ಭಾರತದೊಂದಿಗೆ ಮಾತುಕತೆಗೆ ವಾತಾವರಣ ಸೂಕ್ತವಾಗಿಲ್ಲ: ಪಾಕ್
Team Udayavani, May 13, 2022, 9:15 PM IST
ಇಸ್ಲಾಮಾಬಾದ್:”ಫಲಪ್ರದ, ರಚನಾತ್ಮಕ ಮಾತುಕತೆಗೆ ಸೂಕ್ತ ವಾತಾವರಣದ ಕೊರತೆಯಿರುವ ಕಾರಣ ಸದ್ಯಕ್ಕೆ ಭಾರತದೊಂದಿಗೆ ಯಾವುದೇ ರೀತಿಯ¬ ಮಾತುಕತೆ ನಡೆಸುವುದಿಲ್ಲ’ ಎಂದು ಪಾಕಿಸ್ತಾನ ಗುರುವಾರ ಸ್ಪಷ್ಟಪಡಿಸಿದೆ.
ಪಾಕಿಸ್ತಾನದಲ್ಲಿ ಸರ್ಕಾರ ಬದಲಾಗಿರುವುದಲ್ಲದೇ, 2 ವರ್ಷಗಳ ಬಳಿಕ ಪಾಕಿಸ್ತಾನವು ತನ್ನ ದೆಹಲಿಯ ಹೈಕಮಿಷನ್ನಲ್ಲಿ ವ್ಯಾಪಾರ ಸಚಿವರನ್ನು ನೇಮಕ ಮಾಡಲು ನಿರ್ಧರಿಸಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವೆ ಸಂಬಂಧ ಸುಧಾರಣೆಯಾಗಲಿದೆಯೇ ಎಂಬ ಪ್ರಶ್ನೆ ಮೂಡಿತ್ತು. ಆದರೆ, ಪಾಕ್ ವಿದೇಶಾಂಗ ಇಲಾಖೆ ವಕ್ತಾರ ಅಸೀಮ್ ಇಫ್ತಿಕಾರ್ ಅವರ ಈ ಹೇಳಿಕೆಯು ಎಲ್ಲ ಪ್ರಶ್ನೆಗಳಿಗೂ ತೆರೆ ಎಳೆದಿದೆ.
ಭಾರತದೊಂದಿಗಿನ ಸಂಬಂಧ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿರುವ ಇಫ್ತಿಕಾರ್, “ಪಾಕಿಸ್ತಾನದ ಬಹುತೇಕ ಎಲ್ಲ ಸರ್ಕಾರಗಳೂ ಭಾರತದೊಂದಿಗಿನ ವಿವಾದಗಳನ್ನು ಶಾಂತಿಯುತವಾಗಿ ಇತ್ಯರ್ಥಗೊಳಿಸುವಂಥ ನೀತಿಯನ್ನೇ ಪಾಲಿಸುತ್ತಾ ಬಂದಿವೆ. ಈ ವಿಚಾರದಲ್ಲಿ ರಾಷ್ಟ್ರೀಯ ಮಟ್ಟದಲ್ಲೇ ಒಮ್ಮತವಿದೆ. ರಾಜತಾಂತ್ರಿಕತೆಯಲ್ಲಿ, ನೀವು ನೇರವಾಗಿ ಬಾಗಿಲು ಮುಚ್ಚಲು ಆಗುವುದೂ ಇಲ್ಲ. ಆದರೆ, ಭಾರತದೊಂದಿಗೆ ಮಾತುಕತೆಗೆ ಇನ್ನೂ ಸೂಕ್ತ ವಾತಾವರಣ ನಿರ್ಮಾಣವಾಗಿಲ್ಲ’ ಎಂದಿದ್ದಾರೆ.
ಭಯೋತ್ಪಾದನೆ ಹಾಗೂ ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಮಾತ್ರ ಪಾಕ್ನೊಂದಿಗೆ ಮಾತುಕತೆ ನಡೆಯಲು ಸಾಧ್ಯ ಎಂದು ಭಾರತ ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್ನಲ್ಲಿ ಪೋಸ್ಟ್, ಲೈಕ್ ರಿಪ್ಲೈ ಗೆ ಅವಕಾಶ
Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್ ಮೇಲೆ ಹಲವು ರಾಷ್ಟ್ರಗಳ ಒತ್ತಡ