ಬುದ್ಧನ ಜನ್ಮ ಸ್ಥಳದಲ್ಲಿ ಪ್ರಧಾನಿ ಮೋದಿ: ನೇಪಾಳದೊಂದಿದೆ ರಾಜತಾಂತ್ರಿಕ ಮಾತುಕತೆ

2014ರಲ್ಲಿ ಕೊಟ್ಟ ಸಸಿ ಮರವಾಗುವುದನ್ನು ಕಂಡು ಖುಷಿ ಪಟ್ಟ ಪ್ರಧಾನಿ

Team Udayavani, May 16, 2022, 3:56 PM IST

thumb 7

ಲುಂಬಿನಿ/ನವದೆಹಲಿ: ಬುದ್ಧಪೂರ್ಣಿಮೆಯ ದಿನವಾದ ಸೋಮವಾರ ಇದೇ ಮೊದಲ ಬಾರಿಗೆ ನೇಪಾಳದ ಲುಂಬಿನಿಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಗಡಿ ಬಿಕ್ಕಟ್ಟಿನಿಂದಾಗಿ ಹದಗೆಟ್ಟಿದ್ದ ಎರಡೂ ದೇಶಗಳ ನಡುವಿನ ಸಂಬಂಧವನ್ನು ಮತ್ತೆ ಬೆಸೆಯುವಲ್ಲಿ ಯಶಸ್ವಿಯಾಗಿದ್ದಾರೆ.

2014ರ ಬಳಿಕ ಪ್ರಧಾನಿ ಮೋದಿ ಅವರು 5ನೇ ಬಾರಿಯ ನೇಪಾಳ ಭೇಟಿ ಇದಾದರೂ, ಗೌತಮ ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ತೆರಳಿರುವುದು ಇದೇ ಮೊದಲು. ನೇಪಾಳ ಪ್ರಧಾನಿ ಶೇರ್‌ ಬಹಾದೂರ್‌ ದೇಬ್‌ ಅವರ ಆಹ್ವಾನದ ಮೇರೆಗೆ ನೆರೆರಾಷ್ಟ್ರಕ್ಕೆ ಪ್ರವಾಸ ಕೈಗೊಂಡ ಅವರು, ದೇಬ್‌ ಜೊತೆಗೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಿದ್ದಾರೆ.

ಇದೇ ವೇಳೆ, ಉನ್ನತ ಶೈಕ್ಷಣಿಕ ಸಂಸ್ಥೆಗಳ ನಡುವೆ ಸಹಕಾರ, ಜಲವಿದ್ಯುತ್‌ ಯೋಜನೆ, ಬೌದ್ಧಧರ್ಮದ ಅಧ್ಯಯನ ಸೇರಿದಂತೆ 6 ಒಪ್ಪಂದಗಳಿಗೆ ಉಭಯ ದೇಶಗಳು ಸಹಿಯನ್ನೂ ಹಾಕಿವೆ. ಭಾರತದ ಸರ್ಕಾರಿ ಸ್ವಾಮ್ಯದ ಎಸ್‌ಜೆವಿಎನ್‌ ಲಿಮಿಟೆಡ್‌ ನೇಪಾಳದಲ್ಲಿ 4,900 ಕೋಟಿ ರೂ. ವೆಚ್ಚದಲ್ಲಿ ಮತ್ತೊಂದು ಜಲವಿದ್ಯುತ್‌ ಯೋಜನೆ ಅರುಣ್‌-4 ಅನ್ನು ಅಭಿವೃದ್ಧಿಪಡಿಸುವುದಾಗಿ ಘೋಷಿಸಿದೆ. 490 ಮೆ.ವ್ಯಾ.ನ ಈ ಯೋಜನೆ ಜಾರಿಗೆ ಸಂಬಂಧಿಸಿದ ಒಪ್ಪಂದಕ್ಕೆ ಸೋಮವಾರ ಉಭಯ ದೇಶಗಳ ಪ್ರಧಾನಿಗಳ ಸಮ್ಮುಖದಲ್ಲೇ ಸಹಿ ಹಾಕಲಾಗಿದೆ.

ಭಾರತದ ನೆರವಿಗೆ ಧನ್ಯವಾದ
ಅಂತಾರಾಷ್ಟ್ರೀಯ ಬೌದ್ಧಧರ್ಮೀಯರ ಸಮ್ಮೇಳನದಲ್ಲಿ ಮಾತನಾಡಿದ ನೇಪಾಳ ಪ್ರಧಾನಿ ಶೇರ್‌ ಬಹಾದೂರ್‌ ದೇಬಾ, “ಪರಸ್ಪರ ಗೌರವದೊಂದಿಗೆ ಭಾರತದೊಂದಿಗಿನ ಸಂಬಂಧವನ್ನು ಬಲಿಷ್ಠಗೊಳಿಸಲು ನೇಪಾಳ ಎದುರುನೋಡುತ್ತಿದೆ. ಎರಡೂ ದೇಶಗಳು ಸಮಾನ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳು ಹಾಗೂ ಬಂಧದೊಂದಿಗೆ ಬೆಸೆದುಕೊಂಡಿವೆ. ನಮ್ಮ ದೇಶದ ಮೂಲಸೌಕರ್ಯ, ಸಂಪರ್ಕ ವ್ಯವಸ್ಥೆ, ಜಲ ವಿದ್ಯುತ್‌, ಕೃಷಿ, ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಭಾರತದ ಸಹಕಾರಕ್ಕೆ ನಾವು ಚಿರಋಣಿಗಳು’ ಎಂದಿದ್ದಾರೆ.

ನೇಪಾಳದಿಂದ ನೇರವಾಗಿ ಖುಷಿನಗರಕ್ಕೆ
ತಮ್ಮ ಒಂದು ದಿನದ ನೇಪಾಳ ಪ್ರವಾಸ ಮುಗಿಸಿ ಸೋಮವಾರ ಸಂಜೆ ಸ್ವದೇಶಕ್ಕೆ ವಾಪಸಾದ ಪ್ರಧಾನಿ ಮೋದಿ ಅವರು ನೇರವಾಗಿ ಉತ್ತರಪ್ರದೇಶದ ಖುಷಿನಗರಕ್ಕೆ ತೆರಳಿದ್ದಾರೆ. ಇಲ್ಲಿರುವ ಮಹಾಪರಿನಿರ್ವಾಣ ದೇವಾಲಯಕ್ಕೆ ಭೇಟಿ ನೀಡಿದ ಅವರು ಬುದ್ಧಪೂರ್ಣಿಮೆಯ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಲಕ್ನೋದಲ್ಲಿ ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರ ನಿವಾಸಕ್ಕೆ ತೆರಳಿ ಭೋಜನಕೂಟದಲ್ಲಿ ಪಾಲ್ಗೊಂಡಿದ್ದಾರೆ. ಜತೆಗೆ, ರಾಜ್ಯದ ಸಚಿವರೊಂದಿಗೂ ಮಾತುಕತೆ ನಡೆಸಿದ್ದಾರೆ.

ಸರಣಿ ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ
ಒಂದೇ ದಿನದ ಪ್ರವಾಸವಾಗಿದ್ದರೂ ಪ್ರಧಾನಿ ಮೋದಿ ಅವರು ನೇಪಾಳದಲ್ಲಿ ಬೆಳಗ್ಗಿನಿಂದ ಸಂಜೆವರೆಗೂ ಬಿಡುವಿಲ್ಲದೇ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಪ್ರಧಾನಿ ದೇಬಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಗೂ ಮುನ್ನ ಅವರು ಲುಂಬಿನಿಯಲ್ಲಿ ಪವಿತ್ರ ಮಾಯಾದೇವಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಅವರಿಗೆ ಪ್ರಧಾನಿ ದೇಬಾ ಮತ್ತು ಅವರ ಪತ್ನಿ ಡಾ.ರಾಣಾ ದೇಬಾ ಕೂಡ ಸಾಥ್‌ ನೀಡಿದರು. ದೇಗುಲದ ಆವರಣದಲ್ಲಿ ಬುದ್ಧ ಹುಟ್ಟಿದ ನಿಖರ ಸ್ಥಳ ಎಂದು ಹೇಳಲಾದ ಮರ್ಕರ್‌ ಶಿಲೆಯ ದರ್ಶನ ಮಾಡಿ ಗೌರವ ಸಲ್ಲಿಸಿದರು.

2014ರಲ್ಲಿ ಪ್ರಧಾನಿ ಮೋದಿ ಅವರು ಲುಂಬಿನಿಗೆ ಉಡುಗೊರೆಯಾಗಿ ನೀಡಿದ್ದ ಬುದ್ಧಗಯಾದ ಸಸ್ಯವನ್ನು ಅಲ್ಲೇ ನೆಡಲಾಗಿದ್ದು, ಸೋಮವಾರ ಉಭಯ ಪ್ರಧಾನಿಗಳು ಆ ಸಸ್ಯಕ್ಕೆ ನೀರುಣಿಸಿದರು. ಇದಾದ ಬಳಿಕ ಮೋದಿ ಅವರು ಲುಂಬಿನಿ ಮೊನಾಸ್ಟಿಕ್‌ ವಲಯದಲ್ಲಿ ಇಂಡಿಯಾ ಇಂಟರ್‌ನ್ಯಾಷನಲ್‌ ಸೆಂಟರ್‌ ಫಾರ್‌ ಬುದ್ಧಿಸ್ಟ್‌ ಕಲ್ಚರ್‌ ಆ್ಯಂಡ್‌ ಹೆರಿಟೇಜ್‌ಗೆ ಶಿಲಾನ್ಯಾಸ ನೆರವೇರಿಸಿದರು.

 

 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.