ಹಿಂದೂ ದೇವಾಲಯದ ಮೇಲೆ ಯಾವುದೇ ಧರ್ಮದವರು ದಾಳಿ ನಡೆಸಿದ್ರೂ ಶಿಕ್ಷೆ ಖಚಿತ: ಹಸೀನಾ
ಯಾರು ಈ ಘಟನೆಗೆ ಕಾರಣರಾಗಿದ್ದಾರೋ ಅವರನ್ನು ಪತ್ತೆ ಹಚ್ಚಿ ಶಿಕ್ಷಿಸಲಾಗುವುದು ಎಂದು ಹೇಳಿದರು.
Team Udayavani, Oct 15, 2021, 12:36 PM IST
ಢಾಕಾ:ಹಿಂದೂ ದೇವಾಲಯಗಳು ಮತ್ತು ದುರ್ಗಾ ಪೂಜಾ ಪೆಂಡಾಲ್ ಗಳ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯ ಎಸಗಿದ ಘಟನೆಯಲ್ಲಿ ಶಾಮೀಲಾದವರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಲಾಗುವುದು, ಅವರು ಯಾವುದೇ ಧರ್ಮದವರಿರಲಿ ತಕ್ಕ ಶಿಕ್ಷೆ ವಿಧಿಸಲಾಗುವುದು ಎಂದು ಬಾಂಗ್ಲಾದೇಶ ಪ್ರಧಾನಮಂತ್ರಿ ಶೇಖ್ ಹಸೀನಾ ಶುಕ್ರವಾರ (ಅಕ್ಟೋಬರ್ 15) ತಿಳಿಸಿದ್ದಾರೆ.
ದೇಶದಲ್ಲಿ ಇಂತಹ ಕೋಮು ಘಟನೆಗಳನ್ನು ನಿಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ. ಕೊಮಿಲ್ಲಾದಲ್ಲಿ ನಡೆದ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತಿದೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಇದರಲ್ಲಿ ಧರ್ಮದ ವಿಚಾರವೂ ಇಲ್ಲ. ಆರೋಪಿಗಳು ಯಾರು ಎಂದು ಪತ್ತೆ ಹಚ್ಚಿ ಶಿಕ್ಷೆ ನೀಡುವುದಾಗಿ ಹಸೀನಾ ಅವರು ತಿಳಿಸಿರುವುದಾಗಿ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.
ಢಾಕಾದಲ್ಲಿರುವ ಢಾಕೇಶ್ವರಿ ನ್ಯಾಶನಲ್ ಟೆಂಪಲ್ ನಲ್ಲಿ ದುರ್ಗಾ ಪೂಜಾ ಕಾರ್ಯಕ್ರಮದಲ್ಲಿ ಹಿಂದೂ ಸಮುದಾಯದವರಿಗೆ ಶುಭಾಶಯ ಕೋರಿದ ಸಂದರ್ಭದಲ್ಲಿ ಶೇಖ್ ಹಸೀನಾ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದ ಶೇಖ್ ಹಸೀನಾ, ಕೊಮಿಲ್ಲಾದಲ್ಲಿ ದೇವಸ್ಥಾನಗಳನ್ನು ಒಡೆದ ಘಟನೆ ನಿಜಕ್ಕೂ ದುರದೃಷ್ಟಕರ ಎಂದು ಹೇಳಿದರು. ಘಟನೆಗೆ ಸಂಬಂಧಿಸಿದಂತೆ ನಮಗೆ ದೊಡ್ಡ ಪ್ರಮಾಣದ ಮಾಹಿತಿ ಲಭ್ಯವಾಗಿದೆ. ಯಾರು ಈ ಘಟನೆಗೆ ಕಾರಣರಾಗಿದ್ದಾರೋ ಅವರನ್ನು ಪತ್ತೆ ಹಚ್ಚಿ ಶಿಕ್ಷಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ