ನದಿಯಲ್ಲಿ ಹಡಗುಗಳ ಡಿಕ್ಕಿ : 26 ಜನರ ದುರ್ಮರಣ
ವರದಿ ನೀಡಲು ನಾಲ್ಕು ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದೆ ಎಂದು ವರದಿ ತಿಳಿಸಿದೆ.
Team Udayavani, Apr 5, 2021, 6:13 PM IST
ಢಾಕಾ : ಎರಡು ಹಡಗುಗಳು ನಡುವೆ ಡಿಕ್ಕಿ ಸಂಭವಿಸಿ 26 ಜನರು ದುರ್ಮರಣ ಹೊಂದಿರುವ ಭೀಕರ ದುರ್ಘಟನೆ ಬಾಂಗ್ಲಾದೇಶದ ಶಿತಲಖ್ಯಾ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ.
ನಾರಾಯಣಗಂಜ್ ಜಿಲ್ಲೆಯಿಂದ 16 ಕಿ.ಮೀ ದೂರದಲ್ಲಿ ಈ ದುರ್ಘಟನೆ ಸಂಭವಿಸಿದೆ. 100 ಜನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪ್ಯಾಸೆಂಜರ್ ಹಡಗು ಸರಕು ಸಾಗಾಣಿಕೆಯ ಹಡಗಿಗೆ ಡಿಕ್ಕಿ ಹೊಡೆದು ನದಿ ನೀರಿನಲ್ಲಿ ಮುಳುಗಡೆಯಾಗಿದೆ.
ಕೋಸ್ಟ್ ಗಾರ್ಡ್, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಭಾನುವಾರ ಐದು ಹಾಗೂ ಸೋಮವಾರ 21 ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ ಎಂದು ವರದಿಗಳು ತಿಳಿಸಿವೆ.
ತನಿಖೆ :
ಘಟನೆ ಕುರಿತು ತನಿಖೆ ನಡೆಸಲು ಏಳು ಜನ ಸದಸ್ಯರ ಸಮಿತಿ ರಚಿಸಿರುವುದಾಗಿ ನಾರಾಯಣಗಂಜ್ ಜಿಲ್ಲಾಧಿಕಾರಿ ಮೊಸ್ಟೈನ್ ಬಿಲ್ಹಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜಿಲ್ಲಾಡಳಿತದಿಂದ ಮೃತರ ಪ್ರತಿ ಕುಟುಂಬಗಳಿಗೆ ಪರಿಹಾರ (296 ಅಮೆರಿಕನ್ ಡಾಲರ್ ) ನೀಡುವುದಾಗಿ ಅವರು ಹೇಳಿದ್ದಾರೆ.
ಇನ್ನು ಬಾಂಗ್ಲಾದೇಶದ ಒಳನಾಡಿನ ಜಲ ಸಾರಿಗೆ ಪ್ರಾಧಿಕಾರವು ಸಹ ಘಟನೆ ಕುರಿತು ತನಿಖೆ ನಡೆಸಿ ವರದಿ ನೀಡಲು ನಾಲ್ಕು ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ