ಅಫ್ಘಾನ್ ಗೆ ಮರಳಿದ ಒಸಾಮ ಬಿನ್ ಲಾಡೆನ್ ನ ಮಾಜಿ ಆಪ್ತ ಸಹಾಯಕ ಅಮಿನ್ ಉಲ್ ಹಖ್
Team Udayavani, Aug 30, 2021, 3:57 PM IST
ಕಾಬೂಲ್: ಅಫ್ಘಾನಿಸ್ಥಾನ ದೇಶವನ್ನು ತಾಲಿಬಾನ್ ಸಂಘಟನೆ ವಶಕ್ಕೆ ಪಡೆದ ಕೆಲ ದಿನಗಳ ಬಳಿಕ ಅಲ್ ಖೈದಾ ನಾಯಕ, ಒಸಾಮ ಬಿನ್ ಲಾಡೆನ್ ಆಪ್ತ ಅಮಿನ್ ಉಲ್ ಹಖ್ ಮರಳಿ ಅಫ್ಘಾನಿಸ್ಥಾನಕ್ಕೆ ಬಂದಿದ್ದಾರೆ ಎಂದು ವರದಿ ತಿಳಿಸಿದೆ.
ಅಲ್ ಖೈದಾ ಸಂಘಟನೆಯ ಮಾಜಿ ಮುಖ್ಯಸ್ಥ ಒಸಾಮ ಬಿನ್ ಲಾಡೆನ್ ಗೆ ಅಮಿನ್ ಉಲ್ ಹಖ್ ಆಪ್ತನಾಗಿದ್ದ. ಒಸಾಮ ಬಿನ್ ಲಾಡನ್ ರನ್ನು ಅಮೆರಿಕ ಸೈನ್ಯವು 2011ರಲ್ಲಿ ಪಾಕಿಸ್ಥಾನದಲ್ಲಿ ಹತ್ಯೆ ಮಾಡಿತ್ತು.
ಇದನ್ನೂ ಓದಿ:ನಿಮ್ಮ ಆಂತರಿಕ ಜಗಳಕ್ಕೆ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ: ಭಾರತ, ಪಾಕ್ ಗೆ ತಾಲಿಬಾನ್
ಅಮೀನ್-ಉಲ್-ಹಕ್ ತೊರಾ ಬೋರಾದಲ್ಲಿ ಒಸಾಮಾ ಬಿನ್ ಲಾಡೆನ್ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ. 80 ರ ದಶಕದಲ್ಲಿ ಮಕ್ತಾಬಾ ಅಖಿದ್ಮತ್ ನಲ್ಲಿ ಅಬ್ದುಲ್ಲಾ ಅಜಾಮ್ ನೊಂದಿಗೆ ಕೆಲಸ ಮಾಡಿದಾಗ ಆತನಿ ಒಸಾಮಾ ಬಿನ್ ಲಾಡೆನ್ ಗೆ ಆಪ್ತ ಅಮಿನ್ ಉಲ್ ಹಖ್ ಹತ್ತಿರವಾಗಿದ್ದ.
Dr. Amin-ul-Haq, a major al-Qaeda player in Afghanistan, Osama Bin Laden security in charge in Tora Bora, returns to his native Nangarhar province after it fell to the Taliban. Dr. Amin became close to OBL in the 80s when he worked with Abdullah Azzam in Maktaba Akhidmat. pic.twitter.com/IXbZeJ0nZE
— BILAL SARWARY (@bsarwary) August 30, 2021
ತಾಲಿಬಾನ್ ಹೊಸ ಕಾನೂನು: ಅಫ್ಘಾನಿಸ್ತಾನ್ ದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ತಾಲಿಬಾನ್ ಹಂತ ಹಂತವಾಗಿ ಷರಿಯಾ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದೆ.
ಭಾನುವಾರವಷ್ಟೆ ಹುಡುಗ-ಹುಡುಗಿಯರು ಒಟ್ಟಿಗೆ ಕಲಿಯುವುದಕ್ಕೆ ನಿರ್ಬಂಧ ಹೇರಿರುವ ತಾಲಿಬಾನ್ ಇಂದು( ಆ.30) ವಿದ್ಯಾರ್ಥಿನಿಯರಿಗೆ ಪುರುಷ ಶಿಕ್ಷಕ ಪಾಠ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಮಹಿಳೆಯರು ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ನಡೆಸಲು ತಾಲಿಬಾನ್ ಅವಕಾಶ ನೀಡಿದೆ. ಆದರೆ, ಹೊಸ ನಿಯಮಗಳ ಅಡಿಯಲ್ಲಿ ಯುವಕ ಮತ್ತು ಯುವತಿಯರು ಒಟ್ಟಿಗೆ ಕಲಿಕೆಯಲ್ಲಿ ಭಾಗಿಯಾಗಲು ಅವಕಾಶ ಇರುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್