ನೀರವ್ ವಾಸ ಕುರಿತು ಖಚಿತಪಡಿಸಲಾಗದು
Team Udayavani, Mar 3, 2018, 12:25 PM IST
ವಾಷಿಂಗ್ಟನ್: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 12,600 ಕೋಟಿ ರೂ. ಸುಸ್ತಿದಾರನಾಗಿರುವ ನೀರವ್ ಮೋದಿ ಅಮೆರಿಕದಲ್ಲಿದ್ದಾನೆ ಎನ್ನುವುದನ್ನು ಖಚಿತಪಡಿಸಲಾಗದು ಎಂದು ಅಮೆರಿಕದ ಗೃಹ ಇಲಾಖೆ ಹೇಳಿದೆ. ನೀರವ್ ಬಗ್ಗೆ ವಿವಿಧ ಏಜೆನ್ಸಿಗಳು ನಡೆಸುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಅಮೆರಿಕ ನೆರವು ನೀಡುತ್ತದೆಯೇ ಎಂದು ಗೃಹ ಸಚಿವಾಲಯವನ್ನು ಕೇಳಿದ್ದಕ್ಕೆ, ಕಾನೂನು ಇಲಾಖೆ ಈ ನಿಟ್ಟಿನಲ್ಲಿ ಪ್ರತಿಕ್ರಿಯಿಸಲಿದೆ ಎಂದಿದೆ ಯಾದರೂ, ಕಾನೂನು ಇಲಾಖೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.
ನೀರವ್ ನ್ಯೂಯಾರ್ಕ್ನಲ್ಲಿ ಇದ್ದಾರೆ ಎಂದು ಹೇಳಲಾಗಿದ್ದು, ಭಾರತಕ್ಕೆ ಮರಳಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಇಮೇಲ್ಗೆ ವಿದೇಶದಲ್ಲಿ ವ್ಯವಹಾರವಿರುವು ದರಿಂದ ವಿಚಾರಣೆಗೆ ಆಗಮಿಸಲಾಗದು ಎಂದಿದ್ದಾರೆ.
ಸಾಲ ವಸೂಲಾತಿಗೆ ಅಮೆರಿಕ ಕೋರ್ಟ್ ತಡೆ: ನೀರವ್ ಮೋದಿಯ ಕಂಪೆನಿಯ ಸಾಲ ವಸೂಲಾತಿ ಪ್ರಕ್ರಿಯೆಗೆ ಅಮೆರಿಕ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ. ಈಗಾಗಲೇ ಅಮೆರಿಕ ದಲ್ಲಿ ನೀರವ್ ದಿವಾಳಿ ಘೋಷಣೆ ಅರ್ಜಿ ಸಲ್ಲಿಸಿ ದ್ದಾರೆ. ಈ ಹಿನ್ನೆಲೆಯಲ್ಲಿ ವಹಿವಾಟು ಮುಂದುವರಿಸುವುದಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಕೋರ್ಟ್ ಆದೇಶ ನೀಡಿದೆ. ಇದು ಅಮೆರಿಕ ನ್ಯಾಯಾಲಯದ ವ್ಯಾಪ್ತಿಯಲ್ಲಿನ ನೀರವ್ ಸ್ವತ್ತಿಗೆ ಮಾತ್ರ ಅನ್ವಯವಾಗುತ್ತಿದೆ ಎನ್ನಲಾಗಿದ್ದು, ಭಾರತದಲ್ಲಿ ಸಿಬಿಐ ಸೇರಿದಂತೆ ಇತರ ತನಿಖಾ ಸಂಸ್ಥೆಗಳು ನಡೆಸುತ್ತಿರುವ ವಿಚಾ ರಣೆ ಮೇಲೆ ಯಾವುದೇ ಪರಿಣಾಮ ಬೀರದು. ಆದರೆ ವಿದೇಶದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಪ್ರಯತ್ನ ಈ ಆದೇಶದಿಂದ ವಿಫಲವಾದಂತಾಗಿದೆ.
ದಕ್ಷಿಣ ಭಾರತದಲ್ಲೇ ಹೆಚ್ಚು ಬ್ಯಾಂಕಿಂಗ್ ಅವ್ಯ ವ ಹಾರ: ಬ್ಯಾಂಕ್ ಅಧಿಕಾರಿಗಳೇ ಶಾಮೀಲಾಗಿ ನಡೆಸಿರುವ ಅವ್ಯವಹಾರ ಪ್ರಕರಣಗಳಲ್ಲಿ ದಕ್ಷಿಣ ಭಾರತವೇ ಮುಂಚೂಣಿಯಲ್ಲಿದೆ ಎಂದು ಆರ್ಬಿಐ ದತ್ತಾಂಶ ಆಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಎಪ್ರಿಲ್ 2013ರಿಂದ ಜೂನ್ 2016ರ ವರೆಗಿನ ದತ್ತಾಂ ಶದ ಪ್ರಕಾರ, ಬ್ಯಾಂಕ್ ಉದ್ಯೋಗಿಗಳೂ ಶಾಮೀಲಾಗಿರುವ 1232 ಮೋಸದ ಪ್ರಕರಣಗಳು ದಾಖಲಾಗಿದ್ದು, ಇದರಿಂದ 2450 ಕೋಟಿ ರೂ. ನಷ್ಟವಾಗಿದೆ.ಈ ಎಲ್ಲ ಪ್ರಕರಣಗಳೂ 1ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತದ್ದಾಗಿದೆ. ದಕ್ಷಿಣ ಭಾರತದ ರಾಜ್ಯಗಳ ಪೈಕಿ ಮಹಾರಾಷ್ಟ್ರದಲ್ಲಿ ಶೇ. 49ರಷ್ಟು ಪ್ರಕರಣಗಳು ಕಂಡುಬಂದಿದೆ. ಆದರೆ ಮೊತ್ತ ಶೇ.19ರಷ್ಟಾಗಿದೆ (462 ಕೋಟಿ ರೂ.). ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ನಂತರದ ಸ್ಥಾನದಲ್ಲಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ