ಭಾರತಕ್ಕೆ ಸಾಲಕ್ಕಿಂತ ಗಡಿಪಾರೇ ಆದ್ಯತೆ
Team Udayavani, Dec 16, 2018, 6:00 AM IST
ಲಂಡನ್: ಬ್ಯಾಂಕ್ಗಳಿಗೆ ಮರುಪಾವತಿ ಆಗಬೇಕಿರುವ 9 ಸಾವಿರ ಕೋಟಿ ರೂ. ವಸೂಲು ಮಾಡಿಕೊಳ್ಳುವ ಬದಲು ತಮ್ಮನ್ನು ಗಡಿಪಾರು ಮಾಡಿಸಿಕೊಳ್ಳುವುದಕ್ಕೇ ಭಾರತ ಹೆಚ್ಚಿನ ಆಸಕ್ತಿ ವಹಿಸಿದೆ ಎಂದು ಉದ್ಯಮಿ ವಿಜಯ ಮಲ್ಯ ಆರೋಪಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಇಮೇಲ್ ಮೂಲಕ ಸಂದರ್ಶನ ನೀಡಿದ ಅವರು, ಗಡಿಪಾರು ಬಗ್ಗೆ ವೆಸ್ಟ್ಮಿನ್ಸ್ಟರ್ ಕೋರ್ಟ್ ನೀಡಿದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.
ಕೋರ್ಟ್ನ ಹೊರಗೆ ಸಾಲ ಮರು ಪಾವತಿ ಬಗ್ಗೆ 2016ರಿಂದಲೇ ಪ್ರಸ್ತಾಪ ಮಾಡುತ್ತಿರುವುದಾಗಿ ಹೇಳಿದ ಮಲ್ಯ, ಅದನ್ನು ತಿರಸ್ಕರಿಸುವಂತೆ ಬ್ಯಾಂಕ್ಗೆ ಸೂಚನೆ ನೀಡಲಾಗಿದೆ ಎಂದು ಟೀಕಿಸಿದ್ದಾರೆ. ಇ.ಡಿ. ಮತ್ತು ಬ್ಯಾಂಕ್ಗಳು ನನ್ನ ಆಸ್ತಿ ವಶಪಡಿಸಿಕೊಳ್ಳುವುದಕ್ಕೆ ಹೋರಾಟ ನಡೆಸುತ್ತಿವೆ. ಹೀಗಾಗಿಯೇ ಕರ್ನಾಟಕ ಹೈಕೋರ್ಟ್ನ ಮುಂದೆ ನ್ಯಾಯಾಲಯದಿಂದ ಹೊರತಾಗಿ ಸಾಲ ಪಾವತಿ ಮಾಡುವ ಸೂತ್ರಗಳನ್ನು ಸಲ್ಲಿಸಿದ್ದೆ ಎಂದು ಹೇಳಿದ್ದಾರೆ.
ನಿಮ್ಮಿಂದ ಹಣ ವಾಪಸ್ ಪಡೆಯುವ ಪ್ರಕ್ರಿಯೆ ಶುರುವಾಗಿಲ್ಲವೇ ಎಂಬ ಪ್ರಶ್ನೆಗೆ, “ಭಾರತದಲ್ಲಿ ಈಗ ನನ್ನನ್ನು ಗಡಿಪಾರು ಮಾಡಿಸಿಕೊಳ್ಳುವುದೇ ಪ್ರಮುಖ ಆದ್ಯತೆಯಾಗಿದೆ. ಬ್ಯಾಂಕ್ಗಳಿಗೆ 9 ಸಾವಿರ ಕೋಟಿ ರೂ. ಬರಬೇಕಾಗಿರುವುದನ್ನು ವಸೂಲು ಮಾಡುವುದರ ಬಗ್ಗೆ ಕ್ರಮಗಳು ಆರಂಭವಾಗಿಲ್ಲ’ ಎಂದು ಹೇಳಿದ್ದಾರೆ. ಗಡಿಪಾರು ವಿಚಾರವನ್ನು ಸಮರ್ಥವಾಗಿ ಎದುರಿಸುವುದಾಗಿಯೂ ಮಲ್ಯ ಹೇಳಿಕೊಂಡಿದ್ದಾರೆ.
1988ರಿಂದ ಅನಿವಾಸಿ ಭಾರತೀಯನಾಗಿರುವ ನಾನು 1992ರಿಂದ ಯು.ಕೆ.ಪೌರತ್ವ ಪಡೆದಿದ್ದೇನೆ. 2002ರಲ್ಲಿ ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆ ಯಾದಾಗ ಕರ್ನಾಟಕ ಹೈಕೋರ್ಟ್ಗೆ, ಭಾರತದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಎರಡೂ ಪ್ರಕರಣಗಳಲ್ಲಿ ನಾನು ಜಯ ಗಳಿಸಿದ್ದೆ ಎಂದಿದ್ದಾರೆ ಮಲ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ