ಪಿಎಚ್ ಡಿ, ಸ್ನಾತಕೋತ್ತರ ಪದವಿಗಳಿಗೆ ಬೆಲೆಯಿಲ್ಲ : ತಾಲಿಬಾನ್ ಶಿಕ್ಷಣ ಸಚಿವ ಹೇಳಿದ್ದೇನು..?
Team Udayavani, Sep 8, 2021, 11:16 AM IST
ಪ್ರಾತಿನಿಧಿಕ ಚಿತ್ರ
ಕಾಬೂಲ್ : ತಾಲಿಬಾನ್ ಸರ್ಕಾರ ರಚನೆಯಾದ ಬೆನ್ನಿಗೆ ಅಲ್ಲಿನ ಶಿಕ್ಷಣ ಸಚಿವ ಶೇಖ್ ಮೊಲ್ವಿ ನೂರುಲ್ಲಾ ಮುನೀರ್, ಪಿ ಎಚ್ ಡಿ ಹಾಗೂ ಸ್ನಾತಕೋತ್ತರ ಪದವಿಗಳು ಮಾನ್ಯತೆಯನ್ನು ಹೊಂದಿಲ್ಲ ಎಂದು ಹೇಳಿದ್ದು, ಇಡೀ ಜಗತ್ತು ತಾಲಿಬಾನ್ ಸರ್ಕಾರದ ಸಚಿವನೋರ್ವನ ಹೇಳಿಕೆಯತ್ತ ತಿರುಗಿ ನೋಡುವಂತೆ ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಶೇಖ್ ಮೊಲ್ವಿ ನೂರುಲ್ಲಾ ಮುನೀರ್, ನೋಡಿ ಅಫ್ಗಾನಿಸ್ತಾನದ ಅಧಿಕಾರ ಈಗ ತಾಲಿಬಾನ್ ನೊಂದಿಗಿದೆ. ತಾಲಿಬಾನ್ ನಾಯಕರು ಯಾರೂ ಪಿ ಎಚ್ ಡಿ ಹಾಗೂ ಸ್ನಾತಕೋತ್ತರ ಪದವಿಯನ್ನು ಹೊಂದಿದವರಲ್ಲ. ಪಿ ಎಚ್ ಡಿ ಹಾಗೂ ಸ್ನಾತಕೋತ್ತರ ಪದವಿಗೆ ಇಲ್ಲಿ ಯಾವುದೇ ಮಾನ್ಯತೆ ಇಲ್ಲ. ಬೆಲೆಯೂ ಇಲ್ಲ ಎಂದಿದ್ದಾರೆ.
ಇದನ್ನೂ ಓದಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,875 ಕೋವಿಡ್ ಪ್ರಕರಣ ಪತ್ತೆ, 369 ಮಂದಿ ಸಾವು
ನಿನ್ನೆಯಷ್ಟೇ ಅಫ್ಗಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗಿದ್ದು, ವಿಶ್ವ ಸಂಸ್ಥೆಯ ಭಯೋತ್ಪಾದಕ ಪಟ್ಟಿಯಲ್ಲಿರುವ ತಾಲಿಬಾನ್ ನಾಯಕ ಮೊಹಮ್ಮದ್ ಹಸನ್ ಅಖುಂದ್ ಹೊಸ ಪ್ರಧಾನಿ ಯಾಗಿದ್ದಾನೆ. ಅಬ್ದುಲ್ ಘನಿ ಬರಾದರ್ ಉಪ ಪ್ರಧಾನಿಯಾದರೆ, ಜಾಗತಿಕ ಉಗ್ರ ಸಿರಾಜುದ್ದೀನ್ ಹಖಾನಿಯನ್ನು ಆಂತರಿಕ ಸಚಿವ(ಗೃಹ ಸಚಿವ) ಎಂದು ಘೋಷಿಸಲಾಗಿದೆ.
ದೋಹಾ ಟೀಂ ಮತ್ತು ಹಖಾನಿ ತಂಡದ ಸಮ್ಮಿಶ್ರಣದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಇದು ಮಧ್ಯಂತರ ಸರ್ಕಾರವೆಂದು ತಾಲಿಬಾನ್ ಹೇಳಿಕೊಂಡಿದೆ. ಮುಲ್ಲಾ ಒಮರ್ ನ ಪುತ್ರ ಮುಲ್ಲಾ ಮೊಹಮ್ಮದ್ ಯಾಕೂಬ್ ರಕ್ಷಣೆ, ಹಿದಾಯಿ ತುಲ್ಲಾ ಬದ್ರಿ ಹಣಕಾಸು, ಆಮೀರ್ ಖಾನ್ ಮುತ್ತಾ ಖೀ ವಿದೇಶಾಂಗ, ಶೇರ್ ಅಬ್ಟಾಸ್ ಸ್ಟಾನಿಕ್ ಝೈ ಉಪ ವಿದೇಶಾಂಗ ಸಚಿವ, ಅಬ್ದುಲ್ ಹಕೀಮ್ ಕಾನೂನು ಸಚಿವ, ಕೈರುಲ್ಲಾಹ್ ಖೈರುಕ್ವಾ ಮಾಹಿತಿ ಸಚಿವ, ಜಬೀಯುಲ್ಲಾಹ್ ಮುಜಾಹಿದ್ ಉಪ ಮಾಹಿತಿ ಸಚಿವನಾಗಿದ್ದಾನೆ.
ಸದ್ಯ ಈ ಹೆಸರುಗಳನ್ನು ಪ್ರಕಟಿಸಲಾಗಿದ್ದು, ಉಳಿದ ಸಚಿವರ ಹೆಸರುಗಳನ್ನು ಮುಂದೆ ಪ್ರಕಟಿಸಲಾಗುತ್ತದೆ ಎಂದು ತಾಲಿಬಾನ್ ಉಗ್ರ ಪಡೆಯ ವಕ್ತಾರ ಜಬೀವುಲ್ಲಾಹ್ ಮುಜಾಹಿದ್ ಹೇಳಿರುವುದಾಗಿ ವರದಿ ತಿಳಿಸಿದೆ.
ಇನ್ನು, ತಾಲಿಬಾನ್ ಸರ್ಕಾರದ ಶಿಕ್ಷಣ ಸಚಿವ ಶೇಖ್ ಮೊಲ್ವಿ ನೂರುಲ್ಲಾ ಮುನೀರ್, ನೀಡಿರುವ ಹೇಳಿಕೆ ತಾಲಿಬಾನ್ ಸರ್ಕಾರದ ಪರಮೋಚ್ಛ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಅಫ್ಗಾನಿಸ್ತಾನದಲ್ಲಿ ರಚನೆಯಾಯ್ತು ಹಂಗಾಮಿ ಸರ್ಕಾರ : ಮೊಹಮ್ಮದ್ ಯಾಕೂಬ್ ರಕ್ಷಣಾ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ
ಪಾಕ್ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
MUST WATCH
ಹೊಸ ಸೇರ್ಪಡೆ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ