ಮಾ.25ಕ್ಕೆ ಇಮ್ರಾನ್ ಖಾನ್ ಸರ್ಕಾರದ ಭವಿಷ್ಯ ನಿರ್ಧಾರ?
ವಿಪಕ್ಷಗಳು ಮಂಡಿಸಿರುವ ಗೊತ್ತುವಳಿ ಚರ್ಚೆಗೆ ದಿನಾಂಕ ನಿಗದಿ
Team Udayavani, Mar 21, 2022, 8:10 AM IST
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಅಲ್ಲಿನ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ಮೇಲಿನ ಚರ್ಚೆಯನ್ನು ಮಾ. 25ಕ್ಕೆ ನಿಗದಿಗೊಳಿಸಲಾಗಿದೆ.
ಪಾಕಿಸ್ತಾನ ಸಂಸತ್ತಿನ ಕೆಳಮನೆಯ ಸ್ಪೀಕರ್ ಅಸಾದ್ ಕೈಸರ್ ಈ ವಿಷಯ ಪ್ರಕಟಿಸಿದ್ದಾರೆ. ಮಾ.8ರಂದು, ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಹಾಗೂ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಪಕ್ಷಗಳಿಗೆ ಸೇರಿದ ಸುಮಾರು 100 ಸಂಸದರು ಒಟ್ಟಾಗಿ ಅಲ್ಲಿನ ಸಂಸತ್ತಿನ ಕೆಳಮನೆಯ ಕಾರ್ಯದರ್ಶಿಯವರಿಗೆ ಅವಿಶ್ವಾಸ ಗೊತ್ತುವಳಿಯನ್ನು ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ, ಭಾನುವಾರ ಪಾಕಿಸ್ತಾನ ಸಂಸತ್ತಿನ ಕೆಳಮನೆಯ ಸ್ಪೀಕರ್ ಹಾಗೂ ಕಾರ್ಯದರ್ಶಿಯವರ ಕಚೇರಿಯಿಂದ ಅಧಿಸೂಚನೆಯೊಂದು ಹೊರಬಿದ್ದಿದ್ದು, ಅದರಲ್ಲಿ ಕೆಳಮನೆಯ ವಿಶೇಷ ಕಲಾಪವನ್ನು ಮಾ. 22ರ ಬೆಳಗ್ಗೆ 11ರಿಂದ ಆರಂಭಿಸಲಾಗುತ್ತದೆ. ಮಾ. 25ರಂದು ಅವಿಶ್ವಾಸ ಗೊತ್ತುವಳಿಯ ಮೇಲಿನ ಚರ್ಚೆ ಇರಲಿದೆ.
ಒಐಸಿಗೆ ತೊಂದರೆ ಮಾಡಬೇಡಿ: ಸಚಿವರ ಎಚ್ಚರಿಕೆ
ಮಾ. 22-23ರಂದು ಇಸ್ಲಾಮಾಬಾದ್ನಲ್ಲಿ ಆಯೋಜಿಸಲಾಗಿರುವ ಇಸ್ಲಾಮಿಕ್ ಸಹಕಾರ ಸಂಸ್ಥೆಯ (ಒಐಸಿ) ಸಮ್ಮೇಳನಕ್ಕೆ ಯಾವುದೇ ತೊಂದರೆ ಕೊಡಬಾರದೆಂದು ಪಾಕಿಸ್ತಾನದ ಆಂತರಿಕ ವ್ಯವಹಾರಗಳ ಸಚಿವ ಶೇಖ್ ರಶೀದ್ ಅವರು ವಿಪಕ್ಷಗಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ.
ದೇಶದ ಸದ್ಯದ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ವಿಪಕ್ಷಗಳ ನಿಯೋಗದೊಂದಿಗೆ ಪ್ರಧಾನಿ ಚರ್ಚೆ ನಡೆಸಬೇಕು, ಇಲ್ಲವಾದರೆ ಒಐಸಿ ಸಮ್ಮೇಳನ ಸ್ಥಳದ ಮುಂದೆ ಧರಣಿ ನಡೆಸುವುದಾಗಿ ವಿಪಕ್ಷಗಳು ಸರ್ಕಾರವನ್ನು ಎಚ್ಚರಿಸಿದ್ದವು. ಈ ಹಿನ್ನೆಲೆಯಲ್ಲಿ ಸಚಿವ ಎಚ್ಚರಿಕೆ ಹೊರಬಿದ್ದಿದೆ. ಈ ನಡುವೆ, ಒಐಸಿ ಸಮ್ಮೇಳನದ ಭದ್ರತೆಗಾಗಿ 15,000 ಭದ್ರತಾ ಸಿಬ್ಬಂದಿ ಹಾಗೂ ಪಾಕಿಸ್ತಾನ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ