ಇಮ್ರಾನ್‌ ವಿರುದ್ಧ ಸೇನಾಕಾಯ್ದೆಯಡಿ ಕೇಸು? ಆಸ್ತಿ ಹಾಳುಗೆಡವಿದ್ದಕ್ಕೆ ಸೇನೆ ಪ್ರತೀಕಾರ


Team Udayavani, May 17, 2023, 7:25 AM IST

ಇಮ್ರಾನ್‌ ವಿರುದ್ಧ ಸೇನಾಕಾಯ್ದೆಯಡಿ ಕೇಸು? ಆಸ್ತಿ ಹಾಳುಗೆಡವಿದ್ದಕ್ಕೆ ಸೇನೆ ಪ್ರತೀಕಾರ

ಲಾಹೋರ್‌/ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಸೇನೆಯ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿರುವಂತೆಯೇ, ಇತ್ತೀಚೆಗೆ ನಡೆದ ಹಿಂಸಾ ಕೃತ್ಯಗಳಲ್ಲಿ ಆಸ್ತಿ, ಕಟ್ಟಡಗಳನ್ನು ಹಾಳು ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಮ್ರಾನ್‌ ಖಾನ್‌ ಮತ್ತು ಅವರ ಬೆಂಬಲಿಗರ ವಿರುದ್ಧ ಪಾಕಿಸ್ತಾನ ಸೇನಾ ಕಾಯ್ದೆ, ಅಧಿಕೃತ ರಹಸ್ಯಗಳ ಕಾಯ್ದೆಗಳನ್ನು ದಾಖಲಿಸಿ ಬಂಧಿಸುವ ಉದ್ದೇಶ ಹೊಂದಿದೆ. ಈ ಕಾಯ್ದೆಯ ಅನ್ವಯ ಶಿಕ್ಷೆ ಸಾಬೀತಾದರೆ, ಜೀವಾವಧಿ ಅಥವಾ ಮರಣದಂಡನೆ ಶಿಕ್ಷೆ ವಿಧಿಸಬಹುದು.

ಮೇ 9ರಂದು ಖಾನ್‌ ಬಂಧನವಾದ ಬಳಿಕ ರೊಚ್ಚಿಗೆದ್ದ ಅವರ ಬೆಂಬಲಿಗರು ರಾವಲ್ಪಿಂಡಿಯಲ್ಲಿ ಇರುವ ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿಗೆ ನುಗ್ಗಿ ದಾಂದಲೆ ನಡೆಸಿದ್ದರು. ಇದೇ ಮೊದಲ ಬಾರಿಗೆ ಅಂಥ ಬೆಳವಣಿಗೆ ನಡೆದಿದೆ. ಸೇನಾ ಮುಖ್ಯಸ್ಥ ಜ. ಅಸೀಮ್‌ ಮುನೀರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಸ್ತುಗಳನ್ನು ಹಾಳುಗೆಡವಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ನಿರ್ಧರಿಸಲಾಗಿದೆ. ವಿಶೇಷವೆಂದರೆ ಸೇನಾ ಕಾಯ್ದೆಯನ್ನು ಇದುವರೆಗೆ ಅಶಿಸ್ತು ತೋರಿದ ಸೇನಾಧಿಕಾರಿಗಳ ವಿರುದ್ಧ ಮಾತ್ರ ಬಳಸಲಾಗುತ್ತಿತ್ತು.

ಪಿಟಿಐ ತಿರುಗೇಟು:
ಸೇನೆಯ ನಿರ್ಧಾರಕ್ಕೆ ಇಮ್ರಾನ್‌ ಖಾನ್‌ ಅವರ ಪಾಕಿಸ್ತಾನ್‌ ತೆಹ್ರೀಕ್‌-ಇ-ಇನ್ಸಾಫ್ ಪಕ್ಷ “ನಮಗೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಗೌರವ ಇದೆ. ಸಂವಿಧಾನ ನಮಗೆಲ್ಲರಿಗೂ ದಾರಿ ದೀಪ’ ಎಂದು ಟ್ವೀಟ್‌ನಲ್ಲಿ ತಿರುಗೇಟು ನೀಡಿದೆ. ಹೀಗಾಗಿ, ಪಾಕಿಸ್ತಾನದಲ್ಲಿ ಪರಿಸ್ಥಿತಿ ಮತ್ತಷ್ಟು ಕೈಮೀರುವ ಸಾಧ್ಯತೆಗಳು ಇವೆ.

ಕಾಯ್ದಿರಿಸಿದ ತೀರ್ಪು:
ಇನ್ನೊಂದೆಡೆ, ಪಂಜಾಬ್‌ ಪ್ರಾಂತದಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಬೇಕೆಂದು; ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಸಲ್ಲಿಸಿರುವ ಅರ್ಜಿಯ ತೀರ್ಪನ್ನು, ಲಾಹೋರ್‌ ಹೈಕೋರ್ಟ್‌ ಕಾಯ್ದಿರಿಸಿದೆ. ನಾನು ರಾಜಕೀಯ ಬಲಿಪಶುವಾಗಿದ್ದೇನೆ. ಪೊಲೀಸರು ತನ್ನ ಮೇಲೆ ನೂರಾರು ಪ್ರಕರಣಗಳನ್ನು ಸಲ್ಲಿಸಿರುವುದರಿಂದ ಬಂಧನದ ಭೀತಿಯಿದೆ ಎಂದು ಕೋರ್ಟ್‌ಗೆ ಅರಿಕೆ ಮಾಡಿಕೊಂಡಿದ್ದಾರೆ. ಈ ಮಧ್ಯೆ ಇಸ್ಲಾಮಾಬಾದ್‌ ನ್ಯಾಯಾಲಯ ಇಮ್ರಾನ್‌ ಖಾನ್‌ ವಿರುದ್ಧದ ಎರಡು ಪ್ರಕರಣಗಳಲ್ಲಿ ಜೂ.8ರವರೆಗೆ ಜಾಮೀನು ನೀಡಿದೆ.

ಇದೇ ವೇಳೆ, ಇಮ್ರಾನ್‌ ಖಾನ್‌ರನ್ನು ಹೊಗಳಿದ್ದ ಬಗ್ಗೆ ಸ್ಪಷ್ಟನೆ ನೀಡಿದ ಪಾಕಿಸ್ತಾನ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಉಮರ್‌ ಅಟಾ ಬಂದಿಯಲ್‌, ಇದೊಂದು ಸಜ್ಜನಿಕೆಯ ಸಂಕೇತ ಎಂದಿದ್ದಾರೆ.

ಪರಾರಿಯಾದ ಮಾಜಿ ಸಚಿವ ಚೌಧರಿ
ಇಸ್ಲಾಮಾಬಾದ್‌ ಹೈಕೋರ್ಟ್‌ ಆವರಣದಲ್ಲಿ ಪೊಲೀಸರನ್ನು ನೋಡುತ್ತಿದ್ದಂತೆಯೇ ಮಾಜಿ ಸಚಿವ ಫ‌ವಾದ್‌ ಚೌಧರಿ ಕಾರ್‌ನಿಂದ ಇಳಿದು ಓಡಿದ್ದಾರೆ. ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಮಂಗಳವಾರ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಕೋರ್ಟ್‌ ಹಾಲ್‌ನಿಂದ ಹೊರಗೆ ಬಂದು ಪೊಲೀಸರನ್ನು ನೋಡುತ್ತಲೇ ಅವರು ಪರಾರಿಯಾಗಿದ್ದಾರೆ. ಈ ಘಟನೆಯ ಫೋಟೋ, ವಿಡಿಯೋಗಳು ವೈರಲ್‌ ಆಗಿವೆ.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.