ಈಗ ಪ್ರಿಯಾಂಕಾ ಚೋಪ್ರಾ ಬಗ್ಗೆಯೂ ಪಾಕ್ ಕಿರಿಕ್
ವಿಶ್ವಸಂಸ್ಥೆಯ ಶಾಂತಿ ರಾಯಭಾರಿ ಸ್ಥಾನದಿಂದ ವಜಾಕ್ಕೆ ಆಗ್ರಹ
Team Udayavani, Aug 21, 2019, 8:17 PM IST
ಇಸ್ಲಾಮಾಬಾದ್: ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿದ ಬಳಿಕ ಕಂಗೆಟ್ಟಿರುವ ಪಾಕಿಸ್ಥಾನ ಕಂಡ ಕಂಡಲ್ಲಿ ಭಾರತ ಮತ್ತು ಭಾರತೀಯರನ್ನು ಹಣಿಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.
ಇದಕ್ಕೆ ಹೊಸ ಸೇರ್ಪಡೆಯಾಗಿ ಯುನಿಸೆಫ್ ನ ಸದ್ಭಾವನಾ ರಾಯಭಾರಿಯಾಗಿರುವ ನಟಿ ಪ್ರಿಯಾಂಕಾ ಚೋಪ್ರಾ ಅವರನ್ನು ವಜಾಗೊಳಿಸಬೇಕು ಎಂದು ವಿಶ್ವಸಂಸ್ಥೆಗೆ ಪಾಕ್ ಒತ್ತಾಯಿಸಿದೆ.
ಪ್ರಿಯಾಂಕಾ ಬಾಲಾಕೋಟ್ ದಾಳಿ ಸಂದರ್ಭ (ಫೆಬ್ರವರಿಯಲ್ಲಿ) ಭಾರತೀಯ ಸಶಸ್ತ್ರ ಪಡೆಗಳನ್ನು ಉದ್ದೇಶಿಸಿ ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದರು. ಇದೇ ಟ್ವೀಟ್ ಅನ್ನು ನೆವವಾಗಿರಿಸಿ, ಈಗ ಎಚ್ಚೆತ್ತಿರುವ ಪಾಕ್, ಮೋದಿ ಸರಕಾರದ ನಡೆಯನ್ನು ಪ್ರಿಯಾಂಕಾ ಬೆಂಬಲಿಸುತ್ತಿದ್ದಾರೆ. ಕಾಶ್ಮೀರ ವಿಚಾರದಲ್ಲಿ ಯುದ್ಧಕ್ಕೆ, ಅಣ್ವಸ್ತ್ರ ಯುದ್ಧಕ್ಕೂ ಬೆಂಬಲ ನೀಡುತ್ತಿದ್ದಾರೆ. ಇದು ಅವರು ವಿಶ್ವಸಂಸ್ಥೆಯಲ್ಲಿ ಹೊಂದಿರುವ ಶಾಂತಿ ರಾಯಭಾರಿ ಹುದ್ದೆಗೆ ಅವಮಾನಕರ. ಆದ್ದರಿಂದ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಹೇಳಿದೆ.
ಪಾಕಿಸ್ಥಾನದ ಮಾನವ ಹಕ್ಕು ಸಚಿವೆ ಶೈರೀನ್ ಮಝಾರಿ ಅವರು ಈ ಕುರಿತ ಪತ್ರಿಕಾ ಹೇಳಿಕೆ ನೀಡಿದ್ದು, ಟ್ವೀಟ್ ಮಾಡಿದ್ದಾರೆ. ಅವರು ಹೀಗೆ ಟ್ವೀಟ್ ಮಾಡುತ್ತಿದ್ದಂತೆ, ಭಾರತೀಯ ಟ್ವೀಟಿಗರು ಲೇವಡಿ ಮಾಡಿದ್ದಾರೆ. ಇನ್ನಷ್ಟು ದಿನ ಕಳೆದ ಬಳಿಕ ನೀವು ಹೀಗೆ ಆಗ್ರಹ ಮಾಡಬಹುದಿತ್ತು ಎಂದರೆ, ಇನ್ನು ಕೆಲವರು ಪಾಕ್ನಲ್ಲಿ ಮಾನವ ಹಕ್ಕು ಎಂದೇನಾದರೂ ಇದೆಯೇ ಎಂದು ಕಾಲೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
Airstrike; ಅಫ್ಘಾನಿಸ್ಥಾನದಲ್ಲಿ ಪಾಕ್ನಿಂದ ವೈಮಾನಿಕ ದಾಳಿ: 8 ಸಾವು
Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!
America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು
Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!