ಉಗ್ರರ ವಿಚಾರದಲ್ಲಿ ವಿಶ್ವಸಂಸ್ಥೆಯಲ್ಲೂ ರಾಜಕೀಯ ಮಾಡೋದು ಬಿಡಬೇಕು: ಚೀನಾಕ್ಕೆ ಮೋದಿ!
Team Udayavani, Sep 24, 2019, 7:20 PM IST
ನ್ಯೂಯಾರ್ಕ್: ಜಗತ್ತಿನ ಯಾವ ಭಾಗದಲ್ಲಿಯೇ ಉಗ್ರರ ದಾಳಿ ನಡೆಯಲಿ ಅದನ್ನು ಭಯೋತ್ಪಾದಕ ಕೃತ್ಯ ಎಂದೇ ಪರಿಗಣಿಸಲಾಗುತ್ತದೆ ವಿನಃ ಅದರಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಎಂಬ ವರ್ಗೀಕರಣ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ವಿಶ್ವಸಂಸ್ಥೆಯ 74ನೇ ಮಹಾ ಅಧಿವೇಶನಕ್ಕೂ ಮುನ್ನ ಸೋಮವಾರ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ವಿಶ್ವದ ಗಣ್ಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು “ಭಯೋತ್ಪಾದಕರು ಮತ್ತು ಹಿಂಸಾತ್ಮಕ ಉಗ್ರಗಾಮಿತ್ವದ ವಿಷಯದ ಕುರಿತು ಮಾತನಾಡಿದರು.
ಭಯೋತ್ಪಾದನ ನಿಗ್ರಹಕ್ಕೆ ಸಂಬಂಧಿಸಿದಂತೆ ಹಲವಾರು ಹಂತಗಳಲ್ಲಿ ಸಹಕಾರದ ಅಗತ್ಯವಿರುತ್ತದೆ. ಆ ನಿಟ್ಟಿನಲ್ಲಿ ಭಾರತ ಉಗ್ರರನ್ನು ಸದೆಬಡಿಯುವಲ್ಲಿ ಸ್ನೇಹಪರ ದೇಶಗಳ ಜತೆ ಕೈಜೋಡಿಸುವ ಮೂಲಕ ಸಹಕಾರ ನೀಡಿರುವುದಾಗಿ ಹೇಳಿದರು.
ಅಲ್ಲದೇ ಜಾಗತಿಕ ಉಗ್ರ ಎಂಬ ಪಟ್ಟ ನೀಡುವ ವಿಷಯದಲ್ಲಿ ತಾಂತ್ರಿಕ ಕಾರಣದ ನೆಪವೊಡ್ಡಿ ರಾಜಕೀಯಗೊಳಿಸುವ ಪ್ರವೃತ್ತಿಗೆ ಕಡಿವಾಣ ಹಾಕಬೇಕಾದ ಅಗತ್ಯವಿದೆ ಎಂದು ಹೇಳುವ ಮೂಲಕ ಮೋದಿ ಚೀನಾಕ್ಕೆ ಪರೋಕ್ಷವಾಗಿ ಚಾಟಿ ಬೀಸಿದರು.
ಜೈಶ್ ವರಿಷ್ಠ ಅಜರ್ ಮಸೂದ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ಚೀನಾ ಹಲವಾರು ಬಾರಿ ವಿರೋಧಿಸಿತ್ತು. ಕೊನೆಗೆ ಅಂತಾರಾಷ್ಟ್ರೀಯ ಸಮುದಾಯದ ಒತ್ತಡದ ಬಳಿಕ ಚೀನಾ ತನ್ನ ನಿಲುವು ಬದಲಾಯಿಸಿ ಮಸೂದ್ ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಿಸಿತ್ತು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ವಿಶ್ವಸಂಸ್ಥೆ ಉಗ್ರನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿವುದು ಮತ್ತು ಎಫ್ ಎಟಿಎಫ್(ಫೈನಾಶ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್) ಹಣಕಾಸು ವಿಚಾರದಲ್ಲಿ ಕಪ್ಪು ಪಟ್ಟಿಗೆ ಸೇರ್ಪಡೆಗೊಳಿಸುವ ವಿಚಾರದಲ್ಲಿ ರಾಜಕೀಯ ಮಾಡದಂತೆ ಒತ್ತಾಯ ಹೇರಬೇಕಾದ ಅಗತ್ಯವಿದೆ ಎಂದು ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ