ವಾಟ್ಸಾಪ್‌ ನಲ್ಲಿ ಧರ್ಮನಿಂದನೆ ಬಗ್ಗೆ ಪೋಸ್ಟ್ ಹಾಕಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ


Team Udayavani, Mar 26, 2023, 10:44 AM IST

TDY-4

ಇಸ್ಲಾಮಾಬಾದ್: ವಾಟ್ಸಾಪ್ ನಲ್ಲಿ ಧರ್ಮನಿಂದನೆಯ ವಿಚಾರವನ್ನು ಹಂಚಿಕೊಂಡ ಕಾರಣ ವ್ಯಕ್ತಿಯೊಬ್ಬನಿಗೆ ಮರಣ ದಂಡನೆ ಶಿಕ್ಷೆ ವಿಧಿಸಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಇಲೆಕ್ಟ್ರಾನಿಕ್ ಅಪರಾಧಗಳ ತಡೆ ಕಾಯ್ದೆ ಮತ್ತು ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಪೇಶಾವರದ ನ್ಯಾಯಾಲಯ ಶುಕ್ರವಾರ ಸೈಯದ್ ಮುಹಮ್ಮದ್ ಜೀಶನ್ ಅವರನ್ನು ದೋಷಿ ಎಂದು ಘೋಷಿಸಿ ಶಿಕ್ಷೆ ವಿಧಿಸಿದೆ.

ಬಂಧನದಲ್ಲಿರುವ ಸೈಯದ್ ಜಕಾವುಲ್ಲಾ ಅವರ ಪುತ್ರ ಸೈಯದ್ ಮುಹಮ್ಮದ್ ಜೀಶಾನ್ ಅವರನ್ನು ತಪ್ಪಿತಸ್ಥರೆಂದು ಸಾಬೀತುಪಡಿಸಿ ಶಿಕ್ಷೆ ವಿಧಿಸಲಾಗಿದೆ” ಎಂದು ನ್ಯಾಯಾಲಯದ ಆದೇಶದಲ್ಲಿ ತಿಳಿಸಲಾಗಿದೆ.

ಪಾಕಿಸ್ತಾನದ ವಾಯುವ್ಯ ನಗರದ ಮರ್ದಾನ್‌ನ ನಿವಾಸಿಯಾಗಿರುವ ಜೀಶನ್‌ ಅವರಿಗೆ ಕೋರ್ಟ್ 1.2 ಮಿಲಿಯನ್ ರೂಪಾಯಿ ($4,300) ದಂಡ ಮತ್ತು ಒಟ್ಟು 23 ವರ್ಷಗಳ ಜೈಲು ಶಿಕ್ಷೆ ವಿಧಿಸಿ, ಮರಣ ದಂಡನೆ ಶಿಕ್ಷೆಯನ್ನು ನೀಡಿದೆ.

ಇದನ್ನೂ ಓದಿ: ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ

ಪಂಜಾಬ್ ಪ್ರಾಂತ್ಯದ ತಲಗಾಂಗ್‌ನ ನಿವಾಸಿ ಮುಹಮ್ಮದ್ ಸಯೀದ್ ಎನ್ನುವವರು ಎರಡು ವರ್ಷಗಳ ಹಿಂದೆ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿಗೆ (ಎಫ್‌ಐಎ) ಜೀಶನ್ ವಾಟ್ಸಾಪ್ ಗುಂಪಿನಲ್ಲಿ ಧರ್ಮನಿಂದೆಯ ವಿಷಯವನ್ನು ಪೋಸ್ಟ್ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಬಳಿಕ ಆರೋಪಿಯನ್ನು ಬಂಧಿಸಿ, ಪ್ರಕರಣದ ವಿಚಾರಣೆ ಆರಂಭವಾಯಿತು ಎಂದು ವರದಿ ತಿಳಿಸಿದೆ.

ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಜೀಶನ್‌ ಅವರ ಫೋನ್‌ ವಶಪಡಿಸಿಕೊಂಡು, ಅದನ್ನು ಫೊರೆನ್ಸಿಕ್ ಪರೀಕ್ಷೆಗೆ ನೀಡಲಾಗಿತ್ತು. ಅದರಲ್ಲಿ ಜೀಶನ್‌  ತಪ್ಪಿತಸ್ಥನೆಂದು ಸಾಬೀತಾಗಿದೆ.

ಪಾಕಿಸ್ತಾನದಲ್ಲಿ ಧರ್ಮನಿಂದನೆಯ ವಿಚಾರ ತುಂಬಾ ಸೂಕ್ಷ್ಮ. ಮರಣ ದಂಡನೆ ಶಿಕ್ಷೆಗೆ ಒಳಗಾಗಿರುವ ಜೀಶನ್‌ ಅವರಿಗೆ ಮೇಲ್ಮನವಿ ಸಲ್ಲಿಸುವ ಹಕ್ಕಿದೆ ಎಂದು ಕೋರ್ಟ್‌ ಹೇಳಿದೆ.

ರಾಷ್ಟ್ರೀಯ ನ್ಯಾಯ ಮತ್ತು ಶಾಂತಿ ಆಯೋಗ, ಪಾಕಿಸ್ತಾನದಲ್ಲಿ ಮಾನವ ಹಕ್ಕುಗಳು ಮತ್ತು ಕಾನೂನು ನೆರವು ಗುಂಪುಗಳ ಪ್ರಕಾರ ಕಳೆದ ವರ್ಷಗಳಲ್ಲಿ ಪಾಕಿಸ್ತಾನದಲ್ಲಿ 774 ಮುಸ್ಲಿಮರು ಮತ್ತು ವಿವಿಧ ಅಲ್ಪಸಂಖ್ಯಾತ ಧಾರ್ಮಿಕ ಗುಂಪುಗಳ 760 ಸದಸ್ಯರು ಧರ್ಮ ನಿಂದನೆಯನ್ನು ಮಾಡಿದ ಆರೋಪವನ್ನು ಎದುರಿಸಿದ್ದಾರೆ.

 

ಟಾಪ್ ನ್ಯೂಸ್

MLA Vedavyasa Kamath

ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆ: ಶಾಸಕ ವೇದವ್ಯಾಸ ಕಾಮತ್

nalin kumar kateel

ಗ್ಯಾರಂಟಿ ಯೋಜನೆಗೆ ಹಣದ ಕ್ರೋಢೀಕರಣದ ಬಗ್ಗೆ ಶ್ವೇತಪತ್ರ ಹೊರಡಿಸಲಿ: ನಳಿನ್ ಕಟೀಲ್

manish sisodia

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

congress

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

mysore

ಕುರುಬೂರು ಅಪಘಾತ ಪ್ರಕರಣ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

US President Joe Biden stumbled on stage

Video: ವೇದಿಕೆಯ ಮೇಲೆ ಎಡವಿ ಬಿದ್ದ ಅಮೆರಿಕ ಅಧ್ಯಕ್ಷ ಜೋ ಬಿಡೆನ್

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ನರಗುಂದ: ಹೇಮರಡ್ಡಿ ಮಲ್ಲಮ್ಮ ಜೀವನ ಆದರ್ಶಪ್ರಾಯ

ನರಗುಂದ: ಹೇಮರಡ್ಡಿ ಮಲ್ಲಮ್ಮ ಜೀವನ ಆದರ್ಶಪ್ರಾಯ

ಬ್ಯಾಡಗಿ: ಹಳೇ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಯತ್ನ

ಬ್ಯಾಡಗಿ: ಹಳೇ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಯತ್ನ

1-sadsd

ಮನುಷ್ಯನಾಗಿ ದೇವರ ಚಿಂತನೆ ಮಾಡದಿದ್ದರೇನು ಲಾಭ: ಗೋಕರ್ಣ ಪರ್ತಗಾಳಿ ಶ್ರೀ

MLA Vedavyasa Kamath

ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆ: ಶಾಸಕ ವೇದವ್ಯಾಸ ಕಾಮತ್

nalin kumar kateel

ಗ್ಯಾರಂಟಿ ಯೋಜನೆಗೆ ಹಣದ ಕ್ರೋಢೀಕರಣದ ಬಗ್ಗೆ ಶ್ವೇತಪತ್ರ ಹೊರಡಿಸಲಿ: ನಳಿನ್ ಕಟೀಲ್