ಲಂಕಾದಲ್ಲಿ ಮತ್ತೆ ತಪ್ಪಿದ ಭಾರೀ ಅನಾಹುತ; 87 ಬಾಂಬ್ ಡಿಟೋನೇಟರ್ಸ್ ಪತ್ತೆ
Team Udayavani, Apr 22, 2019, 4:39 PM IST
ಕೊಲಂಬೋ: ಶ್ರೀಲಂಕಾದಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬೆಂಗಳೂರಿನ ಐವರು ಸೇರಿದಂತೆ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 290ಕ್ಕೆ ಏರಿದ್ದು, 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಏತನ್ಮಧ್ಯೆ ಶ್ರೀಲಂಕಾ ಪೊಲೀಸರು ಕೊಲಂಬೋ ಮುಖ್ಯ ಬಸ್ ನಿಲ್ದಾಣದಲ್ಲಿ ಮತ್ತೆ ಸುಮಾರು 87 ಬಾಂಬ್ ಡಿಟೋನೇಟರ್ಸ್ ಗಳನ್ನು ಪತ್ತೆ ಹಚ್ಚಿರುವುದಾಗಿ ರಾಯಟರ್ಸ್ ವರದಿ ಮಾಡಿದೆ.
ಈಸ್ಟರ್ ದಿನವಾದ ಭಾನುವಾರದಂದು ಶ್ರೀಲಂಕಾದ ಚರ್ಚ್ ಹಾಗೂ ಐಶಾರಾಮಿ ಹೋಟೆಲ್ ಗಳಲ್ಲಿ ಸಂಭವಿಸಿದ್ದ ಸರಣಿ ಆತ್ಮಹತ್ಯಾ ಬಾಂಬ್ ದಾಳಿ ಘಟನೆಯ ರೂವಾರಿಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಂಪರ್ಕ ಇದೆಯಾ ಎಂಬುದನ್ನು ಪತ್ತೆ ಹಚ್ಚಲು ವಿದೇಶದ ನೆರವು ಅಗತ್ಯ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಮನವಿ ಮಾಡಿಕೊಂಡಿದ್ದಾರೆ.
ಬಸ್ ನಿಲ್ದಾಣದಲ್ಲಿ 87 ಬಾಂಬ್ ಡಿಟೋನೇಟರ್ಸ್ ಗಳನ್ನು ಪತ್ತೆ ಹಚ್ಚುವ ಮೂಲಕ ಭಾರೀ ಅನಾಹುತವನ್ನು ತಪ್ಪಿಸಿದಂತಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಸರಣಿ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸ್ಥಳೀಯ ಭಯೋತ್ಪಾದಕರ ಹಿಂದೆ ವಿದೇಶಿ ಭಯೋತ್ಪಾದಕ ಸಂಘಟನೆಗಳ ಕೈವಾಡ ಇದ್ದಿರುವುದಾಗಿ ಶ್ರೀಲಂಕಾ ಗುಪ್ತಚರ ಇಲಾಖೆ ವರದಿ ಶಂಕಿಸಿದೆ. ಈ ನಿಟ್ಟಿನಲ್ಲಿ ಉಗ್ರರ ಜಾಡು ಪತ್ತೆ ಹಚ್ಚಲು ವಿದೇಶಗಳ ನೆರವು ಅಗತ್ಯ ಎಂದು ಸಿರಿಸೇನಾ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ