ಪಾಕಿಸ್ಥಾನದಲ್ಲಿ ತೀವ್ರಗೊಂಡ ಹಿಂಸಾಚಾರ; ಸಾವಿರಾರು ಮಂದಿ ಬಂಧನ
130ಕ್ಕೂ ಹೆಚ್ಚು ಭದ್ರತಾ ಸಿಬಂದಿಗಳಿಗೆ ಗಾಯ
Team Udayavani, May 10, 2023, 3:35 PM IST
ಲಾಹೋರ್: ಮಂಗಳವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನವಾಗುತ್ತಲೇ ಪಾಕಿಸ್ಥಾನದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಾಂತ್ಯ ಪಂಜಾಬ್ನಲ್ಲಿ ಪ್ರತಿಭಟನೆಗಳು ಭುಗಿಲೆದ್ದ ನಂತರ ಸುಮಾರು 1,000 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಇಮ್ರಾನ್ ಖಾನ್ ಬೆಂಬಲಿಗರು ಹಾಗೂ ಪಾಕಿಸ್ಥಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಕಾರ್ಯ ಕರ್ತರು ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಖಾನ್ ಬಂಧನದ ನಂತರ ಹಿಂಸಾಚಾರದಲ್ಲಿ 130 ಅಧಿಕಾರಿಗಳು ಮತ್ತು ಭದ್ರತಾ ಸಿಬಂದಿಗಳು ಗಾಯಗೊಂಡಿದ್ದಾರೆ.
ಇಮ್ರಾನ್ ಖಾನ್ ರನ್ನು 14 ದಿನಗಳ ದೈಹಿಕ ಬಂಧನಕ್ಕೆ ಕೋರಿದ್ದು, ಅವರನ್ನು ಬಂಧಿಸಿರುವ ಭ್ರಷ್ಟಾಚಾರ ಪ್ರಕರಣದ ವಿಚಾರಣೆಗಾಗಿ ಹೆಚ್ಚಿನ ಭದ್ರತಾ ಪೊಲೀಸ್ ಸೌಲಭ್ಯದೊಂದಿಗೆ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇಮ್ರಾನ್ ಖಾನ್ ಅವರ ಆಪ್ತ ಅಸಾದ್ ಉಮರ್ ನನ್ನು ನ್ಯಾಯಾಲಯದ ಆವರಣದಿಂದಲೇ ಬಂಧಿಸಲಾಗಿದೆ. ಇಮ್ರಾನ್ ಖಾನ್ ಮತ್ತು ಅವರ ಪಕ್ಷವು ಪಾಕ್ ಸರ್ಕಾರದ ಕಟ್ಟಡಗಳು ಮತ್ತು ಪಾಕ್ ನ ಸಂಸತ್ತಿನ ಮೇಲೆ ದಾಳಿಗಳನ್ನು ಪೂರ್ವ ಯೋಜಿತವಾಗಿ ಸಂಘಟಿಸುತ್ತಿದೆ ಎಂದು ಸರಕಾರ ಆರೋಪಿಸಿದೆ.
ಖಾನ್ ಅವರನ್ನು ಭ್ರಷ್ಟಾಚಾರ-ವಿರೋಧಿ ಸಂಸ್ಥೆ ಬಂಧಿಸಿದ ಒಂದು ದಿನದ ನಂತರ, ಪಾಕ್ ರೂಪಾಯಿ ಮೌಲ್ಯ ಬುಧವಾರ ಯುಎಸ್ ಡಾಲರ್ ಎದುರು 288.5 ರ ದಾಖಲೆಯ ಕನಿಷ್ಠ ಮಟ್ಟಕ್ಕೆ 1.3% ಕುಸಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ