ಡಿಜಿಎಂಒ ಸಭೆಗೆ ಪಾಕ್ ಒಲವು?
Team Udayavani, Jan 17, 2018, 6:05 AM IST
ಇಸ್ಲಾಮಾಬಾದ್/ನವದೆಹಲಿ: ಭಾರತದ ನೆಲಕ್ಕೆ ನುಗ್ಗಿ ಹುಚ್ಚು ಸಾಹಸ ಮಾಡಲು ಪ್ರಯತ್ನಿಸಿದ್ದಕ್ಕೆ ತಕ್ಕ ಬೆಲೆ ತೆತ್ತಿರುವ ಪಾಕಿಸ್ತಾನ ಈಗ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರ (ಡಿಜಿಎಂಒ) ಮೂಲಕ ಮಾತುಕತೆಗೆ ಮುಂದಾಗಿದೆ.
ಗಮನಾರ್ಹ ಅಂಶವೆಂದರೆ 4 ವರ್ಷಗಳ ಬಳಿಕ ನೆರೆಯ ರಾಷ್ಟ್ರ ಇಂಥ ಪ್ರಯತ್ನಕ್ಕೆ ಕೈ ಹಾಕಿದೆ ಎಂದು ಪಾಕಿಸ್ತಾನದ “ದ ಡಾನ್’ ಪತ್ರಿಕೆ ವರದಿ ಮಾಡಿದೆ. ಇಂಥ ಕ್ರಮದ ಮೂಲಕ ಭಾರತದ ಜತೆಗಿನ ಬಿಕ್ಕಟ್ಟಿನ ಪ್ರಮಾಣ ತಗ್ಗಿಸಲು ಮುಂದಾಗಿದೆ. ಪಾಕಿಸ್ತಾನದ ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಸಭೆಯ ಬಳಿಕ ಇಂಥ ಪ್ರಸ್ತಾಪ ಮಾಡಿದ್ದಾರೆ ಎಂದು ಪತ್ರಿಕೆ ಹೇಳಿಕೊಂಡಿದೆ. ಕಳೆದ ನವೆಂಬರ್ನಲ್ಲಿ ಪಾಕಿಸ್ತಾನವೇ ಕೋರಿಕೆ ಸಲ್ಲಿಸಿದ್ದರಿಂದ ದೂರವಾಣಿ ಮೂಲಕ ಡಿಜಿಎಂಒಗಳ ಮಾತುಕತೆ ನಡೆಸಲಾಗಿತ್ತು.
ಈ ನಡುವೆ ಭಾರತ ಪಾಕಿಸ್ತಾನಕ್ಕೆ ಬೆದರಿಕೆ ಹುಟ್ಟಿಸುವ ರಾಷ್ಟ್ರವಲ್ಲ ಎಂದು ಅಮೆರಿಕ ಪ್ರತಿಪಾದಿಸಲು ಯತ್ನಿಸುತ್ತಿದೆ ಎಂದು ನೆರೆಯ ರಾಷ್ಟ್ರದ ರಕ್ಷಣಾ ಸಚಿವ ಖುರ್ರಂ ದಸ್ತಗಿರ್ ಖಾನ್ ಹೇಳಿದ್ದಾರೆ. ಆದರೆ ಅಮೆರಿಕ ಭಾರತ ಎಲ್ಒಸಿಯಾದ್ಯಂತ ನಡೆಸುತ್ತಿರುವ ದೌರ್ಜನ್ಯವನ್ನು ಅಮೆರಿಕ ಮನಗಂಡಿಲ್ಲ ಎಂದಿದ್ದಾರೆ.
ಸೇನೆ ವಿರುದ್ಧ ಸಾಮಾಜಿಕ ಜಾಲತಾಣ ಬಳಕೆ: ಭಾರತೀಯ ಸೇನೆ ವಿರುದ್ಧ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಭೂಸೇನಾ ಮುಖ್ಯಸ್ಥ ಜ.ಬಿಪಿನ್ ರಾವತ್ ಹೇಳಿದ್ದಾರೆ. ಭೂಸೇನೆಯ 70ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿÉ ಮಾತಾಡಿ, ಈ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ ಇರಬೇಕಾಗಿದೆ ಎಂದು ಹೇಳಿದ್ದಾರೆ. ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುಕೋರರಿಗೆ ಪಾಕಿಸ್ತಾನ ನಿರಂತರವಾಗಿ ನೆರವು ನೀಡುತ್ತಾ ಬರುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ರೈಫಲ್ ಖರೀದಿಗೆ ಖರೀದಿ ಮಂಡಳಿ ಒಪ್ಪಿಗೆ : ಸೇನೆಗೆ ಅಗತ್ಯವಾಗಿರುವ ಅಸಾಲ್ಟ್ ರೈಫಲ್ಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ (ಡಿಎಸಿ) ಒಪ್ಪಿಗೆ ನೀಡಿದೆ. ಅದಕ್ಕಾಗಿ ಒಟ್ಟು 3,547 ಕೋಟಿ ರೂ. ವೆಚ್ಚವಾಗಲಿದೆ. ಆದ್ಯತೆಯ ಮೇರೆಗೆ ಅದನ್ನು ಖರೀದಿಸಲಾಗು ವುದು ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ