ಇನ್ನು ಶೀತಲ ಸಮರ ಬೇಡ; ಅಮೆರಿಕ, ಚೀನ ಅಧ್ಯಕ್ಷರ ಸಹಮತ

2 ವರ್ಷ ಬಳಿಕ ಇಬ್ಬರು ನಾಯಕರ ಭೇಟಿ

Team Udayavani, Nov 15, 2022, 7:00 AM IST

ಇನ್ನು ಶೀತಲ ಸಮರ ಬೇಡ; ಅಮೆರಿಕ, ಚೀನ ಅಧ್ಯಕ್ಷರ ಸಹಮತ

ಬಾಲಿ: “ಇನ್ನು ಶೀತಲ ಸಮರ ಬೇಡ. ಮಿತ್ರತ್ವವೇ ಬೇಕು’- ಹೀಗೆಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಪ್ರತಿಪಾದಿಸಿದ್ದಾರೆ. ಇಂಡೋನೇಷ್ಯಾದ ಬಾಲಿಯಲ್ಲಿ ಸೋಮವಾರ ಇಬ್ಬರು ನಾಯಕರು ಪರಸ್ಪರ ಭೇಟಿಯಾಗಿದ್ದಾರೆ.

ತೈವಾನ್‌ ಬಿಕ್ಕಟ್ಟು ಮತ್ತು ಕೊರೊನಾ ಸೋಂಕು ಜಗತ್ತಿಗೆ ಹರಡಿಸಿದ ವಿಚಾರದಲ್ಲಿ ಪರಸ್ಪರ ತೀವ್ರ ಭಿನ್ನ ಧೋರಣೆಯನ್ನು ಹೊಂದಿದ್ದ ನಾಯಕರು ಬಿಗುವಿನ ವಾತಾವರಣದ ಕಾರ್ಮೋಡ ತಗ್ಗಿಸಲು ಮುಂದಾಗಿದ್ದಾರೆ.

ಜೋ ಬೈಡೆನ್‌ ಅವರು ಅಮೆರಿಕದ ಅಧ್ಯಕ್ಷರಾಗಿ 2021ರಲ್ಲಿ ಪದಗ್ರಹಣ ಮಾಡಿಕೊಂಡ ಬಳಿಕ ಚೀನ ಅಧ್ಯಕ್ಷರ ಜತೆಗೆ ಇದು ಮೊದಲ ಖುದ್ದು ಭೇಟಿ ಇದಾಗಿದೆ. ಬರೋಬ್ಬರಿ ಮೂರು ಗಂಟೆಗಳ ಕಾಲ ಎರಡೂ ದೇಶಗಳ ಅಧ್ಯಕ್ಷರು ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಇಬ್ಬರು ನಾಯಕರು ಮಾಸ್ಕ್ ಧರಿಸದೆ, ಹಸನ್ಮುಖರಾಗಿ ಮಾತುಕತೆ ನಡೆಸಿದರು ಮತ್ತು ಫೋಟೋ ತೆಗೆಸಿಕೊಂಡಿದ್ದಾರೆ ಕೂಡ.

ಮುಕ್ತ ಮಾತುಕತೆ:
ಚೀನ ಅಧ್ಯಕ್ಷರ ಜತೆಗೆ ಮುಕ್ತ ರೀತಿಯ ಸಂಪರ್ಕ ಸಾಧಿಸಲು ಬಯಸುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಹೇಳಿದ್ದಾರೆ. ಪರಸ್ಪರ ಸಹಕಾರಕ್ಕಾಗಿ ಸ್ಪರ್ಧೆಯ ಧೋರಣೆಯನ್ನು ಕೈಬಿಡಬೇಕು. ಅದರ ಮೂಲಕ ಪರಿಹಾರ ಕಾಣದ ಸಮಸ್ಯೆಗಳ ಬಗ್ಗೆ ಒಟ್ಟಾಗಿ ಕೆಲಸ ಮಾಡಬೇಕು ಎಂದು ಪ್ರತಿಪಾದಿಸಿದ್ದಾರೆ ಬೈಡೆನ್‌.

ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಜತೆಗೆ ತೈವಾನ್‌ ಬಿಕ್ಕಟ್ಟಿನ ಬಗ್ಗೆಯೂ ಅಧ್ಯಕ್ಷ ಬೈಡೆನ್‌ ಚರ್ಚೆ ನಡೆಸಿದ್ದಾರೆ. ಎರಡೂ ರಾಷ್ಟ್ರಗಳು ಹೊಂದಿರುವ ಭಿನ್ನಾಭಿಪ್ರಾಯಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಚೀನದ ಕ್ಸಿನ್‌ಜಿಯಾಂಗ್‌ ಪ್ರಾಂತ್ಯದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರವನ್ನೂ ಜೋ ಬೈಡೆನ್‌ ಉಲ್ಲೇಖಿಸಿದ್ದಾರೆ. ಇದರ ಜತೆಗೆ ಚೀನ ನಿಯಂತ್ರಿತ ಹಾಂಕಾಂಗ್‌ನಲ್ಲಿ ಕೂಡ ದಮನಕಾರಿ ನೀತಿ ಅನುಸರಿಸುತ್ತಿರುವ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಜತೆಗೆ ಉತ್ತರ ಕೊರಿಯಾದ ದುಸ್ಸಾಹಸಗಳ ಬಗ್ಗೆ ಕೂಡ ಚರ್ಚೆ ಮಾಡಲಾಗಿದೆ.

ಅಣ್ವಸ್ತ್ರ ಸಮರ ಬೇಡ:
ಉಕ್ರೇನ್‌ ಸೇರಿದಂತೆ ಜಗತ್ತಿನ ಯಾವುದೇ ಭಾಗದಲ್ಲಿ ಪರಮಾಣು ಶಸ್ತ್ರಾಸ್ತ್ರ ಬಳಕೆ ಮಾಡುವುದು ಬೇಡ. ಈ ನಿಟ್ಟಿನಲ್ಲಿ ಅಣ್ವಸ್ತ್ರ ಸಮರ ಉಂಟಾಗದಂತೆ ತಡೆಯಬೇಕಾಗಿದೆ ಎಂದು ಇಬ್ಬರು ನಾಯಕರು ಪ್ರತಿಪಾದಿಸಿದ್ದಾರೆ. ಒಂದು ವೇಳೆ ಅಂಥ ಸಮರ ಶುರುವಾದರೂ ಯಾರಿಗೂ ಅದರಿಂದ ಜಯ ಸಾಧ್ಯವೇ ಇಲ್ಲ ಎಂಬುದನ್ನು ಇಬ್ಬರು ನಾಯಕರು ಪ್ರತಿಪಾದಿಸಿದ್ದಾರೆ. ಜತೆಗೆ ಉಕ್ರೇನ್‌ ಪರಿಸ್ಥಿತಿ ಕಳವಕಾರಿ ಎಂದಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಉಕ್ರೇನ್‌ ವಿರುದ್ಧ ಅಣ್ವಸ್ತ್ರ ಪ್ರಯೋಗ ನಡೆಸಲಿದ್ದಾರೆ ಎಂಬ ಹಲವು ವದಂತಿಗಳ ನಡುವೆಯೇ ಚೀನಾ ಮತ್ತು ಅಮೆರಿಕ ಅಧ್ಯಕ್ಷರ ಭೇಟಿಯಲ್ಲಿ ಈ ಅಂಶ ಪ್ರಧಾನವಾಗಿ ಪ್ರಸ್ತಾಪವಾಗಿದೆ.

ಪ್ರಪಂಚದ ನಿರೀಕ್ಷೆ:
ಚೀನ ಮತ್ತು ಅಮೆರಿಕ ನಡುವಿನ ಭಿನ್ನಾಭಿಪ್ರಾಯಗಳು ಮುಕ್ತಾಯವಾಗಬೇಕು ಎಂದು ಪ್ರಪಂಚ ಬಯಸುತ್ತಿದೆ ಎಂದು ಚೀನಾ ಅಧ್ಯಕ್ಷ ಕ್ಸಿಜಿನ್‌ಪಿಂಗ್‌ ಹೇಳಿದ್ದಾರೆ. ನಮ್ಮ ನಡುವಿನ ಭೇಟಿ ಜಗತ್ತಿನ ಗಮನ ಸೆಳೆದಿದೆ. ವಿಶ್ವಶಾಂತಿಗಾಗಿ ಎರಡೂ ದೇಶಗಳ ನಡುವಿನ ಬಾಂಧವ್ಯ ದೃಢವಾಗಬೇಕಾಗಿದೆ. ಅದಕ್ಕಾಗಿ ಎರಡೂ ದೇಶಗಳ ನಡುವೆ ಶೀತಲ ಸಮರ ತಗ್ಗಬೇಕು ಎಂದು ಪ್ರತಿಪಾದಿಸಿದ್ದಾರೆ ಕ್ಸಿಜಿನ್‌ಪಿಂಗ್‌.

ರಷ್ಯಾ ವಿದೇಶಾಂಗ ಸಚಿವಗೆ ಅನಾರೋಗ್ಯ
ಜಿ20 ರಾಷ್ಟ್ರಗಳ ಸಮ್ಮೇಳನದಲ್ಲಿ ಭಾಗವಹಿಸಲು ಬಾಲಿಗೆ ಆಗಮಿಸಿದ್ದ ರಷ್ಯಾ ವಿದೇಶಾಂಗ ಸಚಿವ ಸರ್ಗೆ ಲಾವ್ರೋ ಅವರಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಾಸ್ಕೋದಲ್ಲಿ ರಷ್ಯಾ ಸರ್ಕಾರ ನೀಡಿದ ಮಾಹಿತಿ ಪ್ರಕಾರ ಅಂಥಾ ಬೆಳವಣಿಗೆಯೇ ನಡೆದಿಲ್ಲ ಎಂದಿದೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.