ಪಾಕ್ ಪ್ರವಾಹ; ಪ್ರಧಾನಿ ಮೋದಿ ಕಾಳಜಿಗೆ ಪಾಕ್ ಪ್ರಧಾನಿ ಶೆಹಬಾಜ್ ಅಭಿನಂದನೆ
ಪಾಕಿಸ್ತಾನದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಈವರೆಗೆ 1,100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
Team Udayavani, Sep 1, 2022, 10:57 AM IST
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿನ ಭಾರೀ ಮಳೆ, ಪ್ರವಾಹದಿಂದಾಗಿ ಸಂಭವಿಸಿದ ಜೀವ ಹಾನಿ, ಬೆಳೆ ನಾಶದ ಕುರಿತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕಾಳಜಿ ವಹಿಸಿ ಕಳವಳ ವ್ಯಕ್ತಪಡಿಸಿರುವುದಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಧನ್ಯವಾದ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ದಾಳಿಂಬೆ ಬರಗಾಲದ ಸಮೃದ್ಧ ಬೆಳೆ: 10 ಎಕರೆ, 100 ಟನ್ ಇಳುವರಿ 1 ಕೋಟಿ ಆದಾಯ ..!
ಭೀಕರ ಪ್ರವಾಹ, ಮಳೆಯಿಂದಾಗಿ ಅಪಾರ ನಷ್ಟ ಉಂಟಾಗಿದ್ದು, ಈ ನೈಸರ್ಗಿಕ ವಿಕೋಪದ ಪ್ರತಿಕೂಲ ಪರಿಣಾಮ ಎದುರಿಸುವ ಮೂಲಕ ಪಾಕಿಸ್ತಾನ ಮತ್ತೆ ಸಹಜ ಸ್ಥಿತಿಗೆ ಮರಳುವ ವಿಶ್ವಾಸವಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.
ಪಾಕಿಸ್ತಾನದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಈವರೆಗೆ 1,100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 33 ಮಿಲಿಯನ್ ಜನರನ್ನು ಸ್ಥಳಾಂತರಿಸಲಾಗಿದೆ. ಎರಡು ಲಕ್ಷಕ್ಕೂ ಅಧಿಕ ಮಂದಿ ಮನೆ ಕಳೆದುಕೊಂಡಿದ್ದಾರೆ.
ಪಾಕಿಸ್ತಾನದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಸಲ್ಲಿಸುವುದಾಗಿ ಪಾಕ್ ಪ್ರಧಾನಿ ಷರೀಫ್ ತಿಳಿಸಿದ್ದಾರೆ. ಭೀಕರ ಪ್ರವಾಹದಿಂದ ಪಾಕಿಸ್ತಾನದ ಜನರು ಕಂಗೆಟ್ಟು ಹೋಗಿದ್ದು, ಈ ನೈಸರ್ಗಿಕ ವಿಕೋಪದ ನಷ್ಟದಿಂದ ನಮ್ಮ ಜನರು ಹೊರಬಂದು, ಮತ್ತೆ ತಮ್ಮ ಬದುಕು ಕಟ್ಟಿಕೊಳ್ಳುವಂತಾಗಲಿ ಎಂದು ಷರೀಫ್ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ