ತಾಲಿಬಾನ್ ಉಗ್ರರ ಪೈರಿಂಗ್ ಪಾಕಿಸ್ಥಾನ ಸೈನಿಕರು ಪರಾರಿ
Team Udayavani, Dec 13, 2022, 12:44 AM IST
ಇಸ್ಲಾಮಾಬಾದ್/ಕಾಬೂಲ್: ಭಾರತದ ವಿರುದ್ಧ ಸದಾ ಸಂಚು ರೂಪಿಸುವ ಪಾಕಿಸ್ಥಾನದ ಸೈನಿಕರು ತಾಲಿಬಾನ್ ಉಗ್ರರಿಗೆ ಹೆದರಿ ಪರಾರಿಯಾದ ಘಟನೆ ನಡೆದಿದೆ.
ಅಫ್ಘಾನಿಸ್ಥಾನಕ್ಕೆ ಹೊಂದಿ ಕೊಂಡಂತೆ ಇರುವ ದುರ್ರಾಂಡ್ ಎಂಬಲ್ಲಿ ಪಾಕ್ನ ಸೈನಿಕರು ಮತ್ತು ಉಗ್ರರ ನಡುವೆ ಬಿರುಸಿನ ಗುಂಡಿನ ಚಕಮಕಿ ನಡೆದಿದೆ. ಉಗ್ರರು ನಡೆಸುತ್ತಿರುವ ಗುಂಡಿನ ಸುರಿ ಮಳೆಯಿಂದ ಅವರು ಕಂಗಾಲಾ ಗಿದ್ದಾರೆ.
ಅಂತಿಮವಾಗಿ ಅವರು ಇದ್ದ ಶಸ್ತ್ರಾಸ್ತ್ರಗಳನ್ನೂ ಎಸೆದು ಸೈನಿಕರು ಕಾಲಿಗೆ ಬುದ್ಧಿ ಹೇಳಿದ್ದಾರೆ. ಇನ್ನೊಂದೆಡೆ ಅಫ್ಘಾನಿಸ್ಥಾನದ ಸ್ಪಿನ್ ಬೋಲ್ಡಕ್ ಎಂಬಲ್ಲಿ ಪಾಕಿಸ್ಥಾನ ಸೇನೆ ನಡೆಸಿದ ಮೋರ್ಟರ್ ದಾಳಿಯಲ್ಲಿ ಕನಿಷ್ಠ ಐವರು ಅಸುನೀಗಿದ್ದಾರೆ. ಈ ಘಟನೆಯನ್ನು 17 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಮಾನ್ ಎಂಬಲ್ಲಿ ತಾಲಿಬಾನ್ ಉಗ್ರರು ಪಾಕಿಸ್ಥಾನದ 6 ಮಂದಿಯನ್ನು ಕೊಂದ ಬಳಿಕ ಈ ಘಟನೆ ನಡೆದಿದೆ. ಪಾಕಿಸ್ಥಾನ ಪ್ರಧಾನಿ ಶೆಹಬಾಜ್ ಷರೀಫ್ ಈ ಘಟನೆಯನ್ನು ಖಂಡಿಸಿದ್ದಾರೆ.
26/11 ಮಾದರಿ ದಾಳಿ: ಇದೇ ವೇಳೆ, ಅಫ್ಘಾನಿಸ್ಥಾನ ರಾಜಧಾನಿ ಕಾಬೂಲ್ನಲ್ಲಿ ಚೀನ ನಾಗರಿಕರು ತಂಗುವ ಹೊಟೇಲ್ ಮೇಲೆ ಉಗ್ರರು 26/11 ಮಾದರಿಯಲ್ಲಿ ದಾಳಿಗೆ ಯತ್ನಿಸಿದ್ದಾರೆ. ಈ ಸಂದರ್ಭ ದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆ ಸಿದ ತಾಲಿಬಾನ್ ಪಡೆ ಮೂವರು ದಾಳಿಕೋರರನ್ನು ಕೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು