ಷರೀಫ್ಗೆ ಪಾಕ್ ಸರಕಾರ ತರಾಟೆ
Team Udayavani, May 15, 2018, 6:00 AM IST
ಇಸ್ಲಾಮಾಬಾದ್: ಪಾಕಿಸ್ಥಾನವೇ 2011ರಲ್ಲಿ ಮುಂಬಯಿ ದಾಳಿ ನಡೆಸಲು ಉಗ್ರರನ್ನು ಕಳುಹಿಸಿತ್ತು ಎಂಬ ಮಾಜಿ ಪ್ರಧಾನಿ ನವಾಜ್ ಷರೀಫ್ರ ಹೇಳಿಕೆಯನ್ನು ಪಾಕ್ನ ರಾಷ್ಟ್ರೀಯ ಭದ್ರತಾ ಮಂಡಳಿ ಪ್ರಬಲವಾಗಿ ಖಂಡಿಸಿದೆ. ಅವರು ಆಧಾರ ರಹಿತ, ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ ಎಂದು ಹೇಳಿದೆ.
ಜತೆಗೆ, ಷರೀಫ್ ಹೇಳಿಕೆ ಬಗ್ಗೆ ಎನ್ಎಸ್ಸಿ ಸಭೆಯಲ್ಲಿ ಪರಿಶೀಲಿಸಲಾಗಿದೆ. ಮುಂಬೈ ದಾಳಿಗೆ ಸಂಬಂಧಿಸಿದ ವಿಚಾರಣೆ ವಿಳಂಬಕ್ಕೆ ಭಾರತವೇ ಕಾರಣ ಹೊರತು ಪಾಕಿಸ್ಥಾನ ಅಲ್ಲ ಎಂದು ಪ್ರಕಟಣೆಯಲ್ಲಿ ಪ್ರಸ್ತಾಪಿಸಲಾಗಿದೆ. ಭಾರತ ಅತ್ಯಂತ ತರಾತುರಿಯಲ್ಲಿ ಉಗ್ರ ಅಜ್ಮಲ್ ಕಸಬ್ನನ್ನು ಗಲ್ಲಿಗೇರಿಸಿತು ಎಂದೂ ಹೇಳಿದೆ.
ಷರೀಫ್ ವಿರುದ್ಧ ದೇಶದ್ರೋಹ ಆರೋಪ ಹೊರಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಪತ್ರಿಕೆಗೆ ಷರೀಫ್ ನೀಡಿದ ಸಂದರ್ಶನವನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ ಎಂದು ಪಾಕ್ ಪ್ರಧಾನಿ ಷಹೀದ್ ಕಖಾನ್ ಅಬ್ಟಾಸಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ