ಸುನಾಮಿಯಲ್ಲಿ ಕಣ್ಮರೆಯಾಗಿದ್ದ ಪೊಲೀಸ್ ಅಧಿಕಾರಿ 17 ವರ್ಷಗಳ ನಂತರ ಪತ್ತೆ
ಕಳೆದ 17 ವರ್ಷಗಳಿಂದ ಅಚೆ ಎನ್ನುವ ಪ್ರದೇಶದ ಮಾನಸಿಕ ರೋಗಿಗಳ ಆಸ್ಪತ್ರೆಯಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದ.
Team Udayavani, Mar 19, 2021, 3:02 PM IST
ಇಂಡೋನೇಷ್ಯಾ : ಭೀಕರ ಸುನಾಮಿ ದುರಂತದಲ್ಲಿ ಸಾವನ್ನಪ್ಪಿದ್ದ ಎಂದು ನಂಬಲಾಗಿದ್ದ ಪೊಲೀಸ್ ಅಧಿಕಾರಿಯೋರ್ವ 17 ವರ್ಷಗಳ ನಂತರ ಜೀವಂತವಾಗಿ ಪತ್ತೆಯಾಗಿದ್ದು, ದಶಕಗಳ ನಂತರ ತನ್ನ ಕುಟುಂಬ ಸೇರಿದ್ದಾನೆ.
2004ರಲ್ಲಿ ಸಂಭವಿಸಿದ ರಣಭೀಕರ ಸುನಾಮಿ ಭಾರತ, ಶ್ರೀಲಂಕಾ, ಥೈಲ್ಯಾಂಡ್ ಹಾಗೂ ಇಂಡೋನೇಷ್ಯಾ ದೇಶಗಳಲ್ಲಿ ಅಪಾರ ಹಾನಿಯನ್ನುಂಟು ಮಾಡಿತ್ತು. ಈ ದುರಂತದಲ್ಲಿ ಇಂಡೋನೇಷ್ಯಾದ 2,30,000 ಜನರು ಪ್ರಾಣ ಕಳೆದುಕೊಂಡಿದ್ದರು.
100 ಫೀಟ್ ಎತ್ತರದ ಸುನಾಮೆಯ ಅಲೆಗಳು ಲಕ್ಷಾಂತರ ಜನರ ಪ್ರಾಣ ಕಿತ್ತುಕೊಂಡಿದ್ದವು. ಅಂದು ಪೊಲೀಸ್ ಆಫೀಸರ್ ಆಗಿದ್ದ ಅಬ್ರಿಪ್ ಅಸೆಪ್ ಕೂಡ ಕಣ್ಮರೆಯಾಗಿದ್ದ. ಸುನಾಮಿ ಸೆಳೆಯಲ್ಲಿ ಈತ ನಾಪತ್ತೆಯಾಗಿದ್ದಾನೆ ಎಂದು ಆತನ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಕೆಲ ದಿನಗಳ ನಂತರ ಅಸೆಪ್ ಸಾವನ್ನಪ್ಪಿದ್ದಾನೆ ಎನ್ನುವ ತೀರ್ಮಾನಕ್ಕೆ ಬಂದಿದ್ದರು.
ಈ ಭೀಕರ ದುರಂತ ನಡೆದು ಇದೀಗ 17 ವರ್ಷಗಳು ಸಂದಿವೆ. ಅಬ್ರಿಪ್ ಅಸೆಪ್ ನನ್ನು ಆತನ ಕುಟುಂಬ ಮರೆತು ಹೋಗಿತ್ತು. ಆದರೆ, ಇದೀಗ ಅಬ್ರಿಪ್ ಅಸೆಪ್ ಬದುಕಿದ್ದಾನೆ ಎನ್ನುವ ಸುದ್ದಿ ಆತನ ಕುಟುಂಬದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ಎಲ್ಲರೂ ಖುಷಿಯಿಂದ ಅಸೆಪ್ ಅವರನ್ನು ಮನೆಗೆ ಕರೆತಂದಿದ್ದಾರೆ.
ಮನೋವೈಕಲ್ಯ
ಇನ್ನು ಅಬ್ರಿಪ್ ಅಸೆಪ್ ದೈಹಿಕವಾಗಿ ಚೆನ್ನಾಗಿದ್ದಾನೆ. ಆದರೆ, ಮಾನಸಿಕ ರೋಗಕ್ಕೆ ತುತ್ತಾಗಿದ್ದಾನೆ. ಸುನಾಮಿ ದುರಂತ ಕಣ್ಣಾರೆ ಕಂಡಿದ್ದರಿಂದ ಆತ ಮನೋವೈಕಲ್ಯಕ್ಕೆ ಒಳಗಾಗಿದ್ದಾನೆ. ಕಳೆದ 17 ವರ್ಷಗಳಿಂದ ಅಚೆ ಎನ್ನುವ ಪ್ರದೇಶದ ಮಾನಸಿಕ ರೋಗಿಗಳ ಆಸ್ಪತ್ರೆಯಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದ ಎಂದು ತಿಳಿದು ಬಂದಿದೆ.
ಪತ್ತೆಯಾಗಿದ್ದು ಹೇಗೆ ?
ಇತ್ತೀಚಿಗೆ ಅಸೆಪ್ ಫ್ಯಾಮಿಲಿ ಸೋಷಿಯಲ್ ಮೀಡಿಯಾ ಗ್ರೂಪ್ನಲ್ಲಿ ಆತನ ಫೋಟೊ ಹರಿದಾಡುತ್ತಿತ್ತು. ಈ ಫೋಟೊ ಜಾಡು ಹಿಡಿದು ಹೋದಾಗ ಅಚೆ ಮನೋರೋಗಿಗಳ ಆಸ್ಪತ್ರೆಯಲ್ಲಿ ಅಸೆಪ್ ಇರುವುದು ದೃಢಪಟ್ಟಿದೆ. ವೈದ್ಯರ ಬಳಿ ಚರ್ಚಿಸಿದ ನಂತರ ಆತನನ್ನು ಮನೆಗೆ ಕರೆದುಕೊಂಡು ಬರಲಾಗಿದೆ ಎಂದು ಸ್ಥಳೀಯ ಪೊಲೀಸ್ ಸಿಬ್ಬಂದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ