ಕೋವಿಡ್ ವೈರಸ್ ಪ್ರಶ್ನೆ ಚೀನಕ್ಕೇ ಕೇಳಿ ; ಪತ್ರಕರ್ತೆ ವಿರುದ್ಧ ಹರಿಹಾಯ್ದು ಟ್ರಂಪ್
ಸುದ್ದಿಗೋಷ್ಠಿ ಅರ್ಧಕ್ಕೇ ಮೊಟಕು
Team Udayavani, May 13, 2020, 7:18 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ ಪತ್ರಕರ್ತರ ಮೇಲೆ ಸಿಡಿಮಿಡಿಗೊಂಡು ಕೋವಿಡ್ ವೈರಸ್ ಕುರಿತಾಗಿ ಕರೆಯಲಾಗಿದ್ದ ಸುದ್ದಿಗೋಷ್ಠಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಶ್ವೇತಭವನದಿಂದ ತೆರಳಿದ ಘಟನೆ ನಡೆದಿದೆ.
ಪತ್ರಿಕಾಗೋಷ್ಠಿಯಲ್ಲಿ ಸಿಬಿಎಸ್ ನ್ಯೂಸ್ನ ವರದಿಗಾರ್ತಿಯೊಬ್ಬಳು ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು, ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಿಡಿಮಿಡಿಗೊಂಡ ಅಧ್ಯಕ್ಷರು, ‘ಕೋವಿಡ್ ವೈರಸ್ ಕಾರಣದಿಂದಲೇ ಎಲ್ಲಾ ಕಡೆ ಜನ ಸಾಯುತ್ತಿದ್ದಾರೆ. ಈ ರೀತಿಯ ಪ್ರಶ್ನೆಯನ್ನು ನನ್ನ ಬಳಿ ಕೇಳಬೇಡಿ. ಚೀನಾದ ಬಳಿ ನೀವು ಇಂತಹ ಪ್ರಶ್ನೆ ಕೇಳಬೇಕು’ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ತನ್ನ ಪ್ರಶ್ನೆಗೆ ಸಮರ್ಪಕ ಉತ್ತರ ಸಿಗದಿದ್ದಾಗ ವರದಿಗಾರ್ತಿ, ‘ಸರ್,ನೀವು ಇದನ್ನು ನನಗೇಕೆ ಹೇಳುತ್ತೀರಿ’ ಎಂದರು. ಇದಕ್ಕೆ ಟ್ರಂಪ್, ‘ನೀವು ನನಗೆ ಕಿರಿಕಿರಿ ಉಂಟು ಮಾಡುವ ಪ್ರಶ್ನೆ ಕೇಳುತ್ತೀದ್ದಿರಿ. ಯಾರೇ ಆಗಲಿ, ನನಗೆ ಕಿರಿಕಿರಿ ಉಂಟು ಮಾಡುವ ಪ್ರಶ್ನೆ ಕೇಳಿದರೆ, ನನ್ನ ಉತ್ತರ ಹೀಗೆಯೇ ಇರಲಿದೆ’ ಎನ್ನುತ್ತಾ ಇನ್ನೊಬ್ಬ ವರದಿಗಾರ್ತಿಗೆ ಪ್ರಶ್ನೆ ಕೇಳಲು ಸೂಚಿಸಿದರು.
ಈ ಮಧ್ಯೆ, ಸಿಬಿಎಸ್ ನ್ಯೂಸ್ನ ವರದಿಗಾರ್ತಿ ವೀಜಿಯಾ ಜಿಯಾಂಗ್, ತಮ್ಮ ಪ್ರಶ್ನೆಗೆ ಉತ್ತರಿಸುವಂತೆ ಮತ್ತೆ, ಮತ್ತೆ ಕೋರಿದಾಗ ಸಿಡಿಮಿಡಿಗೊಂಡ ಟ್ರಂಪ್, ಪತ್ರಿಕಾಗೋಷ್ಠಿಯನ್ನು ಅರ್ಧಕ್ಕೇ ಮೊಟಕುಗೊಳಿಸಿ ಅಲ್ಲಿಂದ ತೆರಳಿದರು. ಜಿಯಾಂಗ್ ಅವರು ಟ್ವೀಟರ್ನಲ್ಲಿ ತಮ್ಮನ್ನು ‘ಚೀನಾ ಮೂಲದ ವೆಸ್ಟ್ ವರ್ಜೀನಿಯನ್’ ಎಂದು ಪರಿಚಯಿಸಿಕೊಂಡಿದ್ದಾರೆ.
ಸಂಶೋಧನೆ ಮೇಲೆ ಚೀನ ಹ್ಯಾಕರ್ಸ್ ಕಣ್ಣು
ಅಮೆರಿಕ ನಡೆಸುತ್ತಿರುವ ಕೋವಿಡ್ ಲಸಿಕೆ ಸಂಶೋಧನೆಗಳನ್ನು ಚೀನಾದ ಹ್ಯಾಕರ್ಸ್ಗಳು ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಅಲ್ಲಿನ ತನಿಖಾ ಸಂಸ್ಥೆಗಳು ಬಲವಾಗಿ ನಂಬಿವೆ. ಯುಎಸ್ ಫೆಡೆರಲ್ ಬ್ಯುರೊ ಆಫ್ ಇನ್ವೆಸ್ಟಿಗೇಶನ್ ಹಾಗೂ ಸೈಬರ್ ಸೆಕ್ಯುರಿಟಿ ತಜ್ಞರು ಈ ಮಾಹಿತಿಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಿವಿಗೂ ಮುಟ್ಟಿಸಿದ್ದಾರೆ.
ವಾಲ್ ಸ್ಟ್ರೀಟ್ ಜರ್ನಲ್’ ಮತ್ತು ‘ದ ನ್ಯೂಯಾರ್ಕ್ ಟೈಮ್ಸ್’ನಲ್ಲಿರುವ ವರದಿ ಪ್ರಕಾರ ಕೋವಿಡ್ ಪರೀಕ್ಷೆ ಮತ್ತು ಚಿಕಿತ್ಸೆಗಳ ಕುರಿತ ಬೌದ್ಧಿಕ ಆಸ್ತಿಯನ್ನು ಚೀನಾ ಗುರಿಯಾಗಿಸಿಕೊಂಡಿದೆ. ಚೀನಾ, ಇರಾನ್, ಉತ್ತರ ಕೊರಿಯಾ, ರಷ್ಯಾಗಳಲ್ಲಿರುವ ಚೀನೀ ಹ್ಯಾಕರ್ಗಳು ಈ ದುಷ್ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದಾರೆ ಎಂದು ಹೇಳಿವೆ. ಇದೇ ವೇಳೆ ಚೀನಾದೊಂದಿಗೆ ಪುನಃ ವ್ಯಾಪಾರವನ್ನು ಆರಂಭಿಸಲು ಮುಂದಾಗಿದೆ ಎಂಬ ಸುದ್ದಿಯನ್ನು ಟ್ರಂಪ್ ಅಲ್ಲಗಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ