ಅಮೆರಿಕ ದಿಢೀರ್ ವೈಮಾನಿಕ ದಾಳಿ; ಇರಾನ್-ಅಮೆರಿಕ ನಡುವೆ ಯುದ್ಧಭೀತಿ; ತೈಲ ಬೆಲೆ ಏರಿಕೆ
ಜನರಲ್ ಖಾಸಿಂ ಸೋಲೆಮನಿ ಹತ್ಯೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ
Team Udayavani, Jan 3, 2020, 10:39 AM IST
ವಾಷಿಂಗ್ಟನ್: ಅಮೆರಿಕ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಮಿಲಿಟರಿಯ ಜನರಲ್ ಖಾಸಿಂ ಸೋಲೆಮನಿ ಹಾಗೂ ಹಲವಾರು ಮಿಲಿಟರಿ ಮುಖಂಡರು ಹತ್ಯೆಗೀಡಾದ ಬೆನ್ನಲ್ಲೇ ಶುಕ್ರವಾರ ಜಾಗತಿಕ ತೈಲ ಬೆಲೆಯಲ್ಲಿ ಶೇ.4ರಷ್ಟು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಕಚ್ಚಾ ತೈಲ ಬೆಲೆ 3 ಡಾಲರ್ ನಷ್ಟು ಏರಿಕೆಯಾಗಿದ್ದು ಪ್ರತಿ ಬ್ಯಾರೆಲ್ ಬೆಲೆ ಈಗ 69.16 ಡಾಲರ್ ಗೆ ಏರಿಕೆಯಾಗಿದೆ. ಇದು ಕಳೆದ ಸೆಪ್ಟೆಂಬರ್ ನಂತರ ಅತೀ ಹೆಚ್ಚಿನ ಏರಿಕೆಯಾಗಿದೆ ಎಂದು ವರದಿ ವಿವರಿಸಿದೆ.
ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ ಮಿಡಿಯೇಟ್ (ಡಬ್ಲ್ಯುಟಿಐ)ನ ಕಚ್ಚಾ ತೈಲ ಬೆಲೆ 1.76ರಿಂದ 2.9ಡಾಲರ್ ನಷ್ಟು ಹೆಚ್ಚಳವಾಗಿದ್ದು, ಬ್ಯಾರೆಲ್ ಗೆ 62.92 ಡಾಲರ್ ಗೆ ಏರಿಕೆಯಾಗಿದೆ.
ಶುಕ್ರವಾರ ಮುಂಜಾನೆ ಅಮೆರಿಕ ಸೇನಾಪಡೆ ಇರಾಕ್ ರಾಜಧಾನಿ ಬಾಗ್ದಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಮೇಜರ್ ಜನರಲ್ ಖಾಸಿಂ ಸೋಲೆಮನಿ ಹಾಗೂ ಇರಾನ್ ಮಿಲಿಟರಿ ಕಮಾಂಡರ್ ಅಬು ಮಹ್ದಿ ಸೇರಿದಂತೆ ಹಲವು ಅಧಿಕಾರಿಗಳು ಸಾವನ್ನಪ್ಪಿರುವುದಾಗಿ ಇರಾಕ್ ಮಿಲಿಟರಿ ವಕ್ತಾರ ರಾಯಟರ್ಸ್ ಗೆ ತಿಳಿಸಿದ್ದಾರೆ.
ದಾಳಿಗೆ ಟ್ರಂಪ್ ಆದೇಶ:
ಎಎಫ್ ಪಿ ನ್ಯೂಸ್ ಏಜೆನ್ಸಿ ವರದಿ ಪ್ರಕಾರ. ಇರಾನ್ ಮಿಲಿಟರಿ ಜನರಲ್ ಖಾಸಿಂ ಸೋಲೆಮನಿ ಹತ್ಯೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ನೀಡಿರುವುದಾಗಿ ತಿಳಿಸಿದೆ. ಇರಾನ್ ಸಂಭಾವ್ಯ ದಾಳಿ ನಡೆಸದಂತೆ ಗುರಿಯಾಗಿರಿಸಿಕೊಂಡು ಅಮೆರಿಕ ಪಡೆ ದಾಳಿ ನಡೆಸಿದೆ ಎಂದು ಪೆಂಟಗಾನ್ ಪ್ರಕಟಣೆಯಲ್ಲಿ ತಿಳಿಸಿದೆ. ಇರಾನ್ ಮೇಲೆ ದಾಳಿಗೆ ಡೊನಾಲ್ಡ್ ಟ್ರಂಪ್ ಆದೇಶ ನೀಡಿರುವುದನ್ನು ಶ್ವೇತಭವನ ಖಚಿತಪಡಿಸಿದೆ.
ಯುದ್ಧಭೀತಿ:
ಇರಾಕ್ ನ ಅಮೆರಿಕ ರಾಯಭಾರಿ ಕಚೇರಿಗೆ ನುಗ್ಗಿ ಇರಾನ್ ಬೆಂಬಲಿಗರು ಪ್ರತಿಭಟನೆ ನಡೆಸಿದ ಕೆಲವೇ ದಿನಗಳ ನಂತರ ಅಮೆರಿಕ ಪ್ರತೀಕಾರ ಎಂಬಂತೆ ವೈಮಾನಿಕ ದಾಳಿ ನಡೆಸಿ ಇರಾನ್ ಮಿಲಿಟರಿ ಜನರಲ್ ಸೇರಿದಂತೆ ಹಲವು ಅಧಿಕಾರಿಗಳನ್ನು ಹತ್ಯೆಗೈದಿರುವ ನಿಟ್ಟಿನಲ್ಲಿ ಜಾಗತಿಕವಾಗಿ ಉಭಯ ದೇಶಗಳ ನಡುವೆ ಯುದ್ಧಭೀತಿ ನಡೆಯಲಿದೆ ಎಂಬ ವಿಶ್ಲೇಷಣೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ