ಭಾರತಕ್ಕೆ ಷರತ್ತು ಹಾಕಲು ಯಾವ ಸೂಪರ್ ಪವರ್ ಗೂ ಸಾಧ್ಯವಿಲ್ಲ:ಭಾರತವನ್ನು ಹಾಡಿಹೊಗಳಿದ ಇಮ್ರಾನ್
Team Udayavani, Apr 9, 2022, 9:13 AM IST
ಇಸ್ಲಮಾಬಾದ್: “ಯಾವುದೇ ಸೂಪರ್ ಪವರ್ ಕೂಡಾ ಭಾರತಕ್ಕೆ ಷರತ್ತುಗಳನ್ನು ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಅವಿಶ್ವಾಸ ನಿರ್ಣಯದ ಮೇಲೆ ಮತ ಚಲಾಯಿಸುವ ಮೊದಲು ತಮ್ಮ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಇಮ್ರಾನ್, “ಜನರ ಹಿತಾಸಕ್ತಿಗಳನ್ನು ಉಲ್ಲೇಖಿಸಿ ರಷ್ಯಾ-ಉಕ್ರೇನ್ ಯುದ್ಧದಲ್ಲಿ ಯಾವುದೇ ಪಕ್ಷವನ್ನು ತೆಗೆದುಕೊಳ್ಳಲು ನಿರಾಕರಿಸಿದಾಗ ಯಾವುದೇ ದೇಶವು ಭಾರತದ ವಿರುದ್ಧ ನಿಲ್ಲಲು ಸಾಧ್ಯವಿಲ್ಲ. ಯುರೋಪಿಯನ್ ಯೂನಿಯನ್ ರಾಜತಾಂತ್ರಿಕರು ಪಾಕಿಸ್ತಾನ ರಷ್ಯಾದ ವಿರುದ್ಧ ಮಾತನಾಡಬೇಕು ಎಂದು ಒತ್ತಡ ಹೇರುತ್ತಲೇ ಇದ್ದರು. ಆದರೆ ಭಾರತ ಸಾರ್ವಭೌಮ ರಾಷ್ಟ್ರವಾಗಿರುವುದರಿಂದ ಭಾರತಕ್ಕೆ ಅದನ್ನು ಹೇಳುವ ಧೈರ್ಯ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
“ನಾನು ಬೇರೆ ದೇಶಕ್ಕಾಗಿ ಜನರನ್ನು ಸಾಯಲು ಬಿಡಲಾರೆ. ನಮ್ಮ ವಿದೇಶಾಂಗ ನೀತಿ ಸಾರ್ವಭೌಮವಾಗಿರಬೇಕು,” ಎಂದು ಅವರು ಒತ್ತಿ ಹೇಳಿದರು.
“ನನ್ನ ರಷ್ಯಾ ಭೇಟಿಯಿಂದ ಯುಎಸ್ ಅತೃಪ್ತಿ ಹೊಂದಿತ್ತು. ಮಿತ್ರ ರಾಷ್ಟ್ರವಾಗಿದ್ದರೂ ಪಾಶ್ಚಿಮಾತ್ಯ ದೇಶವು (ಅಮೆರಿಕ) ಪಾಕಿಸ್ತಾನದಲ್ಲಿ 400 ಡ್ರೋನ್ ದಾಳಿಗಳನ್ನು ನಡೆಸಿತ್ತು. ಪ್ರತಿಪಕ್ಷಗಳೊಂದಿಗೆ ಶಾಮೀಲಾಗಿ ತನ್ನ ಸರ್ಕಾರವನ್ನು ಉರುಳಿಸಲು ಸಕ್ರಿಯವಾಗಿ ಸಂಚು ರೂಪಿಸಿದೆ ಎಂದು ಇಮ್ರಾನ್ ಖಾನ್ ಕಿಡಿಕಾರಿದರು.
ಇದನ್ನೂ ಓದಿ:ಅವಿಶ್ವಾಸ ಗೊತ್ತುವಳಿ ಎದುರಿಸಿ : ಲಂಕಾ ಸರಕಾರಕ್ಕೆ ವಿಪಕ್ಷಗಳ ಎಚ್ಚರಿಕೆ
“ಇಮ್ರಾನ್ ಖಾನ್ ಅವರನ್ನು ಪದಚ್ಯುತಗೊಳಿಸಿದರೆ ಮಾತ್ರ ಯುಎಸ್ ಪಾಕಿಸ್ತಾನವನ್ನು ಕ್ಷಮಿಸುತ್ತದೆ ಎಂದು ಅಮೆರಿಕದ ಪ್ರತಿನಿಧಿಯೊಬ್ಬರು ಹೇಳಿದ್ದಾರೆ” ಎಂದು ಇಮ್ರಾನ್ ಖಾನ್ ತಮ್ಮ ಆರೋಪವನ್ನು ಮುಂದುವರೆಸಿದರು. ಕೆಲವು ವಿಚಾರಗಳನ್ನು ಸಾರ್ವಜನಿಕರಿಗೆ ಮತ್ತು ಮಾಧ್ಯಮಗಳಿಗೆ ಬಹಿರಂಗಪಡಿಸಲು ಸಾಧ್ಯವಿಲ್ಲ. ಯಾಕೆಂದರೆ ಅವುಗಳು “ಉನ್ನತ ರಹಸ್ಯವಾಗಿದ್ದು, ಒಂದು ವೇಳೆ ಸೋರಿಕೆಯಾದಲ್ಲಿ, ಪಾಕಿಸ್ತಾನದ ಭದ್ರತೆಗೆ ಸಂಕಷ್ಟವಾಗುತ್”ದೆ” ಎಂದು ಇಮ್ರಾನ್ ಹೇಳಿದರು.
ತಮ್ಮ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸುವ ರಾಷ್ಟ್ರೀಯ ಅಸೆಂಬ್ಲಿ ಡೆಪ್ಯೂಟಿ ಸ್ಪೀಕರ್ ಅವರ ವಿವಾದಾತ್ಮಕ ನಿರ್ಧಾರದ ಕುರಿತು ಸುಪ್ರೀಂ ಕೋರ್ಟ್ನ ತೀರ್ಪಿನ ಬಗ್ಗೆ ನಿರಾಶೆಯನ್ನು ವ್ಯಕ್ತಪಡಿಸುತ್ತಾ, ಪಾಕಿಸ್ತಾನದಲ್ಲಿ “ಆಮದು ಮಾಡಿಕೊಂಡ ಸರ್ಕಾರ” ವನ್ನು ಒಪ್ಪಿಕೊಳ್ಳುವುದಿಲ್ಲ ಎಂದರು.
“ಸುಪ್ರೀಂ ಕೋರ್ಟ್ ಕನಿಷ್ಠ ವಿದೇಶಿ ಪಿತೂರಿಯ ಪುರಾವೆಗಳನ್ನು ನೋಡಬೇಕು ಮತ್ತು ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಬೇಕು” ಎಂದು ಇಮ್ರಾನ್ ಖಾನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ