ರಾಜತಾಂತ್ರಿಕ ಸಂಬಂಧ ಕಡಿದ ಪಾಕ್‌

ಭಾರತದ ರಾಯಭಾರಿ ಉಚ್ಛಾಟಿಸಿದ ನೆರೆಯ ರಾಷ್ಟ್ರ

Team Udayavani, Aug 8, 2019, 5:36 AM IST

p-34

ನವದೆಹಲಿ/ಇಸ್ಲಾಮಾಬಾದ್‌: ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿದ್ದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನವು ಭಾರತದೊಂದಿಗಿನ ರಾಜತಾಂತ್ರಿಕ ಸಂಬಂಧವನ್ನೇ ಕಡಿದುಕೊಂಡಿದೆ. ಬುಧವಾರ ಅಲ್ಲಿನ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮಿತಿ ಸಭೆಯಲ್ಲಿ ಇಸ್ಲಾಮಾಬಾದ್‌ನಲ್ಲಿರುವ ಭಾರತದ ರಾಯಭಾರಿಯನ್ನು ಉಚ್ಚಾಟಿಸಲು ನಿರ್ಧರಿಸಿದೆ. ವ್ಯಾಪಾರ ಸಂಬಂಧ ಕಡಿದುಕೊಳ್ಳುವುದಾಗಿಯೂ ಘೋಷಿಸಿದೆ. ವಾಘಾ ಗಡಿಯಲ್ಲಿ ಬಸ್‌ ಸೇವೆ ಹಾಗೂ ವಾಹನ ಸಂಚಾರವೂ ರದ್ದಾಗಲಿದೆ. ಇದರಿಂದ ವಾಘಾ ಗಡಿ ಸಂಪೂರ್ಣ ಬಂದ್‌ ಆಗಲಿದೆ.

ಈ ಬಗ್ಗೆ ಮಾತನಾಡಿದ ವಿದೇಶಾಂಗ ಸಚಿವ ಶಾ ಮೆಹಮೂದ್‌ ಖುರೇಶಿ ನಾವು ನಮ್ಮ ರಾಯಭಾರಿಯನ್ನು ದೆಹಲಿಯಿಂದ ಕರೆಸಿಕೊಳ್ಳುತ್ತೇವೆ ಮತ್ತು ಅವರ ರಾಯಭಾರಿಯನ್ನು ವಾಪಸ್‌ ಕಳುಹಿಸುತ್ತೇವೆ ಎಂದಿದ್ದಾರೆ. ಅಲ್ಲದೆ, ಭಾರತದ ಕ್ರಮದ ವಿರುದ್ಧ ವಿಶ್ವಸಂಸ್ಥೆಯ ಮೊರೆ ಹೋಗಲೂ ಪಾಕ್‌ ನಿರ್ಧರಿಸಿದೆ.

500 ಬಂಧನ: ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರ ಪ್ರಕಟವಾದ ಬಳಿಕ ರಾಜಧಾನಿ ಶ್ರೀನಗರ ಸೇರಿದಂತೆ ಹಲವು ಭಾಗಗಳಲ್ಲಿ ಮೌನ ಆವರಿಸಿದೆ. ಮಾಜಿ ಸಿಎಂಗಳಾದ ಒಮರ್‌ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಇದುವರೆಗೆ 500 ಮಂದಿಯನ್ನು ಬಂಧಿಸಲಾಗಿದೆ.

ಕಲ್ಲು ತೂರಾಟ: ಕಣಿವೆ ರಾಜ್ಯದಲ್ಲಿ ಅಧಿಕೃತವಾಗಿ ಕರ್ಫ್ಯೂ ಜಾರಿ ಮಾಡದೇ ಇದ್ದರೂ, ಪರಿಸ್ಥಿತಿ ಆ ರೀತಿಯಲ್ಲಿಯೇ ಇದೆ. ಹಲವೆಡೆ ಭದ್ರತಾ ಪಡೆಗಳತ್ತ ಕಲ್ಲು ತೂರಾಟ ನಡೆಸಲಾಗಿದೆ.

ದೋವಲ್ ಭೇಟಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೊವಾಲ್ ಶೋಪಿಯಾನ್‌ನಲ್ಲಿ ನಾಗರಿಕರು, ಪೊಲೀಸರ ಜತೆಗೆ ಮಾತನಾಡಿದ್ದಾರೆ. ಜನಸಾಮಾನ್ಯರೊಂದಿಗೆ ರಸ್ತೆ ಬದಿ ಕುಳಿತು ಉಪಾಹಾರವನ್ನೂ ಸೇವಿಸಿದ್ದಾರೆ

ಇಂದು ಪ್ರಧಾನಿ ಮೋದಿ ಭಾಷಣ?
ಕಣಿವೆ ರಾಜ್ಯದ ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರ ಬಗ್ಗೆ ದೇಶಕ್ಕೆ ವಿವರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಾ.27ರಂದು ಉಪಗ್ರಹ ನಿರೋಧಕ ಕ್ಷಿಪಣಿ ವ್ಯವಸ್ಥೆ ಅಭಿವೃದ್ಧಿಗೊಳಿಸಿದ ವೇಳೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದರು.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.