ಕೋವಿಡ್ ಸೋಂಕು ನಿಯಂತ್ರಣಕ್ಕೆ ‘ಸ್ಮಾರ್ಟ್ ಲಾಕ್ ಡೌನ್’ ನತ್ತ ಪಾಕಿಸ್ತಾನ ಚಿತ್ತ..?!


Team Udayavani, Apr 22, 2021, 12:25 PM IST

Pakistan to impose lockdown in major cities as COVID-19 wave continues

ಕರಾಚಿ : ಪಾಕಿಸ್ತಾನದದಲ್ಲಿ ಅತ್ಯಂತ ಗಂಭೀರವಾದ ಕೋವಿಡ್ 19 ಪರಿಸ್ಥಿತಿಯಿಂದಾಗಿ, ಇಮ್ರಾನ್ ಖಾನ್ ಸರ್ಕಾರವು ಕೋವಿಡ್ ನಿಯಂತ್ರಣ ಮಾಡಲು ದೇಶದ ಪ್ರಮುಖ ನಗರಗಳಲ್ಲಿ ಲಾಕ್ ಡೌನ್ ವಿಧಿಸಲು ಮುಂದಾಗಿದೆ.

ಇದನ್ನು ಪಾಕಿಸ್ತಾನದ ಯೋಜನೆ, ಅಭಿವೃದ್ಧಿ ಮತ್ತು ಸ್ಪೆಷಲ್ ಇನಿಶಿಯೇಟಿವ್ಸ್  ಸಚಿವ ಅಸಾದ್ ಉಮರ್ ತಿಳಿಸಿದ್ದಾರೆ.

“ನಿಮ್ಮನ್ನು ಮತ್ತು ನಿಮ್ಮ ಸಹಚರರನ್ನು ನೋಡಿಕೊಳ್ಳಿ. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ, ಕೋವಿಡ್ 19 ಪರಿಸ್ಥಿತಿಯ ತಿವ್ರತೆಯನ್ನು ಅರ್ಥಮಾಡಿಕೊಳ್ಳಬೇಕೆಂದು ಸಚಿವರು ದೇಶದ ಜನತೆಯನ್ನು ಉಮರ್ ಒತ್ತಾಯಿಸಿದರು ಎಂದು ಸುದ್ದಿ ಸಂಸ್ಥೆ ಡಾನ್ ವರದಿ ಮಾಡಿದೆ.

ಓದಿ : Covid ಹೆಚ್ಚಳ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500 ಅಂಕ ಕುಸಿತ, 14,220ಕ್ಕೆ ತಲುಪಿದ ನಿಫ್ಟಿ

“ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬೇಕಾಗಿದೆ. ವೈರಸ್ ವೇಗವಾಗಿ ಹರಡುತ್ತಿದೆ ಮತ್ತು ನಮ್ಮ ಆಸ್ಪತ್ರೆಗಳು ತುಂಬುತ್ತಿವೆ  ನಾವು ಈಗ ಕಾರ್ಯನಿರ್ವಹಿಸದಿದ್ದರೆ, ಲಾಕ್ ಡೌನ್ ಮಾಡುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆ ಇಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಪ್ರಮುಖ ನಗರಗಳನ್ನು ಲಾಕ್ ಡೌನ್ ಮಾಡುವ ಮೊದಲು ಕೆಲವು ದಿನಗಳ ಗಡಿ ಇದೆ ಎಂದು ಉಮರ್ ಹೇಳಿದ್ದು,. ಆರೋಗ್ಯ ಸಚಿವರು ಹಾಗೂ ತಜ್ಞ ವೈದ್ಯರ ನಡುವೆ ಒಂದು ಸುತ್ತಿನ ಸಮಾಲೋಚನೆಯನ್ನು ಮಾಡಬೇಕಿದೆ. ಇನ್ನು, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ತಮ್ಮ ಆರೋಗ್ಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಗಳ ಬಗ್ಗೆ ಚರ್ಚೆ ಮಾಡಬೇಕು ಎಂದು ಉಮರ್ ರಾಜ್ಯಗಳ  ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.  ‘ನಮಗೆ ಈಗ ನಾಯಕತ್ವ ಬೇಕಾಗಿದೆ’ ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, ರಾಷ್ಟ್ರೀಯ ಕಮಾಂಡ್ ಮತ್ತು ಆಪರೇಷನ್ ಸೆಂಟರ್ (ಎನ್‌ ಸಿ ಒ ಸಿ) ಕೂಡ ಪಾಕಿಸ್ತಾನದ ಪ್ರಮುಖ ನಗರಗಳಲ್ಲಿ ಲಾಕ್‌ ಡೌನ್ ವಿಧಿಸುವ ಸಾಧ್ಯತೆಯಿದೆ.

ಇನ್ನು, ಪಾಕಿಸ್ತಾನದಲ್ಲಿ ದಿನ ನಿತ್ಯ ಕೋವಿಡ್ ಸೋಂಕು ಹಠಾತ್ ಬೆಳವಣಿಗೆಯಾಗುತ್ತಿರುವ ಹಿನ್ನಲೆಯಲ್ಲಿ, ಕರಾಚಿಯ ಅಧಿಕಾರಿಗಳು ಮೇ 5 ರವರೆಗೆ ಮೂರು ಪ್ರದೇಶಗಳಲ್ಲಿ ಸ್ಮಾರ್ಟ್ ಲಾಕ್‌ ಡೌನ್‌ ಗಳನ್ನು ವಿಸ್ತರಿಸುವುದಾಗಿ ಘೋಷಿಸಿದ್ದಾರೆ.

ಅಧಿಸೂಚನೆಯ ಪ್ರಕಾರ,  ಗುಲ್ಬರ್ಗ್, ಉತ್ತರ ಕರಾಚಿ ಮತ್ತು ಉತ್ತರ ನಾಜಿಮಾಬಾದ್. ಕೋವಿಡ್ ಸೋಂಕಿನ  ಮೂರನೇ ಅಲೆಗೆ ಪಾಕಿಸ್ತಾನ ಸಾಕ್ಷಿಯಾಗಿದೆ. ಕಳೆದ 24 ಗಂಟೆಗಳಲ್ಲಿ, ದೇಶವು 148 ಹೊಸ ಕೋವಿಡ್ -19 ಸಾವುಗಳು ಸಂಭವಿಸುವುದರ ಮೂಲಕ ಪಾಕಿಸ್ತಾನದಲ್ಲಿ ಒಟ್ಟು ಕೋವಿಡ್ ನಿಂದ ಮೃತರಾದವರ ಸಂಖ್ಯೆ 16,600 ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ.

ಇನ್ನು, 5,499 ಹೊಸ ಕೋವಿಡ್ 19 ಪ್ರಕರಣಗಳೊಂದಿಗೆ, ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 772,381 ಆಗಿದೆ.

ಓದಿ : ಶಿರಾಡಿ: ಗುಂಡಿಗೆ ಬಿದ್ದು ಮರಕ್ಕೆ ಗುದ್ದಿದ ಲಾರಿ, ಚಾಲಕ ಸ್ಥಳದಲ್ಲೇ ಸಾವು

ಟಾಪ್ ನ್ಯೂಸ್

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.