ಪಾಕಿಸ್ತಾನ: ಪುರಾತನ ಹಿಂದೂ ದೇವಾಲಯದ ಮೇಲೆ ದಾಳಿ, ಮುಖ್ಯದ್ವಾರ ಧ್ವಂಸ
ಇತ್ತೀಚೆಗಷ್ಟೇ ಜಿಲ್ಲಾಡಳಿತ ಅಕ್ರಮವಾಗಿದ್ದ ಅಂಗಡಿ, ಮುಂಗಟ್ಟುಗಳನ್ನು ತೆರವುಗೊಳಿಸಿತ್ತು.
Team Udayavani, Mar 29, 2021, 5:33 PM IST
ಇಸ್ಲಾಮಾಬಾದ್: ಪುನರ್ ನವೀಕರಣಗೊಳ್ಳುತ್ತಿದ್ದ ಸುಮಾರು ನೂರು ವರ್ಷದಷ್ಟು ಹಳೆಯ ಹಿಂದೂ ದೇವಾಲಯದ ಮೇಲೆ ಅಪರಿಚಿತ ಜನರ ಗುಂಪು ದಾಳಿ ನಡೆಸಿರುವ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯ ಗ್ಯಾರಿಸನ್ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಡಿಕೆಶಿಯಿಂದ ನಮ್ಮ ಮಗಳು ದುಡ್ಡು ಪಡೆದಿದ್ದಾಳೆ : ಸಿಡಿ ಯುವತಿ ಪೋಷಕರು
ರಾವಲ್ಪಿಂಡಿ ನಗರದಲ್ಲಿರುವ ಪುರಾನಾ ಖ್ವಿಲಾ ಎಂಬಲ್ಲಿ ಶನಿವಾರ (ಮಾರ್ಚ್ 27) ಪುರಾತನ ಹಿಂದೂ ದೇವಾಲಯದ ಮುಖ್ಯದ್ವಾರ ಹಾಗೂ ಮೇಲಂತಸ್ತಿನಲ್ಲಿರುವ ಬಾಗಿಲನ್ನು 10ರಿಂದ 15 ಜನರಿದ್ದ ಗುಂಪು ಧ್ವಂಸಗೊಳಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಕಳೆದ ಒಂದು ತಿಂಗಳಿನಿಂದ ಪುರಾತನ ಹಿಂದೂ ದೇವಾಲಯದ ಪುನರ್ ನವೀಕರಣ ಕೆಲಸ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದೇವಾಲಯದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಭಾಗಶಃ ಹಾನಿಗೊಳಿಸಿರುವುದಾಗಿ ಉತ್ತರ ವಲಯದ ಭದ್ರತಾ ಅಧಿಕಾರಿ ಸೈಯದ್ ಅಬ್ಬಾಸ್ ಝೈದಿ ತಿಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ರಾವಲ್ಪಿಂಡಿಯ ಬನ್ನಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಮೊದಲು ದೇವಾಲಯದ ಸುತ್ತಮುತ್ತಲಿನ ಪ್ರದೇಶವನ್ನು ಭೂ ಮಾಫಿಯಾದವರು ಅಕ್ರಮವಾಗಿ ವಶಪಡಿಸಿಕೊಂಡು ಅಂಗಡಿ, ಮುಂಗಟ್ಟುಗಳನ್ನು ನಡೆಸುತ್ತಿದ್ದರು. ಇತ್ತೀಚೆಗಷ್ಟೇ ಜಿಲ್ಲಾಡಳಿತ ಅಕ್ರಮವಾಗಿದ್ದ ಅಂಗಡಿ, ಮುಂಗಟ್ಟುಗಳನ್ನು ತೆರವುಗೊಳಿಸಿತ್ತು. ನಂತರ ದೇವಾಲಯದ ಪುನರ್ ನವೀಕರಣ ಕಾರ್ಯ ಆರಂಭಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ
‘ವೀಲ್ ಚೇರ್ ರೋಮಿಯೋ’ ಚಿತ್ರ ವಿಮರ್ಶೆ; ವೀಲ್ಚೇರ್ನಿಂದ ಮೇಲೇಳುವ ಸಿನಿಮಾವಿದು…
ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್ ಸಿಬ್ಬಂದಿ