![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Canada;ಥಿಯೇಟರ್ ಗಳಲ್ಲಿ ಹಿಂದಿ ಚಿತ್ರ ವೀಕ್ಷಿಸುತ್ತಿದ್ದವರನ್ನು ಗುರಿಯಾಗಿಸಿ ಸ್ಪ್ರೇ ದಾಳಿ!
ಅಸ್ವಸ್ಥಗೊಂಡ ಕೆಲವರಿಗೆ ಚಿಕಿತ್ಸೆ...
Team Udayavani, Dec 7, 2023, 5:28 PM IST
![1-sadsadas](https://www.udayavani.com/wp-content/uploads/2023/12/1-sadsadas-1-620x347.jpg)
ಟೊರೆಂಟೊ: ಈ ವಾರದ ಆರಂಭದಲ್ಲಿ ಕೆನಡಾದ ಗ್ರೇಟರ್ ಟೊರೆಂಟೊ ಪ್ರದೇಶಗಳ ಮೂರು ವಿಭಿನ್ನ ಚಿತ್ರ ಮಂದಿರಗಳಲ್ಲಿಅಪರಿಚಿತ ಮುಸುಕುಧಾರಿಗಳು ಸ್ಪ್ರೇ ಸಿಂಪಡಿಸಿದ ಬಳಿಕ ಹಲವಾರು ಚಿತ್ರವೀಕ್ಷಕರನ್ನು ಸ್ಥಳಾಂತರಿಸಲಾಗಿದ್ದು, ಅಸ್ವಸ್ಥಗೊಂಡ ಕೆಲವರಿಗೆ ಚಿಕಿತ್ಸೆ ನೀಡಲಾಗಿರುವ ಬಗ್ಗೆ ಪೊಲೀಸರು ಮತ್ತು ಮಾಧ್ಯಮಗಳು ವರದಿ ಮಾಡಿದೆ.
ಮಂಗಳವಾರ ರಾತ್ರಿ 9:20 ರ ಸುಮಾರಿಗೆ ವಾಘನ್ನಲ್ಲಿರುವ ಸಿನಿಮಾ ಸಂಕೀರ್ಣದಲ್ಲಿ ಘಟನೆ ನಡೆದಿದೆ ಎಂದು ಯಾರ್ಕ್ ಪ್ರಾದೇಶಿಕ ಪೊಲೀಸರು ಬುಧವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮುಸುಕುಧಾರಿ ಇಬ್ಬರು ವ್ಯಕ್ತಿಗಳು ಥಿಯೇಟರ್ನಲ್ಲಿ ಏರೋಸಾಲ್ ಆಧಾರಿತ, ಕಿರಿಕಿರಿಯುಂಟುಮಾಡುವ ವಸ್ತುವನ್ನು ಗಾಳಿಯಲ್ಲಿ ಸಿಂಪಡಿಸಿದ ನಂತರ ಹಲವಾರು ಚಲನಚಿತ್ರ ಪ್ರೇಕ್ಷಕರು ಕೆಮ್ಮಲು ಪ್ರಾರಂಭಿಸಿದರು” ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆ ಸಮಯದಲ್ಲಿ ಹಿಂದಿ ಚಲನಚಿತ್ರವೊಂದು ಪ್ರದರ್ಶನಗೊಳ್ಳುತ್ತಿದ್ದು, ಸುಮಾರು 200 ಜನರು ಒಳಗೆ ಇದ್ದರು.ಹಲವಾರು ಜನರಿಗೆ ಚಿಕಿತ್ಸೆ ನೀಡಲಾಯಿತು ಮತ್ತು ಥಿಯೇಟರ್ ನಿಂದ ಸ್ಥಳಾಂತರಿಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಯಾವುದೇ ಗಂಭೀರ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.ಪೊಲೀಸರು ಬರುವ ಮುನ್ನವೇ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.