ಕಳ್ಳಾಟ:ಕಾಶ್ಮೀರದಲ್ಲಿ ದಾಳಿ ನಡೆಸಲು ತಾಲಿಬಾನ್ ಉಗ್ರರ ಶಿಬಿರ Pak ವಶಕ್ಕೆ,ಉಗ್ರರಿಗೆ ತರಬೇತಿ
ಪಾಕಿಸ್ತಾನ ಕಾಶ್ಮೀರದ ಮೇಲೆ ದಾಳಿ ನಡೆಸಲು ತಾಲಿಬಾನ್ ಶಿಬಿರಗಳನ್ನು ಬಳಸಿಕೊಳ್ಳುತ್ತಿದೆ
Team Udayavani, Apr 17, 2020, 5:51 PM IST
Representative Image
ನವದೆಹಲಿ: ಇಡೀ ಜಗತ್ತು ಕೋವಿಡ್ 19 ವೈರಸ್ ನಿಂದ ತತ್ತರಿಸುತ್ತಿದ್ದರೆ, ಇತ್ತ ಪಾಕಿಸ್ತಾನ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ. ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಲ್ಲಿ ಪಾಕ್ ಸೇನೆ ಮತ್ತೆ ತಾಲಿಬಾನ್ ಉಗ್ರರ ಶಿಬಿರಗಳನ್ನು ಸಕ್ರಿಯಗೊಳಿಸುವ ಮೂಲಕ ಕಾಶ್ಮೀರದ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಬಯಲಾಗಿದೆ ಎಂದು ವರದಿ ತಿಳಿಸಿದೆ.
ಅಫ್ಘಾನಿಸ್ತಾನ ಭದ್ರತಾ ಪಡೆಗಳು ಸೆರೆ ಹಿಡಿದ ಜೈಶ್ ಎ ಮೊಹಮ್ಮದ್ ಉಗ್ರರು ಪಾಕಿಸ್ತಾನದ ಸಂಚನ್ನು ಬಯಲು ಮಾಡಿರುವುದಾಗಿ ವರದಿ ವಿವರಿಸಿದೆ. ಅಲ್ಲದೇ ಅಫ್ಘಾನಿಸ್ತಾನದಲ್ಲಿರುವ ಭಾರತದ ರಾಯಭಾರಿ ಕಚೇರಿ ಮೇಲೆ ದಾಳಿ ನಡೆಸಲು ಸಿದ್ದತೆ ನಡೆಸಿರುವುದಾಗಿ ತಿಳಿಸಿದೆ.
ಅಫ್ಘಾನ್ ಪಡೆಗಳಿಗೆ ಸೆರೆ ಸಿಕ್ಕಿರುವ ಉಗ್ರರಿಗೆ ಪಾಕಿಸ್ತಾನ ನಾಲ್ಕು ತಿಂಗಳ ಕಾಲ ಶಸ್ತ್ರಾಸ್ತ್ರ ತರಬೇತಿ ನೀಡಿ ದಾಳಿ ನಡೆಸುವಂತೆ ಅಫ್ಘಾನಿಸ್ತಾನಕ್ಕೆ ಕಳುಹಿಸಿಕೊಟ್ಟಿತ್ತು. ಇದಕ್ಕೂ ಮುನ್ನ ಪಾಕಿಸ್ತಾನ ಕಾಶ್ಮೀರದ ಮೇಲೆ ದಾಳಿ ನಡೆಸಲು ತಾಲಿಬಾನ್ ಶಿಬಿರಗಳನ್ನು ಬಳಸಿಕೊಳ್ಳುತ್ತಿದೆ ಎಂಬುದಾಗಿ ಭಾರತದ ಭದ್ರತಾ ಪಡೆಗಳು ಎಚ್ಚರಿಕೆಯ ಸಂದೇಶ ನೀಡಿತ್ತು. ಇದೀಗ ಜೈಶ್ ಉಗ್ರರು ತಪ್ಪೊಪ್ಪಿಕೊಳ್ಳುವ ಮೂಲಕ ಪಾಕಿಸ್ತಾನ ಮುಖವಾಡ ಮತ್ತೊಮ್ಮೆ ಬಯಲಾಗಿದೆ ಎಂದು ವರದಿ ವಿಶ್ಲೇಷಿಸಿದೆ.
ಅಫ್ಘಾನಿಸ್ತಾನದ ನಂಗಾರ್ ಹರ್ ಪ್ರಾಂತ್ಯದಲ್ಲಿ ಉಗ್ರರ ವಿರುದ್ಧ ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 15 ಉಗ್ರರನ್ನು ಹತ್ಯೆಗೈದಿದ್ದು, ತಾಲಿಬಾನ್ ಶಿಬಿರಗಳಲ್ಲಿ ಇದ್ದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದೆ. ಉಗ್ರರಲ್ಲಿ ಐವರು ಮಾತ್ರ ತಾಲಿಬಾನಿಗಳಿದ್ದು, ಉಳಿದವರು ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಸದಸ್ಯರು ಎಂದು ಭದ್ರತಾ ಪಡೆಗಳು ಪತ್ತೆಹಚ್ಚಿರುವುದಾಗಿ ವರದಿ ತಿಳಿಸಿದೆ.
ಪಾಕಿಸ್ತಾನದ ಐಎಸ್ ಐ ಕೂಡಾ ತಾಲಿಬಾನ್ ಉಗ್ರರನ್ನು ಕಾಶ್ಮೀರದೊಳಕ್ಕೆ ಕಳುಹಿಸಿಲು ಯತ್ನಿಸುತ್ತಿದೆ. ತಾಲಿಬಾನ್ ನಲ್ಲಿರುವ ಬಹುತೇಕ ಉಗ್ರರು ನಿವೃತ್ತ ಹಿರಿಯ ಯೋಧರು. ಅಲ್ಲದೇ ಗಡಿ ನಿಯಂತ್ರಣ ರೇಖೆಯಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರರು ಕೂಡಾ ಠಿಕಾಣಿ ಹೂಡಿದ್ದಾರೆ. ಕೆಲವರನ್ನು ತಾಲಿಬಾನ್ ಶಿಬಿರಗಳಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಭಾರತೀಯ ಭದ್ರತಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ