ನಾಳೆ ಜೇಮ್ಸ್ ವೆಬ್ ದೂರದರ್ಶಕ ಉಡಾವಣೆ; ನಾಸಾದ ಮಹತ್ವಾಕಾಂಕ್ಷಿ ಯೋಜನೆ
ತಾರಾಪುಂಜಗಳ ಸೃಷ್ಟಿಯ ಕುರಿತ ಅಧ್ಯಯನಕ್ಕೆ ಸಹಕಾರಿ
Team Udayavani, Dec 21, 2021, 6:50 AM IST
ನ್ಯೂಯಾರ್ಕ್: ಕ್ರಿಸ್ಮಸ್ ಹಬ್ಬಕ್ಕೂ ಮುನ್ನ ಅಂದರೆ ಡಿ.22ರಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತನ್ನ ಮಹತ್ವಾಕಾಂಕ್ಷೆಯ “ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್'(ಜೆಡಬ್ಲ್ಯುಎಸ್ಟಿ) ಉಡಾವಣೆ ಮಾಡಲಿದೆ. ಅರಿಯಾನೆ 5 ರಾಕೆಟ್ ಮೂಲಕ ದೂರದರ್ಶಕವನ್ನು ಉಡಾಯಿಸಲು ನಿರ್ಧರಿಸಲಾಗಿದೆ.
ಉಡಾವಣೆಯಾದ 30 ನಿಮಿಷಗಳಲ್ಲಿ ಜೇಮ್ಸ್ ವೆಬ್ ದೂರದರ್ಶಕವು ರಾಕೆಟ್ನಿಂದ ಪ್ರತ್ಯೇಕಗೊಳ್ಳಲಿದೆ. ನಂತರ ಸೌರ ಫಲಕದ ಸಹಾಯದಿಂದ ತನ್ನ ಪ್ರಯಾಣವನ್ನು ಮುಂದುವರಿಸಲಿದೆ. 30 ದಿನಗಳ ಬಳಿಕ ದೂರದರ್ಶಕವು ಸೆಕೆಂಡ್ ಲ್ಯಾಗ್ರೇಂಜ್ ಪಾಯಿಂಟ್(ಎಲ್2)ಗೆ ತಲುಪಲಿದೆ.
1990ರಲ್ಲಿ ಉಡಾವಣೆಯಾದ ಹಬಲ್ ದೂರದರ್ಶಕವು ಭೂಮಿಯ ಕಕ್ಷೆಯಲ್ಲಿ ಸುತ್ತುತ್ತಿದ್ದರೆ, ಜೇಮ್ಸ್ ವೆಬ್ ದೂರದರ್ಶಕವು ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿ ಸೂರ್ಯನ ಕಕ್ಷೆಯಲ್ಲಿ ಸುತ್ತಲಿದೆ. ಹೀಗಾಗಿಯೇ ಈ ದೂರದರ್ಶಕದ ಉಡಾವಣೆ ಮತ್ತು ನಿಯೋಜನೆಯು ಅತ್ಯಂತ ಸವಾಲಿನ ಕೆಲಸ ಎನ್ನುತ್ತಾರೆ ವಿಜ್ಞಾನಿಗಳು.
ನಾಸಾ, ಐರೋಪ್ಯ ಬಾಹ್ಯಾಕಾಶ ಸಂಸ್ಥೆ ಮತ್ತು ಕೆನಡಾ ಬಾಹ್ಯಾಕಾಶ ಸಂಸ್ಥೆ ಜಂಟಿಯಾಗಿ ಈ ದೂರದರ್ಶಕವನ್ನು ಅಭಿವೃದ್ಧಿಪಡಿಸಿವೆ.
ಇದನ್ನೂ ಓದಿ:ಒಮಿಕ್ರಾನ್ ಭೀತಿ : ಗುಜರಾತ್ ನ ಎಂಟು ನಗರಗಳಲ್ಲಿ ಡಿ.31 ರ ವರೆಗೆ ನೈಟ್ ಕರ್ಫ್ಯೂ ಮುಂದುವರಿಕೆ
ಹಬಲ್ ದೂರದರ್ಶಕವು ಈ ಬ್ರಹ್ಮಾಂಡದ ಕುರಿತು ನಮಗೆ ಅಗಾಧ ಮಾಹಿತಿಯನ್ನು ಒದಗಿಸಿದೆ. ಈಗ ಉಡಾವಣೆಯಾಗಲಿರುವ ಜೇಮ್ಸ್ ವೆಬ್ ದೂರದರ್ಶಕವು ಬ್ರಹ್ಮಾಂಡದಲ್ಲಿ ಆರಂಭದಲ್ಲಿ ಸೃಷ್ಟಿಯಾದ ಕೆಲವು ನಕ್ಷತ್ರಪುಂಜಗಳನ್ನು ಪತ್ತೆಹಚ್ಚಲು ಹಾಗೂ ನಮ್ಮ ಕ್ಷೀರಪಥ ಸೇರಿದಂತೆ ವಿವಿಧ ತಾರಾಪುಂಜಗಳು ಸೃಷ್ಟಿಯಾಗಿದ್ದು ಹೇಗೆ ಎಂಬುದನ್ನು ಅರ್ಥಮಾಡಿಕೊಳ್ಳಲೂ ಖಗೋಳವಿಜ್ಞಾನಿಗಳಿಗೆ ನೆರವಾಗಲಿದೆ.
ಚಿನ್ನ ಲೇಪಿತ ದರ್ಪಣ
ಜೇಮ್ಸ್ ವೆಬ್ನ ಮೂಲ ದರ್ಪಣವು ಚಿನ್ನಲೇಪಿತವಾಗಿದ್ದು, 6.5 ಮೀಟರ್ ವ್ಯಾಸವನ್ನು ಹೊಂದಿದೆ. ಹಬಲ್ ದೂರದರ್ಶಕದಲ್ಲಿ ಇದು 2.4 ಮೀ. ಆಗಿದೆ. ಜೇಮ್ಸ್ ವೆಬ್ ದೂರದರ್ಶಕದ ಅವರೋಹಿತ ಪರಿವೀಕ್ಷಣಾ ಸಾಮರ್ಥ್ಯದಿಂದಾಗಿ, ದೂರದ ತಾರಾಪುಂಜಗಳಲ್ಲಿರುವ ನಕ್ಷತ್ರಗಳನ್ನು ಅತ್ಯಂತ ಸೂಕ್ಷ್ಮವಾಗಿ ಅವಲೋಕಿಸಲು ಸಾಧ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ