ಲಂಕಾ ತುರ್ತು ಪರಿಸ್ಥಿತಿ ಮುಂದುವರಿಕೆ ಇಲ್ಲ: ಕಾನೂನು ಸಚಿವ
Team Udayavani, Mar 13, 2018, 3:14 PM IST
ಕೊಲಂಬೋ : ದೇಶದಲ್ಲಿ ಹೇರಲಾಗಿದ್ದ ಹತ್ತು ದಿನಗಳ ತುರ್ತು ಪರಿಸ್ಥಿತಿಯನ್ನು ಮುಂದುವರಿಸುವುದಿಲ್ಲ ಎಂದು ಲಂಕೆಯ ಕಾನೂನು ಮತ್ತು ಸುವ್ಯವಸ್ಥೆ ಸಚಿವರು ಹೇಳಿದ್ದಾರೆ.
ಕ್ಯಾಂಡಿ ಜಿಲ್ಲೆಯಲ್ಲಿ ಸ್ಫೋಟಗೊಂಡಿದ್ದ ಕೋಮು ಗಲಭೆ, ಹಿಂಸೆಯನ್ನು ತಹಬಂದಿಗೆ ತರಲು ದೇಶಾದ್ಯಂತ ಹೇರಲಾಗಿದ್ದ ಹತ್ತು ದಿನಗಳ ತುರ್ತು ಪರಿಸ್ಥಿತಿ ಇದೇ ಮಾರ್ಚ್ 15ರಂದು ಕೊನೆಗೊಳ್ಳುತ್ತದೆ. ಇದನ್ನು ಪುನಃ ವಿಸ್ತರಿಸುವ ಅಗತ್ಯವಿಲ್ಲ ಎಂದು ಸಚಿವ ರಂಜಿತ್ ಮದ್ದುಮಬಂದ್ರ ಹೇಳಿದರು.
ಸಿಂಹಳೀಯ ಬೌದ್ಧರು ಮತ್ತು ಮುಸ್ಲಿಮರ ನಡುವೆ ನಡೆದಿದ್ದ ಕೋಮು ಸಂಘರ್ಷದಲ್ಲಿ ಇಬ್ಬರು ಮಡಿದಿದ್ದರು. ಹಲವಾರು ಮನೆ, ಅಂಗಡಿ, ಮಸೀದಿಗಳು ಹಾನಿಗೀಡಾಗಿದ್ದವು.
ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರು ಕ್ಯಾಂಡಿ ಕೋಮು ಗಲಭೆಯ ಬಗ್ಗೆ ತನಿಖೆ ನಡೆಸಲು ಮೂವರು ಸದಸ್ಯರ ಸಮಿತಿಯನ್ನು ನೇಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ