ಭಾರತಕ್ಕೆ ಇಮ್ರಾನ್ ಖಾನ್ ಗೂಗ್ಲಿ : ಪಾಕ್ ವಿದೇಶ ಸಚಿವ ಕುರೇಶಿ
Team Udayavani, Nov 30, 2018, 12:01 PM IST
ಇಸ್ಲಾಮಾಬಾದ್ : ಕರ್ತಾರ್ಪುರ ಕಾರಿಡಾರ್ ತೆರೆಯುವ ಮೂಲಕ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತಕ್ಕೆ ಗೂಗ್ಲಿ ಎಸೆದಿದ್ದಾರೆ ಎಂದು ಪಾಕ್ ವಿದೇಶ ಸಚಿವ ಶಾ ಮಹಮೂದ್ ಕುರೇಶಿ ಹೇಳಿದ್ದಾರೆ.
ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ಥಾನ್ ತೆಹರೀಕ್ ಎ ಇನ್ಸಾಫ್ ಸರಕಾರ ನೂರು ದಿನಗಳನ್ನು ಪೂರೈಸಿರುವ ಪ್ರಯುಕ್ತ ಏರ್ಪಟ್ಟ ಸಮಾರಂಭದಲ್ಲಿ ಮಾತನಾಡುತ್ತಿದ್ದ ಕುರೇಶಿ ಅವರು ಭಾರತ-ಪಾಕ್ ದ್ವಿಪಕ್ಷೀಯ ಸಂಬಂಧಗಳು ಪುನರಾರಂಭಗೊಳ್ಳುವ ಅಗತ್ಯವನ್ನು ಒತ್ತಿ ಹೇಳುತ್ತಾ, ಭಾರತದೊಂದಿಗಿನ ಶಾಂತಿ ವಿಚಾರದಲ್ಲಿ ಪಾಕಿಸ್ಥಾನವು ಜನ ಕೇಂದ್ರಿತ ನಿಲುವು ಹೊಂದಿದೆ; ಭಾರತ ಒಂದು ಹೆಜ್ಜೆ ಮುಂದೆ ಇಟ್ಟರೆ ಪಾಕಿಸ್ಥಾನ ಎರಡು ಹೆಜ್ಜೆ ಮುಂದಿಡಲು ಬಯಸುತ್ತದೆ ಎಂದು ಹೇಳಿದರು.
ಎರಡು ದಿನಗಳ ಹಿಂದಷ್ಟೆ ಪಾಕ್ ಪ್ರಧಾನಿ ಇಮ್ರಾನ್ ಖಾನ್, “ಭಾರತ ಮತ್ತು ಪಾಕಿಸ್ಥಾನ ಎರಡೂ ದೇಶಗಳು ಹಿಂದೆ ತಪ್ಪೆಸಗಿವೆ; ಹಾಗಿದ್ದರೂ ಅವು ಭೂತಕಾಲದಲ್ಲೇ ಉಳಿಯಕೂಡದು;’ ಎಂದು ಹೇಳಿದ್ದರು.
ನಿನ್ನೆಯಷ್ಟೇ ಇಮ್ರಾನ್ ಖಾನ್ “ಭಾರತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಲು ನಾನು ಉತ್ಸುಕನಾಗಿದ್ದೇನೆ; ನಮ್ಮ ನೆಲದಲ್ಲಿ ಭಯೋತ್ಪಾದನೆಯನ್ನು ಬೆಂಬಲಿಸಿ ನೆರೆಯ ದೇಶಕ್ಕೆ ಹಾನಿ ಉಂಟುಮಾಡುವುದಿಂದ ನಮಗೂ ಒಳಿತಾಗುವುದಿಲ್ಲ ಎಂಬುದನ್ನು ನಾವು ಅರಿತಿದ್ದೇವೆ’ ಎಂದು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ಥಾನದ ನಡುವೆ ಅಡ್ಡಗೋಡೆಯಾಗಿರುವುದು ಕಾಶ್ಮೀರ ವಿಷಯ ಮಾತ್ರ. ನಾವದನ್ನು ಬಗೆಹರಿಸಲು ಸಾಧ್ಯವಿಲ್ಲವೇ. ಮನುಷ್ಯನು ಚಂದ್ರನ ಮೇಲೆ ನಡೆದಿದ್ದಾನೆ; ಹಾಗಿರುವಾಗ ನಮಗೆ ಕಾಶ್ಮೀರ ಸಮಸ್ಯೆ ಬಗೆಹರಿಸುವುದು ಕಷ್ಟದ ವಿಷಯವೇನೂ ಅಲ್ಲ; ಪರಸ್ಪರ ಮಾತುಕತೆ ಮೂಲಕವೇ ನಾವು ಈ ಸಮಸ್ಯೆಯನ್ನು ಪರಿಹರಿಸಬಹುದಾಗಿದೆ ಎಂದು ಇಮ್ರಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ