ಧ್ವಜ ಸುಡಲು ಬಂದರು ; ದೇಶಪ್ರೇಮಿಗಳೆದುರು ಸುಮ್ಮನಾದರು


Team Udayavani, Jan 27, 2019, 5:50 AM IST

sikh-flag-27-1.jpg

ವಾಷಿಂಗ್ಟನ್: ಪ್ರತ್ಯೇಕ ಖಲಿಸ್ಥಾನ ರಾಷ್ಟ್ರಕ್ಕಾಗಿ ಹೋರಾಡುತ್ತಿರುವ ಸಂಘಟನೆಯಾಗಿರುವ ಸಿಖ್ ಫಾರ್ ಜಸ್ಟೀಸ್ (SFJ) ಗಣರಾಜ್ಯೋತ್ಸವ ದಿನದಂದು ವಾಷಿಂಗ್ಟನ್ ನಲ್ಲಿರುವ ಭಾರತೀಯ ರಾಯಭಾರಿ ಕಛೇರಿಯ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆ ಜನಬೆಂಬಲವಿಲ್ಲದೆ ವಿಫಲವಾದ ಮಾಹಿತಿ ಇದೀಗ ಹೊರಬಿದ್ದಿದೆ.

ಗಣರಾಜ್ಯೋತ್ಸವ ದಿನದಂದು ಸಿಖ್ ಫಾರ್ ಜಸ್ಟೀಸ್ (SFJ) ಸಂಘಟನೆಯು ಭಾರತ ವಿರೋಧಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಮತ್ತು ಇದೇ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಸುಡುವ ಯೋಚನೆಯನ್ನೂ ಸಂಘಟನೆಯ ಸದಸ್ಯರು ಮಾಡಿಕೊಂಡಿದ್ದರು. ಆದರೆ ಪ್ರತಿಭಟನೆಯ ದಿನ SFJ ಪರವಾಗಿ 15 ರಿಂದ 20 ಸದಸ್ಯರು ಮಾತ್ರವೇ ಪ್ರತಿಭಟನಾ ಸ್ಥಳದಲ್ಲಿ ಹಾಜರಿದ್ದರು. ಇದೇ ಸಂದರ್ಭದಲ್ಲಿ ಭಾರತ ಪರ ಜಾಥಾವೊಂದನ್ನು ಅನಿವಾಸಿ ಭಾರತೀಯ ದೇಶಪ್ರೇಮಿಗಳು ಆಯೋಜಿಸಿದ್ದರು. ಭಾರತ ಪರ ಘೋಷಣೆಗಳನ್ನು ಕೂಗುತ್ತಾ, ತ್ರಿವರ್ಣ ಧ್ವಜವನ್ನು ಹಾರಿಸುತ್ತಾ ಈ ಗುಂಪು ರಾಯಭಾರಿ ಕಛೇರಿಯ ಎದುರು SFJಗೆ ಭರ್ಜರಿ ಶಾಕ್ ನೀಡಿತು.

ಭಾರತ ವಿರೋಧಿ ಪ್ರತಿಭಟನಾಕಾರರಲ್ಲಿ ಪಾಕ್ ಪ್ರಜೆಗಳು!
ಪ್ರತ್ಯಕ್ಷದರ್ಶಿಗಳು ಹೇಳುವಂತೆ ಸಿಖ್ ಫಾರ್ ಜಸ್ಟೀಸ್ (SFJ) ಸಂಘಟನೆ ಆಯೋಜಿಸಿದ್ದ ಈ ಪ್ರತಿಭಟನೆಯಲ್ಲಿ ಪಾಕಿಸ್ಥಾನೀಯರೇ ಇದ್ದರು, ಇದರಿಂದಾಗಿ ಈ ಪ್ರತಿಭಟನೆಯ ಆಯೋಜನೆಯ ಹಿಂದೆ ಪಾಕಿಸ್ಥಾನದ ಕೈವಾಡ ಇರುವ ಕುರಿತಾಗಿ ಇದೀಗ ಶಂಕೆ ವ್ಯಕ್ತವಾಗಿದೆ. 
ತಮ್ಮ ಪ್ರತಿಭಟನೆ ಯಶಸ್ವಿಯಾಗದಿದ್ದರೂ SFJ ತನ್ನ ಅಧೀಕೃತ ವೆಬ್ ಸೈಟ್ ನಲ್ಲಿ ಪ್ರತಿಭಟನೆ ಯಶಸ್ವಿಯಾಗಿರುವುದಾಗಿ ತಪ್ಪು ಮಾಹಿತಿಯನ್ನು ನೀಡಲಾಗಿದೆ. ಇದೇ ವೇಳೆ @sikhsforjustice, @SFJ_Lawyer ಟ್ವಟರ್ ಅಕೌಂಟ್ ಗಳ ಮೇಲೆ ಕಾನೂನು ಕ್ರಮ ಕೈಗೊಂಡು ಅವುಗಳನ್ನು ರದ್ದುಗೊಳಿಸಲಾಗಿದೆ.

ಅನಿವಾಸಿ ಸಿಖ್ ಸಮುದಾಯ ಖಂಡನೆ
SFJ ಆಯೋಜಿಸಿದ್ದ ಭಾರತ ವಿರೋಧಿ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಭಾರತದ ತ್ರಿವರ್ಣ ಧ್ವಜ ಸುಡುವ ಯೋಚನೆಗೆ ಅಮೆರಿಕಾದಲ್ಲಿರುವ ಸಿಖ್ ಸಮುದಾಯದ ಸದಸ್ಯರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ‘ಭಾರತದಲ್ಲಿ ಮಾತ್ರವಲ್ಲದೇ ವಿಶ್ವದ ಯಾವುದೇ ಭಾಗದಲ್ಲಿರುವ ಶಾಂತಿಪ್ರಿಯ ಸಿಖ್ ಸಮುದಾಯವು ಧ್ವಜ ಸುಡುವಂತಹ ಮಾದರಿಯ ಪ್ರತಿಭಟನೆಯನ್ನು ಯಾವತ್ತೂ ಬೆಂಬಲಿಸುವುದಿಲ್ಲ…’ ಎಂದು ಅಮೆರಿಕಾ ಸಿಖ್ ಸಂಘಟನೆ ತನ್ನ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

ಅಮೆರಿಕಾಕ್ಕೆ ಭಾರತದ ನೂತನ ರಾಯಭಾರಿಯಾಗಿ ನೇಮಕಗೊಂಡಿರುವ ಹರ್ಷ ಶ್ರಿಂಗ್ಲಾ ಅವರು ವಾಷಿಂಗ್ಟನ್ ನಲ್ಲಿರುವ ಭಾರತೀಯ ರಾಯಭಾರ ಕಛೇರಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಗಣರಾಜ್ಯೋತ್ಸವ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಅನಿವಾಸಿ ಭಾರತೀಯರು ಹಾಜರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.