ನನ್ನ ಹತ್ಯೆ ಮಾಡಿ, ಆದರೆ ಮಕ್ಕಳನ್ನ ಕೊಲ್ಲದಿರಿ : ಯೋಧರ ಎದುರು ಗೋಗರೆದ ಕ್ರೈಸ್ತ ಸನ್ಯಾಸಿನಿ


Team Udayavani, Mar 10, 2021, 5:10 PM IST

kitra

ಮ್ಯಾನ್ಮಾರ್ : ನನ್ನ ಪ್ರಾಣ ತೆಗೆಯಿರಿ, ಆದರೆ ಮಕ್ಕಳ ಮಾರಣ ಹೋಮ ಮಾಡದಿರಿ ಎಂದು ಕ್ರೈಸ್ತ ಸನ್ಯಾಸಿನಿಯೋರ್ವಳು ಯೋಧರ ಎದುರು ಮಂಡಿಯೂರಿ ಅಂಗಲಾಚಿರುವ ಘಟನೆ ಉತ್ತರ ಮ್ಯಾನ್ಮಾರ್ ದಲ್ಲಿ ನಡೆದಿದೆ.

ದೇಶದ ಆಡಳಿತ ತನ್ನ ಕೈಗೆ ತೆಗೆದುಕೊಂಡಿರುವ ಸೇನೆಯ ವಿರುದ್ಧ ಮ್ಯಾನ್ಮಾರ್ ದಲ್ಲಿ ಹಿಂಸಾಚಾರ ಮುಗಿಲು ಮುಟ್ಟಿದೆ. ಪ್ರಜಾಪ್ರಭುತ್ವ ಉಳಿಸಲು ಬೀದಿಗಿಳಿದ ನಾಗರಿಕರ ಹೋರಾಟ ಹತ್ತಿಕ್ಕಲು ಸೇನೆ ಕಸರತ್ತು ನಡೆಸಿದೆ. ಸೇನೆಯ ವಿರುದ್ಧ ಪ್ರತಿಭಟಿಸುತ್ತಿರುವವರ ವಿರುದ್ಧ ಗುಂಡಿನ ದಾಳಿ ಕೂಡ ನಡೆಸಲಾಗುತ್ತಿದೆ.

ಸೋಮವಾರ ಬೀದಿಯೊಂದರಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಯೋಧರು ದಾಳಿ ನಡೆಸಿದ್ದರು. ಪ್ರತಿಭಟನಾಕಾರರನ್ನು ತೆರವುಗೊಳಿಸಲು ಗುಂಡಿನ ಪ್ರಯೋಗ ನಡೆಸಿದ್ದರು. ಈ ವೇಳೆ ಸನ್ಯಾಸಿನಿ ಆನ್ ರೋಸ್  ತವಾಂಗ್ , ನನ್ನ ಮೇಲೆ ಬೇಕಾದರೆ ಗುಂಡು ಹಾರಿಸಿ, ಆದರೆ ಮಕ್ಕಳನ್ನು ಕೊಲ್ಲಬೇಡಿ ಎಂದು ಮಂಡಿಯೂರಿ ಮನವಿ ಮಾಡಿಕೊಂಡಿದ್ದಾರೆ.

ಘಟನೆ ಬಗ್ಗೆ ಮಾಧ್ಯಮವೊಂದಕ್ಕೆ ಮಾತಾಡಿರುವ ತವಾಂಗ್, ಕ್ಲಿನಿಕ್‍ನಿಂದ ಹೊರ ಬಂದ ನನಗೆ ಬೀದಿಯಲ್ಲಿ ರಕ್ತ ಚೆಲ್ಲಾಡಿದ್ದನ್ನು ನೋಡಿ ಆಘಾತವಾಯಿತು. ಕೈಯಲ್ಲಿ ಗನ್ ಹಿಡಿದು ಪ್ರತಿಭಟನಾಕಾರರತ್ತ ನುಗ್ಗುತ್ತಿದ್ದ ಸೇನೆ ಬಳಿ ಓಡಿ ಹೋಗಿ ಬೇಡಿಕೊಂಡೆ. ಬೇಕಾದರೆ ನನ್ನ ಹತ್ಯೆ ಮಾಡಿ, ಆದರೆ ಪುಟ್ಟ ಮಕ್ಕಳ ಪ್ರಾಣ ತೆಗೆಯಬೇಡಿ ಎಂದು ಅಂಗಲಾಚಿದೆ. ಸೇನೆಯ ಹಿರಿಯ ಅಧಿಕಾರಿಗಳು ಭರವಸೆ ನೀಡೋವರೆಗೆ ನಾ ಅಲ್ಲಿಯೇ ಮಂಡಿಯೂರಿ ಕುಳಿತುಕೊಂಡೆ ಎಂದರು.

ಸೋಮವಾರ ನಡೆದ ಹಿಂಸಾಚಾರದಲ್ಲಿ ಇಬ್ಬರು ಪ್ರತಿಭಟನಾಕಾರರು ಪ್ರಾಣ ಕಳೆದುಕೊಂಡಿದ್ದಾರೆ. ಯೋಧರ ಗುಂಡಿನ ಹೊಡೆತಕ್ಕೆ ಪುಟ್ಟ ಮಗುವಿನ ತಲೆ ಛಿದ್ರವಾಗಿ, ಪ್ರಾಣ ಪಕ್ಷಿ ಹಾರಿಹೋಯಿತು. ಗಾಯಗೊಂಡ ಕೆಲವರನ್ನು ತನ್ನ ಕ್ಲಿನಿಕ್‍ಗೆ ಕರೆತಂದು ಚಿಕಿತ್ಸೆ ನೀಡಿದ್ದಾಗಿ ತವಾಂಗ್ ಹೇಳಿದ್ದಾರೆ.

ಸನ್ಯಾಸಿನಿ ಯೋಧರನ್ನು ಬೇಡಿಕೊಳ್ಳುತ್ತಿರುವ ವಿಡಿಯೋ ಹಾಗೂ ಫೋಟೋ ಎಲ್ಲೆಡೆ ಹರಿದಾಡುತ್ತಿದ್ದು, ಅವರ ಕಳಕಳಿಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

A nun went down on her knees in front of policemen in a northern Myanmar town and pleaded with them to stop shooting protesters against last month’s coup https://t.co/k3TwNAB0DI 1/4 pic.twitter.com/9PASCUvTTo

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.