುವಳು. ನಂತರ ಬ್ರಹ್ಮನ ಕಲಶಸೇರಿ, ಕೈಲಾಸ ವಾಸಿಯಾದ ಶಿವನ ಜಟೆಯಲ್ಲಿದ್ದು, ನಂತರ ಭಗೀರಥನ ಪ್ರಯತ್ನದಿಂದ ಭೂಮಿಗೆ ಹರಿಯುವಳು. ಹಾಗಾಗಿ ಭಾರತದ ಪ್ರಾಚೀನರು ಈ ನಕ್ಷತ್ರಲೋಕದ ಬೆಳಕಿನ ಪಟ್ಟಿಯನ್ನು ಆಕಾಶಗಂಗೆ ಎಂದು ಕರೆದರು ಎಂದು ಹೇಳಲಾಗುತ್ತದೆ.
ಓದಿ : ಅಂಚೆ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತಕ್ಕೆ ವಿಧಿಸುವ ದಂಡ ಪ್ರಮಾಣ ಇಳಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್