ದೇಶಕ್ಕೆ ಕಪ್ಪು ಚುಕ್ಕಿ ತಂದಿಟ್ಟ ಎಮರ್ಜೆನ್ಸಿ: ಜರ್ಮನಿಯ ಮ್ಯೂನಿಚ್‌ನಲ್ಲಿ ಪ್ರಧಾನಿ ಅಭಿಮತ


Team Udayavani, Jun 27, 2022, 7:20 AM IST

thumb 2 pm

ಮ್ಯೂನಿಚ್‌: “47 ವರ್ಷಗಳ ಹಿಂದೆ ಭಾರತದ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಪ್ರಯತ್ನ ನಡೆದಿತ್ತು. ತುರ್ತು ಪರಿಸ್ಥಿತಿಯು ಭಾರತದ ಇತಿಹಾಸದಲ್ಲಿ ಕಪ್ಪು ಚುಕ್ಕಿ.

ಜೂ. 26 ನಮಗೆ ಪ್ರಜಾಪ್ರಭುತ್ವವನ್ನು ದಮನ ಮಾಡಲು ಯತ್ನಿಸಿದ ದಿನವನ್ನು ನೆನಪಿಸುತ್ತದೆ’
-ಹೀಗೆಂದು ಹೇಳಿದ್ದು ಪ್ರಧಾನಿ ನರೇಂದ್ರ ಮೋದಿ. ಜರ್ಮನಿಯ ಮ್ಯೂನಿ­ಚ್‌­ನಲ್ಲಿ ಭಾರತೀಯ ಸಮುದಾಯ­ದವರನ್ನು ಉದ್ದೇಶಿಸಿ ಅವರು ಮಾತನಾಡಿ­ದರು.

“ಭಾರತೀಯರು ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ಭಾರತದ ಪ್ರಜಾ­ಪ್ರಭುತ್ವದ ಬಗ್ಗೆ ಹೆಮ್ಮೆ ಪಡುತ್ತಾರೆ. ಭಾರತ ಪ್ರಜಾಪ್ರಭುತ್ವದ ಮಾತೆ’ ಎಂದರು ಮೋದಿ.

ಅಭಿವೃದ್ಧಿಯಾಗಿದೆ: ಈಗ ಭಾರತದ ಪ್ರತೀ ಹಳ್ಳಿಗೆ ವಿದ್ಯುತ್‌ ಸಂಪರ್ಕವಿದೆ ಎಂದು ಹೇಳಿದ ಅವರು, ಶೇ. 99ಕ್ಕೂ ಅಧಿಕ ಮನೆಗಳಿಗೆ ಗ್ಯಾಸ್‌ ಸೌಲಭ್ಯವಿದೆ ಎಂದರು. ಬಡವರಿಗೆ 5 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಸಿಗುತ್ತಿದೆ. ಪ್ರತೀ 10 ದಿನಕ್ಕೊಂದು ಯುನಿಕಾರ್ನ್ ಸೃಷ್ಟಿಯಾಗುತ್ತಿದೆ.

ತಿಂಗಳಿಗೆ 5,000 ಪೇಟೆಂಟ್‌ಗಳಿಗೆ ಅರ್ಜಿ ಸಲ್ಲಿಕೆಯಾಗುತ್ತಿದೆ, 500 ರೈಲು ಬೋಗಿ ನಿರ್ಮಾಣವಾಗುತ್ತಿದೆ. 4ನೇ ಕೈಗಾರಿಕಾ ಕ್ರಾಂತಿಯಲ್ಲಿ ಭಾರತ ಮುಂದಾಳತ್ವ ಪಡೆದುಕೊಂಡಿದೆ. ಡಿಜಿಟಲ್‌ ಬ್ಯಾಂಕಿಂಗ್‌, ಡೇಟಾ ಬಳಕೆ ಸೇರಿ ಎಲ್ಲ ವಿಚಾರದಲ್ಲೂ ಇಂದು ಭಾರತೀಯರು ಮುಂದಿದ್ದಾರೆ. ಭಾರತ ಈ ಹಿಂದೆ ಸ್ಟಾರ್ಟ್‌ಅಪ್‌ ಸ್ಪರ್ಧೆಯಲ್ಲೇ ಇರಲಿಲ್ಲ. ಆದರೆ ಈಗ ವಿಶ್ವದ ಮೂರನೇ ಅತೀ ದೊಡ್ಡ ಸ್ಟಾರ್ಟ್‌ಅಪ್‌ ಎಕೋ ಸಿಸ್ಟಂ ನಮ್ಮಲ್ಲಿದೆ’ ಎಂದು ಮೋದಿ ಹೇಳಿದ್ದಾರೆ.

ಚಲ್ತಾ ಹೈ ನಿಲುವು ಇಲ್ಲ: ದೇಶದಲ್ಲಿ ಈಗ ಚಲ್ತಾ ಹೈ ನಿಲುವು ಇಲ್ಲ. ಅದರ ಬದಲಾಗಿ ಈಗ ಕೆಲಸ ಪೂರ್ಣವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಾಣ ಉಳಿಸಿದ ದೇಸಿ ಲಸಿಕೆ: ಭಾರತವು ಕೊರೊನಾ ಸಮಯದಲ್ಲಿ ಭಾರೀ ಪ್ರಮಾಣ­ದಲ್ಲಿ ಲಸಿಕೆ ಉತ್ಪಾದಿಸಿ, ರಫ್ತು ಮಾಡಿದೆ. ಇಂದು ದೇಶದ ಶೇ. 90 ಮಂದಿ ಸಂಪೂರ್ಣ ಲಸಿಕೆ ಪಡೆದಿದ್ದಾರೆ. ಲಸಿಕೆ ಹಂಚಿಕೆಗೆ ಕನಿಷ್ಠ 10-15 ವರ್ಷ ಬೇಕೆಂದು ವಿರೋಧಿಗಳು ಪ್ರಾರಂಭದಲ್ಲಿ ದೂರಿದ್ದರು. ಆದರೆ ನಾವು ಎರಡೇ ವರ್ಷಗಳಲ್ಲಿ ಅದನ್ನು ಮಾಡಿ ತೋರಿಸಿದ್ದೇವೆ ಎಂದು ಅವರು ಹೇಳಿದರು.

ಅದ್ಧೂರಿ ಸ್ವಾಗತ: ರವಿವಾರ ಬೆಳಗ್ಗೆ ಜರ್ಮನಿಯ ಮ್ಯೂನಿಚ್‌ಗೆ ಬಂದಿಳಿದ ಮೋದಿಯವರಿಗೆ ಜರ್ಮನಿಯ ಆಡಳಿತ ಮತ್ತು ಅಲ್ಲಿನ ಭಾರತೀಯರು ಅದ್ಧೂರಿ ಸ್ವಾಗತ ಮಾಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಭಾರತೀಯರು “ಭಾರತ್‌ ಮಾತಾ ಕೀ ಜೈ’ ಘೋಷಣೆಗಳೊಂದಿಗೆ ಮೋದಿ­ಯನ್ನು ಬರಮಾಡಿ­ಕೊಂಡಿದ್ದಾರೆ. ಅಲ್ಲಿ ನೆರೆದಿದ್ದ ಪುಟಾಣಿ­ಗಳೊಂದಿಗೆ ಪ್ರಧಾನಿಯವರು ಕೆಲ ಕಾಲ ಮಾತನಾಡಿದ್ದು, ಆ ಫೋಟೋಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಪ್ರಧಾನಿ ತಂಗುವ ಹೊಟೇಲ್‌ನಲ್ಲಿ ಎ.ಸಿ. ಇಲ್ಲ
ಜರ್ಮನಿಯಲ್ಲಿರುವ ಪ್ರಧಾನಿ ಮೋದಿಯವರು ರವಿವಾರ ಜರ್ಮನಿಯ ದಕ್ಷಿಣ ಗಡಿ ಭಾಗದಲ್ಲಿರುವ ಪ್ರಸಿದ್ಧ ಸ್ಕೊ$Éàಸ್‌ ಎಲೌ¾ ಹೊಟೇಲ್‌ನಲ್ಲಿ ತಂಗಿದ್ದಾರೆ. ವಿಶೇಷವೆಂದರೆ ಈ ಹೊಟೇಲ್‌ನಲ್ಲಿ ಹವಾನಿಯಂತ್ರಿತ ಕೊಠಡಿಗಳಿಲ್ಲ. ಹಾಗೆಯೇ ಅದ್ಧೂರಿ ಕೊಠಡಿಗಳೂ ಇಲ್ಲ. ಗುಡ್ಡಗಾಡು ಪ್ರದೇಶದಲ್ಲಿರುವ ಹೊಟೇಲ್‌ಗೆ ಕೂಲರ್‌ಗಳನ್ನು ಬಳಕೆ ಮಾಡಲಾಗುತ್ತಿದೆ.

 

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.