ವಿಮಾನ ಪತನ:  ಭಾರತದ ಪೈಲಟ್‌ ಸೇರಿ 188 ಸಾವು


Team Udayavani, Oct 30, 2018, 8:18 AM IST

flight.png

ಜಕಾರ್ತಾ / ಹೊಸದಿಲ್ಲಿ: ಇಂಡೋನೇಷ್ಯಾದ ಲಯನ್‌ ಏರ್‌ ಸಂಸ್ಥೆಗೆ ಸೇರಿದ ವಿಮಾನ ಪತನಗೊಂಡು ಸಮುದ್ರಕ್ಕೆ ಬಿದ್ದ ಪರಿಣಾಮ ಭಾರತದ ಪೈಲಟ್‌ ಭವ್ಯೇ ಸುನೇಜಾ ಸಹಿತ 188 ಮಂದಿ ಪ್ರಯಾಣಿಕರು ಅಸುನೀಗಿದ್ದಾರೆ. ಇಂಡೋನೇಷ್ಯಾ ರಾಜಧಾನಿ ಜಕಾರ್ತಾದಿಂದ ಪಂಗ್‌ಕಲ್‌ ಪಿನಾಂಗ್‌ ದ್ವೀಪಕ್ಕೆ ಹೊರಟ 13 ನಿಮಿಷಗಳಲ್ಲಿ ರೇಡಾರ್‌ನಿಂದ ಸಂಪರ್ಕ ಕಳೆದುಕೊಂಡು ವಿಮಾನ ಅದೃಶ್ಯವಾಗಿತ್ತು.

ಸೋಮವಾರ ಬೆಳಗ್ಗೆ ಭಾರತೀಯ ಕಾಲಮಾನ 6.20ರ ಸುಮಾರಿಗೆ ಘಟನೆ ಸಂಭವಿಸಿದೆ. ಲಯನ್‌ ಏರ್‌ ಸಂಸ್ಥೆಯ ಬೋಯಿಂಗ್‌ 737 ಮ್ಯಾಕ್ಸ್‌ ಅಪಘಾತಕ್ಕೀಡಾದ ವಿಮಾನ. ಮೊದಲ ಬಾರಿಗೆ ಈ ಮಾದರಿಯ ವಿಮಾನ ಪತನವಾಗಿದೆ.

ಸಮುದ್ರಕ್ಕೆ ವಿಮಾನ ಅಪ್ಪಳಿಸಿ ಸುಮಾರು 30-40 ಮೀಟರ್‌ ಆಳಕ್ಕೆ ಪ್ರವೇಶಿಸಿರಬಹುದು ಎಂದು ಅಂದಾಜಿಸಲಾಗಿದೆ. ವಿಮಾನದಲ್ಲಿ ಐವರು ಸಿಬಂದಿ, ಇಬ್ಬರು ಪೈಲಟ್‌ಗಳು, 178 ಮಂದಿ ಪ್ರಯಾಣಿಕರು, ಒಂದು ಮಗು, ಎರಡು ಶಿಶುಗಳು ಇದ್ದವು ಎಂದು ಇಂಡೋನೇಷ್ಯಾ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯದ ನಿರ್ದೇಶಕ ಸಿಂಧು ರಹಾಯು ತಿಳಿಸಿದ್ದಾರೆ. ರಾಡಾರ್‌ ಸಂಪರ್ಕ ಕಡಿತ ಗೊಳ್ಳುವ ಮುನ್ನವೇ ಅದನ್ನು ಏರ್‌ಪೋರ್ಟ್‌ಗೆ ವಾಪಸಾಗುವಂತೆ ಸೂಚಿಸಲಾಗಿತ್ತು. ರಾಡಾರ್‌ ಪ್ರಕಾರ ಟೇಕ್‌ ಆಫ್ ಆಗಿ ದಕ್ಷಿಣಕ್ಕೆ ತಿರುಗಿ ಉತ್ತರದತ್ತ ಹೊರಳಿಕೊಳ್ಳುತ್ತಿರುವಂತೆಯೇ ವಿಮಾನ ಕಣ್ಮರೆಯಾಯಿತು ಎಂದು ತಿಳಿಸಿದ್ದಾರೆ.

ಪತನಕ್ಕೆ ಕಾರಣ ತಿಳಿದಿಲ್ಲ. ಜಾವಾ ಸಮುದ್ರ ವ್ಯಾಪ್ತಿಯಲ್ಲಿ ಶೋಧ ಕಾರ್ಯ ಮುಂದು ವರಿದಿದೆ. ಸ್ಮಾರ್ಟ್‌ ಫೋನ್‌ಬಿಡಿಭಾಗಗಳು, ಪುಸ್ತಕ, ಬ್ಯಾಗ್‌ತೇಲುತ್ತಿರುವುದು ಕಂಡಿವೆ.

ದಿಲ್ಲಿಯ ಪೈಲಟ್‌
ದುರಂತದಲ್ಲಿ ಅಸುನೀಗಿ ರುವ ಪೈಲಟ್‌ ಸುನೇಜಾ (31) ದಿಲ್ಲಿಯವರು. 2 ವರ್ಷಗಳ ಹಿಂದೆ ಮದುವೆಯಾಗಿದ್ದರು. 2 ದಿನಗಳ ಹಿಂದಷ್ಟೇ ಕರ್ವಾ ಚೌತ್‌ ದಿನದಂದು ಪತಿ ಸುನೇಜಾ ಜತೆ ಸಂತಸದಿಂದ ಕಳೆದಿದ್ದರು ಪತ್ನಿ ಗರೀಮಾ ತ್ರಿಪಾಠಿ.  ನ.5ರಂದು ಭವ್ಯೇ ಸುನೇಜಾ ದಿಲ್ಲಿಗೆ ಹಿಂದಿರುಗುವವರಿದ್ದರು.

ಟಾಪ್ ನ್ಯೂಸ್

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.