ಸ್ಟಾರ್ಟಪ್‌ ಬಳಸಿಕೊಳ್ಳಿ

ಜಾಗತಿಕ ಸಿಇಒಗಳ ಜತೆ ಮಾತುಕತೆ ವೇಳೆ ಪ್ರಧಾನಿ ಮೋದಿ ಕರೆ

Team Udayavani, Sep 27, 2019, 6:15 AM IST

x-51

ನ್ಯೂಯಾರ್ಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ನ್ಯೂಜಿಲೆಂಡ್‌ ಪ್ರಧಾನಿ ಜೆಸಿಂಡಾ ಆರ್ಡನ್‌ರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ನ್ಯೂಯಾರ್ಕ್‌: ಭಾರತದ ಸ್ಟಾರ್ಟಪ್‌ ವ್ಯವಸ್ಥೆಯನ್ನು ಬಳಸಿಕೊಂಡು ಪೌಷ್ಟಿಕಾಂಶ ಮತ್ತು ತ್ಯಾಜ್ಯ ನಿರ್ವಹಣೆಯಂಥ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಜಾಗತಿಕ ಸಿಇಒಗಳು ಮತ್ತು ಅಮೆರಿಕದ ಪ್ರಮುಖ ಉದ್ಯಮಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ.

ವಿಶ್ವದ ಪ್ರಮುಖ 42 ಸಿಇಒಗಳ ಜತೆ ಸಭೆ ನಡೆಸಿದ ಅವರು, ಭಾರತದಲ್ಲಿ ರಾಜಕೀಯ ಪರಿಸ್ಥಿತಿ ಮತ್ತು ನೀತಿ ನಿರೂಪಣೆಗಳಲ್ಲಿ ಸ್ಥಿರತೆ ಇದೆ ಎಂದಿದ್ದಾರೆ. ಸರಕಾರದ ನೀತಿಗಳು ಅಭಿವೃದ್ಧಿ ಮತ್ತು ಪ್ರಗತಿ ಪರವಾಗಿದೆ. ಭಾರತವು ಪ್ರವಾಸೋದ್ಯಮ, ಪ್ಲಾಸ್ಟಿಕ್‌ ಮರುಬಳಕೆ ಮತ್ತು ತ್ಯಾಜ್ಯ ನಿರ್ವಹಣೆ ಉಪಕ್ರಮಗಳನ್ನು ಕೈಗೊಂಡಿದೆ ಎಂದಿದ್ದಾರೆ.

ಉಗ್ರವಾದವೇ ಪಾಕ್‌ನ ಆಡಳಿತ: ಪಾಕಿಸ್ಥಾನವು ಉಗ್ರವಾದವನ್ನೇ ತನ್ನ ಆಡಳಿತ ವನ್ನಾಗಿಸಿಕೊಂಡಿದೆ. ಹೀಗಾಗಿ ಇಂತಹ ದೇಶದೊಂದಿಗೆ ಭಾರತ ಮಾತುಕತೆ ನಡೆ ಸಲಾಗದು ಎಂದು ಅವರು ಹೇಳಿದ್ದಾರೆ. ವಿದೇಶಾಂಗ ವ್ಯವಹಾರಗಳ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಜೈಶಂಕರ್‌, ಉಗ್ರವಾದವನ್ನು ಅವರು(ಪಾಕ್‌) ಬೆಂಬಲಿಸುತ್ತಾರೆ. ಆದರೆ ಬೆಂಬಲಿಸುತ್ತಿಲ್ಲ ಎಂದು ತೋರಿಸಿಕೊಳ್ಳುತ್ತಾರೆ. ಇದನ್ನು ನಿರ್ವಹಿಸುವುದು ಅತ್ಯಂತ ದೊಡ್ಡ ಸವಾಲು ಎಂದು ಹೇಳಿದ್ದಾರೆ.

ಆಗಸ್ಟ್‌ 5 ಕ್ಕೂ ಮೊದಲು ಕಾಶ್ಮೀರದ ಪರಿಸ್ಥಿತಿ ಅಸ್ತವ್ಯಸ್ತವಾಗಿತ್ತು. ಈ ಭಾಗದಲ್ಲಿ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯನ್ನು ಬದಲಿಸಲು ವಿಭಿನ್ನ ಪ್ರಯತ್ನವನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ ವಿಶ್ವಸಂಸ್ಥೆ ಭದ್ರತಾ ಸಮಿತಿಯ ಸಚಿವರ ಮಟ್ಟದ ಚರ್ಚೆಯಲ್ಲಿ ಭಾಗವಹಿಸಿದ್ದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್‌, ಉಗ್ರರನ್ನು ಪ್ರೋತ್ಸಾಹಿಸುವ ಮತ್ತು ಅವರಿಗೆ ಹಣಕಾಸು ಸೌಲಭ್ಯ ಒದಗಿಸುವ ದೇಶಗಳನ್ನು ಗುರುತಿಸಬೇಕು ಮತ್ತು ಅಂತಹ ದೇಶಗಳನ್ನು ಹೊಣೆಗಾರರನ್ನಾಗಿಸಬೇಕು ಎಂದಿದ್ದಾರೆ.

ಹೋಲಿಕೆ ನಿಲ್ಲಿಸಬೇಕು ಎಂದು ಇಮ್ರಾನ್‌: ಇಸ್ಲಾಂ ಜತೆಗೆ ಉಗ್ರವಾದವನ್ನು ಹೋಲಿಸುವ ಪ್ರಯತ್ನವನ್ನು ನಾವು ತಡೆಯಬೇಕು ಎಂದು ಪಾಕಿಸ್ಥಾನ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದ್ದಾರೆ.

ವಿಶ್ವಸಂಸ್ಥೆಯ ಮಹಾಧಿವೇಶನದ ಹಿನ್ನೆಲೆಯಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಯಾವ ಧರ್ಮವೂ ಉಗ್ರವಾದ ವನ್ನು ಪೋಷಿಸುವುದಿಲ್ಲ. ಆದರೆ ಬಹುತೇಕ ಎಲ್ಲ ಉಗ್ರವಾದವೂ ರಾಜಕೀಯದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದ್ದಾರೆ.

ಹಲವು ನಾಯಕರೊಂದಿಗೆ ಮೋದಿ ಸಭೆ: ನ್ಯೂಜಿಲೆಂಡ್‌ ಹಾಗೂ ಅರ್ಮೇನಿಯಾ ಸೇರಿದಂತೆ ಹಲವು ದೇಶಗಳ ಮುಖಂಡ ರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ.

ಉಗ್ರವಾದ ತಡೆ, ರಕ್ಷಣೆಯಲ್ಲಿ ಭಾರತಕ್ಕೆ ನೆರವಾಗುವುದರ ಜತೆಗೆ, ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಒದಗಿಸುವ ನಿಟ್ಟಿನಲ್ಲಿ ಭಾರತಕ್ಕೆ ನೆರವು ವಿಚಾರವನ್ನು ಚರ್ಚಿಸಲಾಗಿದೆ. ಅರ್ಮೇನಿಯಾದ ಪ್ರಧಾನಿ ನಿಕೋಲ್‌ ಪಶಿನ್ಯನ್‌ ಹಾಗೂ ನ್ಯೂಜಿಲೆಂಡ್‌ನ‌ ಪ್ರಧಾನಿ ಜಸಿಂದಾ ಆರ್ಡೆನ್‌ ಜತೆಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಪುಲ್ವಾಮಾ ಮತ್ತು ಕ್ರೈಸ್ಟ್‌ಚರ್ಚ್‌ ದಾಳಿಯನ್ನು ಮೋದಿ ಮತ್ತು ಜಸಿಂದಾ ಖಂಡಿಸಿದರು.

ಉಗ್ರನ ಖರ್ಚಿಗೆ ದುಡ್ಡು ಕೇಳಿದ ಪಾಕ್‌!
ಹೊಸದಿಲ್ಲಿ: ಒಂದೆಡೆ ಉಗ್ರವಾದವನ್ನು ನಾವು ಪೋಷಿಸುತ್ತಿಲ್ಲ ಎಂದು ಹೇಳುತ್ತಲೇ ಮತ್ತೂಂದೆಡೆ ಮುಂಬಯಿ ದಾಳಿ ಸಂಚುಕೋರ ಹಫೀಜ್‌ ಸಯೀದ್‌ ಪರ ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನ ಲಾಬಿ ನಡೆಸಿದೆ. ಮಾಸಿಕ ವೆಚ್ಚಕ್ಕಾಗಿ ಹಫೀಜ್‌ ಕುಟುಂಬಕ್ಕೆ ಅಗತ್ಯವಿರುವ ಹಣವನ್ನು ಬ್ಯಾಂಕ್‌ ಖಾತೆಯಿಂದ ಹಿಂಪಡೆಯಲು ಅವಕಾಶ ಕೊಡುವಂತೆ ವಿಶ್ವಸಂಸ್ಥೆಯಲ್ಲಿ ಮನವಿ ಮಾಡಿರುವ ಪಾಕಿಸ್ಥಾನ, ವಿಶ್ವಸಂಸ್ಥೆಯಿಂದ ಅದಕ್ಕೆ ಅನುಮತಿಯನ್ನೂ ಪಡೆದುಕೊಂಡಿದೆ. ವಿಶ್ವಸಂಸ್ಥೆಯ ಭದ್ರತಾ ಸಮಿತಿಯು ಸಯೀದ್‌ನ ಎಲ್ಲ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿತ್ತು. ಹೀಗಾಗಿ ಹಫೀಜ್‌ ಯಾವುದೇ ಹಣವನ್ನು ಬ್ಯಾಂಕ್‌ ಖಾತೆಯಿಂದ ಹಿಂಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಈಗ ಮಾಸಿಕ 1.50 ಲಕ್ಷ ಪಾಕ್‌ ರೂಪಾಯಿ ಹಿಂಪಡೆಯಲು ಅವಕಾಶ ನೀಡುವಂತೆ ಪಾಕಿಸ್ಥಾನದ ಕೋರಿಕೆಗೆ ವಿಶ್ವಸಂಸ್ಥೆ ಭದ್ರತಾ ಸಮಿತಿ ಅನುಮತಿ ನೀಡಿದೆ.

900 ಕೋಟಿ ರೂ. ಸಾಲ ಘೋಷಣೆ
ಕೆರಿಬಿಯನ್‌ ದೇಶಗಳ ಸಮೂಹಕ್ಕೆ 900 ಕೋಟಿ ರೂ. ಸಾಲ ಹಾಗೂ 100 ಕೋಟಿ ರೂ. ಅನುದಾನವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಸಮುದಾಯ ಅಭಿವೃದ್ಧಿ ಯೋಜನೆಗಳಿಗೆ 100 ಕೋಟಿ ರೂ. ಅನುದಾನ ನೀಡುವುದಾಗಿ ಹೇಳಿದ್ದು, ಸೌರ, ನವೀಕರಿಸಬಹುದಾದ ಇಂಧನ ಮತ್ತು ತಾಪಮಾನ ವೈಪರೀತ್ಯ ಸಂಬಂಧಿ ಕಾಮಗಾರಿಗಳಿಗೆ 900 ಕೋಟಿ ರೂ.ಗಳನ್ನು ಸಾಲ ರೂಪದಲ್ಲಿ ನೀಡುವುದಾಗಿ ಹೇಳಿದ್ದಾರೆ. ನ್ಯೂಯಾರ್ಕ್‌ ನಲ್ಲಿ ನಡೆದ ಪ್ರಥಮ ಭಾರತ-ಕೆರಿಕೋಮ್‌ ನಾಯ ಕರ ಸಮ್ಮೇಳನದಲ್ಲಿ ಭಾಗವಹಿಸಿದ ವೇಳೆ ಅವರು ಈ ಘೋಷಣೆ ಮಾಡಿದ್ದಾರೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.