ಮೋದಿಗೆ ಯುಎಇ ಪ್ರಶಸ್ತಿ ನೀಡಿದ್ದಕ್ಕೆ ಪಾಕಿಗಳ ಅರಚಾಟ!
Team Udayavani, Aug 25, 2019, 4:27 PM IST
ಇಸ್ಲಾಮಾಬಾದ್: ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕ್ರಮದ ವಿರುದ್ಧ ಭಾರತದ ಸರಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಂದೂ ಇಲ್ಲದಷ್ಟು ಆಕ್ರೋಶ ಹೊರಹಾಕುತ್ತಿರುವ ಪಾಕಿಸ್ಥಾನೀಯರ ಕೋಪ ಈಗ ಯುಎಇಯತ್ತ ತಿರುಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿದ್ದಕ್ಕಾಗಿ ಕೆಂಡಕಾರುತ್ತಿದ್ದಾರೆ. ಪ್ರಶಸ್ತಿ ನೀಡುತ್ತಿದ್ದಂತೆ, ಪಾಕಿಸ್ಥಾನೀಯರು ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರೂ ಭಾನುವಾರ, ಶೇಮ್ ಆನ್ ಯುಎಇ ಹ್ಯಾಶ್ಟ್ಯಾಗ್ ಹಾಕಿ ಟ್ವಿಟರ್ ನಲ್ಲಿ ಟ್ವೀಟ್ಗಳನ್ನು ಮಾಡಿದ್ದಾರೆ. ಜತೆಗೆ ಯುಎಇ ಪ್ರಶಸ್ತಿ ನೀಡಿದ ಅಬುಧಾಬಿ ಶೇಖ್ ಮೊಹಮ್ಮದ್ ಬಿನ್ ಜಾಯೇದ್ ಅಲ್ ನಾಹ್ಯನ್ ಅವರನ್ನೂ ವಾಚಾಮಗೋಚರ ನಿಂದಿಸಿದ್ದಾರೆ.
ಕಾಶ್ಮೀರದಲ್ಲಿ ಮೋದಿ ಮುಸ್ಲಿಮರಿಗೆ ಇನ್ನಿಲ್ಲದ ಕಷ್ಟ ಕೊಡುತ್ತಿದ್ದರೆ ಯುಎಇ ರಾಜರು ಪ್ರಶಸ್ತಿ ನೀಡಿದ್ದು ಅಕ್ಷಮ್ಯ. ಇದು ಅವರ ನಿಜವಾದ ಮುಖವನ್ನು ತೋರಿಸುತ್ತದೆ, ಹಣ ಇದರ ಹಿಂದೆ ಕೆಲಸ ಮಾಡಿದೆ ಎಂದೆಲ್ಲ ಟೀಕಿಸಿದ್ದಾರೆ.
ಕಾಶ್ಮೀರ ವಿಚಾರವನ್ನು ಅಂ.ರಾ. ವಿಷಯವನ್ನಾಗಿಸಲು ಪಾಕಿಸ್ಥಾನ ಇನ್ನಿಲ್ಲದ ಯತ್ನ ಮಾಡುತ್ತಿದ್ದು, ಈಗಾಗಲೇ ವಿಶ್ವಸಂಸ್ಥೆಯಲ್ಲಿ ಅದರ ಪ್ರಯತ್ನ ವಿಲವಾಗಿದೆ. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ದಿನ ನಿತ್ಯ ಭಾರತೀಯರು, ಭಾರತವನ್ನು ಟೀಕಿಸಿ ಪಾಕಿಸ್ಥಾನ ಆಡಳಿತ, ಪಾಕಿಸ್ಥಾನೀಯರು ಟ್ವೀಟ್ ಮಾಡುತ್ತಿದ್ದಾರೆ. ಈ ಮೂಲಕ ಭಾರತವನ್ನು ಹೇಗಾದರೂ ಹಳಿಯಬೇಕೆಂಬ ಯೋಚನೆ ಅವರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ