ಆಸ್ಪತ್ರೆಗಳಲ್ಲಿ ಆಮ್ಲಜನಕದ ಅಭಾವ : ದರವೂ ಏಕಾಏಕಿ ಹೆಚ್ಚಳ


Team Udayavani, Jun 25, 2020, 3:47 PM IST

ಆಸ್ಪತ್ರೆಗಳಲ್ಲಿ ಆಮ್ಲಜನಕದ ಅಭಾವ : ದರವೂ ಏಕಾಏಕಿ ಹೆಚ್ಚಳ

ಕೊನಾಕ್ರೈ(ಗಿನಿ): ಆಫ್ರಿಕಾ, ದ.ಅಮೆರಿಕ ದೇಶದ ಹಲವು ಆಸ್ಪತ್ರೆಗಳಲ್ಲಿ ಆಮ್ಲಜನಕದ ತೀವ್ರ ಕೊರತೆ ಬಾಧಿಸುತ್ತಿರುವಂತೆ, ವಿಶ್ವದ ಇತರ ಆಸ್ಪತ್ರೆಗಳೂ ಕಷ್ಟ ಕಾಲ ಎದುರಿಸುತ್ತಿವೆ.

ಈ ಮೊದಲು ಬಡ ರಾಷ್ಟ್ರಗಳ ಆಸ್ಪತ್ರೆಗಳಲ್ಲಿ ಪೂರೈಕೆ ಕೊರತೆಯಿಂದ ಇಂತಹ ಸಮಸ್ಯೆ ಇದೆ ಎಂದು ಹೇಳಲಾಗಿತ್ತು. ಆದರೆ ಈಗ ಯುರೋಪ್‌, ಅಮೆರಿಕದಂತಹ ಮುಂದುವರಿದ ದೇಶಗಳಲ್ಲೇ ಆಮ್ಲಜನಕದ ಕೊರತೆ ತೀವ್ರವಾಗಿ ಕಾಡುತ್ತಿದೆ.

ಆಮ್ಲಜನಕ ಆಸ್ಪತ್ರೆಗಳಲ್ಲಿ ಸಾಮಾನ್ಯ ಅಗತ್ಯವಾಗಿದ್ದು, ವಿದ್ಯುತ್‌, ನೀರಿನಂತೆ ಬೇಡಿಕೆ ಹೊಂದಿದೆ. ಇದನ್ನು ದ್ರವ ರೂಪದಲ್ಲಿ ಟ್ಯಾಂಕರ್‌ ಟ್ರಕ್‌ಗಳಲ್ಲಿ ಆಸ್ಪತ್ರೆಗಳಲ್ಲಿರುವ ಟ್ಯಾಂಕ್‌ಗಳಿಗೆ ಪೂರೈಸಲಾಗುತ್ತದೆ. ಅಲ್ಲಿಂದ ಪೈಪ್‌ಗ್ಳ ಮೂಲಕ ರೋಗಿಯ ವಾರ್ಡ್‌ಗೆ ಸಂಪರ್ಕ ಕಲ್ಪಿಸಿ ನೀಡಲಾಗುತ್ತದೆ. ಕೋವಿಡ್‌ ರೋಗಿಗಳಿಗೆ ಆಮ್ಲಜನಕ ಅತಿ ಹೆಚ್ಚು ಬೇಕಾಗಿದ್ದು, ಈ ಕಾರಣದಿಂದ ಪೂರೈಕೆಯಾದಷ್ಟೂ ಸಾಕಾಗುತ್ತಿಲ್ಲ.

ಬಡ ದೇಶಗಳಾದ ಪೆರು ಮತ್ತು ಬಾಂಗ್ಲಾದೇಶಗಳಲ್ಲಿ ಈಗ ಆಮ್ಲಜನಕ ಸಿಗುತ್ತಲೇ ಇಲ್ಲ. ಪರಿಣಾಮ ಅದು ದುಬಾರಿ ವಸ್ತುವಾಗಿ ಪರಿಣಮಿಸಿದೆ. ಸಹರಾ ಆಸುಪಾಸಿನ ಆಫ್ರಿಕಾ ದೇಶಗಳಲ್ಲಿ ಆಮ್ಲಜನಕ್ಕೆ ಲಕ್ಷಾಂತರ ರೂ.ಗಳನ್ನು ಸರಕಾರಗಳು ವ್ಯಯಿಸುತ್ತಿವೆ.

ಹಲವಾರು ಆಸ್ಪತ್ರೆಗಳು ತಮ್ಮಲ್ಲೇ ಒಂದು ಆಮ್ಲಜನಕ ತಯಾರಿಕೆ ಕೇಂದ್ರ ಮಾಡಲು ಉದ್ದೇಶಿಸಿದ್ದರೂ ಹಣದ ಅಭಾವದಿಂದಾಗಿ ಅವುಗಳು ಆರಂಭವಾಗಿಲ್ಲ. ಇದರಿಂದ ವಿವಿಧ ತಯಾರಿಕೆ ಕೇಂದ್ರಗಳಿಂದ ಸಿಲಿಂಡರ್‌ಗಳ ಮೂಲಕ ಆಮ್ಲಜನಕವನ್ನು ತಯಾರಿಸಬೇಕಾಗಿದೆ. ಗಿನಿ ದೇಶದಲ್ಲಿ ಸೊಗೆಡಿ ಹೆಸರಿನ ಒಂದೇ ಒಂದು ಆಮ್ಲಜನಕ ತಯಾರಿಕೆ ಕೇಂದ್ರವಿದ್ದು ಅಲ್ಲೀಗ ಮಾಡುವ ಉತ್ಪಾದನೆ ಏನಕ್ಕೂ ಸಾಲುತ್ತಿಲ್ಲ. ಇತ್ತ ಬಾಂಗ್ಲಾದೇಶದಲ್ಲಿ ಏಕೀಕೃತ ವ್ಯವಸ್ಥೆ ಇಲ್ಲದ್ದರಿಂದ ಎಲ್ಲ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಮಸ್ಯೆ ಶುರುವಾಗಿದೆ. ಇದರಿಂದ ಜನರು ಸಿಲಿಂಡರ್‌ ಖರೀದಿಸಿ, ಕಾಳಸಂತೆಯಲ್ಲಿ ಆಮ್ಲಜನಕ ಖರೀದಿಸಿ ತಮ್ಮವರಿಗೆ ಆಮ್ಲಜನಕ ವ್ಯವಸ್ಥೆ ಮಾಡಬೇಕಾಗಿದೆ. ಪೆರು ದೇಶದಲ್ಲಿ ಕೊರತೆಯಿಂದಾಗಿ ಹೆಚ್ಚೆಚ್ಚು ಉತ್ಪಾದನೆ ಮಾಡುವಂತೆ ಅಲ್ಲಿನ ಅಧ್ಯಕ್ಷರು ಕಂಪೆನಿಗಳಿಗೆ ಹೇಳಿದ್ದಾರೆ.

ಅಲ್ಲದೇ ಹೊಸ ಟ್ಯಾಂಕ್‌ಗಳು ತಯಾರಿಕೆ ಕೇಂದ್ರಗಳಿಗೆ ಸರಕಾರವೇ 212 ಕೋಟಿ ರೂ.ಗಳ ನೆರವಿಗೆ ಮುಂದಾಗಿದೆ.
ಶ್ವಾಸಕೋಶದ ಸಮಸ್ಯೆ ಹೊಂದಿರುವ ರೋಗಿಗಳಿಗೂ ಆಮ್ಲಜನಕ ಬೇಕು. ನ್ಯುಮೋನಿಯಾದಂತಹ ಕಾಯಿಲೆಗೆ ಆಮ್ಲಜನಕ ನೀಡಿ ಚಿಕಿತ್ಸೆ ನೀಡಲಾಗುತ್ತದೆ. ಕೋವಿಡ್‌ ಕಾಲದಲ್ಲಿ ಇದರ ಅಗತ್ಯ ಹಿಂದಿಗಿಂತಲೂ ಹೆಚ್ಚಾಗಿದೆ. ಈವರೆಗೆ ಆಮ್ಲಜನಕವನ್ನು ಅಗತ್ಯ ಔಷಧಗಳ ಪಟ್ಟಿಯಲ್ಲಿ ಸೇರಿಸಿರಲಿಲ್ಲ. ಆದರೆ ಈಗ ಸಹರಾ ಆಫ್ರಿಕಾ, ಲ್ಯಾಟಿನ್‌ ಅಮೆರಿಕ, ಏಷ್ಯಾದ ಪರಿಸ್ಥಿತಿಯಿಂದ ಆಮ್ಲಜನಕ ಅಗತ್ಯ ವಸ್ತುಗಳಲ್ಲಿ ಸೇರಬೇಕಾದ ಸ್ಥಿತಿ ಬಂದೊದಗಿದೆ. ಸಂಶೋಧನೆಯೊಂದರ ಪ್ರಕಾರ ಕಾಂಗೋದಲ್ಲಿ ಅಗತ್ಯದ ಶೇ.2ರಷ್ಟು ಮಾತ್ರ ಆಮ್ಲಜನಕ ಲಭ್ಯ. ತಾಂಜೇನಿಯಾದಲ್ಲಿ ಶೇ.8, ಬಾಂಗ್ಲಾದಲ್ಲಿ ಶೇ.7ರಷ್ಟು ಮಾತ್ರ ಲಭ್ಯವಿದೆ. ಕೋವಿಡ್‌ನಿಂದಾಗಿ ಕೊರತೆ ಇತರ ದೇಶಗಳಲ್ಲೂ ಹೆಚ್ಚಾಗಿರಬಹುದು ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.