ನೀರವ್ ಮೋದಿಗೆ ಬೇಲ್ ಇಲ್ಲ, ಪೊಲೀಸ್ ಕಸ್ಟಡಿ, ಮಾ.29ಕ್ಕೆ ವಿಚಾರಣೆ
Team Udayavani, Mar 20, 2019, 1:48 PM IST
ಲಂಡನ್ : ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚನೆಗೈದು ವಿದೇಶಕ್ಕೆ ಪಲಾಯನ ಮಾಡಿದ್ದ ಹಾಗೂ ಇಂದು ಬುಧವಾರ ಲಂಡನ್ ಪೊಲೀಸರಿಂದ ಬಂಧಿಸಲ್ಪಟ್ಟಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ನೀರವ್ ಮೋದಿಗೆ ಬೇಲ್ ಮಂಜೂರು ಮಾಡಲು ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಿರಾಕರಿಸಿದೆ.
ನೀರವ್ ಮೋದಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿರುವ ನ್ಯಾಯಾಲಯ, ಕೇಸಿನ ಮುಂದಿನ ವಿಚಾರಣೆಯನ್ನು ಮಾರ್ಚ್ 29ಕ್ಕೆ ನಿಗದಿಸಿದೆ.
ನೀರವ್ ಮೋದಿ ತನ್ನ ವಾದವನ್ನು ಕೋರ್ಟಿನಲ್ಲಿ ಮಂಡಿಸಲು ಸಮಯಾವಕಾಶ ಕೋರಿರುವುದಾಗಿ ಮೂಲಗಳು ತಿಳಿಸಿವೆ.
ನೀರವ್ ಮೋದಿ ಇಂದು ಪೊಲೀಸರ ಕೈಗೆ ಸಿಕ್ಕಿ ಬಿದ್ದದ್ದು ಒಬ್ಬ ಬ್ಯಾಂಕ್ ಕ್ಲರ್ಕ್ ನಿಂದಾಗಿ. ನೀರವ್ ಮೋದಿಯನ್ನು ಗುರುತಿಸಿದ ಆ ಬ್ಯಾಂಕ್ ಕ್ಲರ್ಕ್ ಒಡನೆಯೇ ಪೊಲೀಸರಿಗೆ ಫೋನ್ ಮಾಡಿ ತಿಳಿಸಿದ್ದ.
ನೀರವ್ ಮೋದಿ ಬಂಧನಕ್ಕೆ ಈಗಾಗಲೇ ತಮ್ಮ ಕೈಯಲ್ಲಿ ಕೋರ್ಟ್ ವಾರೆಂಟ್ ಹಿಡಿದುಕೊಂಡಿದ್ದ ಲಂಡನ್ ಪೊಲೀಸರು, ಸಲೀಸಾಗಿ ಆತನನ್ನು ಬಂಧಿಸಿದರು.
ನೀರವ್ ಮೋದಿ ಪ್ರಾಮಾಣಿಕನಾಗಿರುವುದರಿಂದಲೇ ಆತ ಲಂಡನ್ ನಲ್ಲಿ ಮುಕ್ತವಾಗಿ ಓಡಾಡಿಕೊಂಡಿದ್ದ ಎಂದು ಆತನ ವಕೀಲರು ಕೋರ್ಟಿಗೆ ತಿಳಿಸಿದರು.
ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶರು ನೀರವ್ ಮೋದಿಯನ್ನು ಮಾರ್ಚ್ 29ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ