ಪಾಕಿಸ್ಥಾನದಲ್ಲಿ ಮೂರನೇ ದಿನವೂ ವಿದ್ಯುತ್‌ ಬಿಕ್ಕಟ್ಟು

ರಾಜಧಾನಿ ಸಹಿತ ಪ್ರಮುಖ ನಗರಗಳು ಕಗ್ಗತ್ತಲಿನಲ್ಲಿ

Team Udayavani, Jan 26, 2023, 7:15 AM IST

ಪಾಕಿಸ್ಥಾನದಲ್ಲಿ ಮೂರನೇ ದಿನವೂ ವಿದ್ಯುತ್‌ ಬಿಕ್ಕಟ್ಟು

ಇಸ್ಲಾಮಾಬಾದ್‌: ಮೂರನೇ ದಿನವಾದ ಬುಧವಾರವೂ ಪಾಕಿಸ್ಥಾನದಲ್ಲಿ ವಿದ್ಯುತ್‌ ಸಂಪರ್ಕ ದೊರಕದೇ ದೇಶದ ಬಹುತೇಕ ಭಾಗಗಳ ನಾಗರಿಕರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ.

ಕಳೆದ ನಾಲ್ಕು ತಿಂಗಳುಗಳಲ್ಲಿ ವಿದ್ಯುತ್‌ ಸಂಪರ್ಕ ಇಲ್ಲದೇ ಎರಡನೇ ಬಾರಿ ಈ ರೀತಿಯ ದುಃಸ್ಥಿತಿಯನ್ನು ಪಾಕಿಸ್ಥಾನಿ ಯರು ಎದುರಿಸುತ್ತಿದ್ದಾರೆ. ದೇಶದ ಬಹುತೇಕ ಪ್ರದೇಶ ಗಳು ಕತ್ತಲಲ್ಲಿ ಕಳೆಯುತ್ತಿದೆ. ಇಸ್ಲಾಮಾಬಾದ್‌, ಕರಾಚಿ, ಲಾಹೋರ್‌, ಕ್ವೆಟ್ಟಾ ಸಹಿತ ದೇಶದ ಅನೇಕ ಪ್ರಮುಖ ನಗರಗಳಲ್ಲಿ ವಿದ್ಯುತ್‌ ಇಲ್ಲದೇ ಕೈಗಾರಿಕೆಗಳು, ಕಂಪೆನಿಗಳು ಸಂಪೂರ್ಣ ಸ್ಥಗಿತವಾಗಿವೆ. ಮಂಗಳವಾರ ನಗರ ಪ್ರದೇಶಗಳ ಕೆಲವೆಡೆ ವಿದ್ಯುತ್‌ ಪೂರೈಕೆ ಪುನರಾರಂಭ ಗೊಂಡಿತಾದರೂ ಬೇಡಿಕೆಯಷ್ಟು ವಿದ್ಯುತ್‌ ಪೂರೈಕೆ ಸಾಧ್ಯವಾಗಿರಲಿಲ್ಲ. ಬುಧ ವಾರ ಮತ್ತಷ್ಟು ಪ್ರದೇಶಗಳಿಗೆ ವಿದ್ಯುತ್‌ ಅನ್ನು ಪೂರೈಸಲು ಪ್ರಯತ್ನಿಸಲಾಗಿದೆಯಾದರೂ ಯಥಾಸ್ಥಿತಿಗೆ ಬರಲು ಇನ್ನೂ 2-3 ದಿನಗಳು ಬೇಕಾದೀತು ಎನ್ನಲಾಗಿದೆ.

ಇದೇ ವೇಳೆ ವಿದ್ಯುತ್‌ ಸಂಪರ್ಕ ಕಡಿತದಿಂದ ಉಂಟಾಗಿರುವ ಸಮಸ್ಯೆಗೆ ಪಾಕಿಸ್ಥಾನ ಪ್ರಧಾನಿ ಶೆಹಬಾಜ್‌ ಶರೀಫ್ ದೇಶದ ನಾಗರಿಕರ ಕ್ಷಮೆ ಯಾಚಿಸಿದ್ದಾರೆ.

ವಿದ್ಯುತ್‌ ಸಂಪರ್ಕ ಸರಿಪಡಿಸುವ ಬಗ್ಗೆ ಪಾಕಿಸ್ಥಾನ ಇಂಧನ ಸಚಿವ ಖುರ್ರಮ್‌ ದಸ್ತಗಿರ್‌ ಅವರ ಭರವಸೆಯ ಹೊರತಾಗಿಯೂ ಸಮಸ್ಯೆ ಬಗೆಹರಿಯದೇ ಜನರು ಪರಿತಪಿಸುತ್ತಿದ್ದಾರೆ.

ಉತ್ಪಾದನ ಘಟಕಗಳು ಕಾರ್ಯಾ ಚರಣೆಯನ್ನೇ ನಿಲ್ಲಿಸಿವೆ. ಈಗಾಗಲೇ ಇಂಧನ ಉಳಿತಾಯದ ನಿಟ್ಟಿನಲ್ಲಿ ರಾತ್ರಿ 8.30 ಗಂಟೆಯ ಬಳಿಕ ಮಾರುಕಟ್ಟೆ, ಮಾಲ್‌ ಸಹಿತ ಅಂಗಡಿ- ಮುಂಗಟ್ಟುಗಳನ್ನು ಮುಚ್ಚಲು ಸ್ಥಳೀಯ ಆಡಳಿತ ಆದೇಶಿಸಿದೆ.

ಇದೇ ವೇಳೆ ಅಮೆರಿಕ ವಿದೇಶಾಂಗ ಸಚಿವಾಲಯದ ವಕ್ತಾರ ನೆಡ್‌ ಪ್ರೈಸ್‌, ವಿದ್ಯುತ್‌ ಬಿಕ್ಕಟ್ಟು ಸರಿಪಡಿಸುವ ನಿಟ್ಟಿನಲ್ಲಿ ಪಾಕಿಸ್ಥಾನಕ್ಕೆ ಅಗತ್ಯವಿರುವ ನೆರವನ್ನು ನೀಡಲು ಅಮೆರಿಕ ಸಿದ್ಧವಿದೆ ಎಂದು ತಿಳಿಸಿದ್ದಾರೆ.

ಬೇಡಿಕೆಗಿಂತ ಕಡಿಮೆ ಪ್ರಮಾಣದ ವಿದ್ಯುತ್‌ ಸರಬರಾಜಿನ ಕಾರಣ ಸಮಸ್ಯೆ ಎದುರಾಗಿದೆ. ಅಂದಾಜು 6,600 ಮೆಗಾ ವ್ಯಾಟ್‌ ಕಲ್ಲಿದ್ದಲು ಹಾಗೂ 3,500 ಮೆಗಾ ವ್ಯಾಟ್‌ ಪರಮಾಣು ಸ್ಥಾವರಗಳು ಮರುಚಾಲನೆಗೊಳ್ಳಲು ಕನಿಷ್ಠ 72 ತಾಸು ಬೇಕಾಗುತ್ತದೆ. ಅಲ್ಲಿಯವರೆಗೆ ಕೈಗಾರಿಕೆ ಗಳಿಗೆ ಹೊರತಾಗಿ ಸಾಮಾನ್ಯ ನಾಗರಿಕರಿಗೆ ಅಲ್ಪ ತಾಸಿನ ವಿದ್ಯುತ್‌ ಪೂರೈಸಲಾಗುತ್ತದೆ ಎಂದು ಪಾಕ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಸತತವಾಗಿ ಪಾಕಿಸ್ಥಾನವು ವಿದ್ಯುತ್‌ ಬಿಕ್ಕಟ್ಟು ಎದುರಿಸುತ್ತಿದೆ. 2022ರ ಅಕ್ಟೋಬರ್‌ನಲ್ಲಿ ಉಂಟಾದ ವಿದ್ಯುತ್‌ ಸಮಸ್ಯೆ ಸರಿಪಡಿಸಲು 12 ತಾಸಿಗೂ ಹೆಚ್ಚು ಅವಧಿ ಬೇಕಾಗಿತ್ತು.

 

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.