ಕಾಶ್ಮೀರದಲ್ಲಿ ಕರ್ಫ್ಯೂ ರದ್ದುಪಡಿಸದ ಹೊರತು ಭಾರತದೊಂದಿಗೆ ಮಾತಾಡಲ್ಲ!
ಕಾಶ್ಮೀರ ವಿಚಾರದಲ್ಲಿ ಮತ್ತೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕ್ಯಾತೆ
Team Udayavani, Sep 18, 2019, 6:41 PM IST
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ಫ್ಯೂ ರದ್ದುಪಡಿಸಿದ ಹೊರತು ಭಾರತದೊಂದಿಗೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
370 ರದ್ದತಿ ಬಳಿಕ ಕಂಗೆಟ್ಟಿರು ಪಾಕಿಸ್ಥಾನ ಭಾರತದೊಂದಿಗೆ ಮಾತುಕತೆ ನಡೆಸುವುದು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಅಲ್ಲದೇ ಕಾಶ್ಮೀರ ವಿಚಾರದಲ್ಲಿ ಅದು ಭಾರತದ ವಿರುದ್ಧ ಮತ್ತು ಕಾಶ್ಮೀರ ವಿಚಾರದಲ್ಲಿ ಅಂತಾರಾಷ್ಟ್ರೀಯ ಬೆಂಬಲವನ್ನು ಪಡೆಯಲು ಹೆಣಗಾಡುತ್ತಿದೆ.
ಕಳೆದ ವಾರವಷ್ಟೇ ಇಮ್ರಾನ್ ಖಾನ್ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಾರ್ವಜನಿಕ ರ್ಯಾಲಿ ನಡೆಸಿ, ನಾನು ಕಾಶ್ಮೀರದ ರಾಯಭಾರಿ ಎಂದು ಬಣ್ಣಿಸಿಕೊಂಡಿದ್ದರು. ಅಲ್ಲದೇ ನಾನು ರಾಯಭಾರಿಯಾಗಿ ಪ್ರಪಂಚ ಸುತ್ತಿ ಕಾಶ್ಮೀರದ ಬಗ್ಗೆ ವಿಷಯ ತಿಳಿಸುತ್ತೇನೆ ಎಂಬುದನ್ನು ಮೋದಿ ಮತ್ತು ಭಾರತೀಯರು ಅರಿತುಕೊಳ್ಳಲಿ ಎಂದು ಹೇಳಿದ್ದರು. ಜತೆಗೆ ಕಾಶ್ಮೀರ ವಿಚಾರದಲ್ಲಿ ಆರೆಸ್ಸೆಸ್ ಅಜೆಂಡಾ ಜಾರಿಗೊಳಿಸಲಾಗುತ್ತಿದೆ ಎಂದವರು ಟೀಕಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು