ಫೆ. 11ರಂದು ಪ್ರಿಯಾಂಕಾ,ಸಿಂಧಿಯಾ ಅಖಾಡ ಪ್ರವೇಶ
Team Udayavani, Feb 8, 2019, 12:30 AM IST
ಲಕ್ನೋ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಪೂರ್ವ ವಲಯದ ಚುನಾವಣಾ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ನ ನೂತನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ಸೋಮವಾರ ಲಕ್ನೋಗೆ ಆಗಮಿಸುವ ಮೂಲಕ ಅಖಾಡಕ್ಕೆ ಕಾಲಿಡಲಿದ್ದಾರೆ.
ಇವರೊಂದಿಗೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಉತ್ತರ ಪ್ರದೇಶದ ಪಶ್ಚಿಮ ವಲಯದ ಉಸ್ತುವಾರಿ ಹೊತ್ತಿರುವ ಜ್ಯೋತಿರಾದಿತ್ಯ ಸಿಂಧಿಯಾ ಕೂಡಾ ಲಕ್ನೋಗೆ ಆಗಮಿಸಲಿದ್ದು, ಈ ಮೂವರೂ ನಾಯಕರು ವಿಮಾನ ನಿಲ್ದಾಣದಿಂದ ರೋಡ್ ಶೋ ಮೂಲಕ ಲಕ್ನೋದಲ್ಲಿನ ಕಾಂಗ್ರೆಸ್ ಕಚೇರಿಗೆ ಬರಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ವಕ್ತಾರ ಅಂಶು ಅವಸ್ತಿ ತಿಳಿಸಿದ್ದಾರೆ. ರಾಹುಲ್ ಅವರು ಅಂದೇ ಹೊಸದಿಲ್ಲಿಗೆ ಹಿಂದಿರುಗಲಿದ್ದು, ಪ್ರಿಯಾಂಕಾ ನಾಲ್ಕು ದಿನಗಳ ಕಾಲ ತಮ್ಮ ವಲಯದಲ್ಲಿ ಸುತ್ತಾಡಿ, ಪಕ್ಷದ ಹಿರಿಯ ಮುಖಂಡರನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ನಡುವೆ, ಗುರುವಾರ ರಾಹುಲ್ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಗಳು ಮತ್ತು ವಿವಿಧ ರಾಜ್ಯಗಳ ಉಸ್ತುವಾರಿ ಗಳೊಂದಿಗೆ ನಡೆಸಿದ ಸಭೆಯಲ್ಲಿ ಪ್ರಿಯಾಂಕಾ ಅವರೂ ಉಪ ಸ್ಥಿತರಿದ್ದರು. ಲೋಕಸಭೆ ಚುನಾವಣೆಗೆ ಪಕ್ಷದ ಕಾರ್ಯತಂತ್ರ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಮೋದಿಗೆ ರಾಹುಲ್ ಮತ್ತೆ ಪಂಥಾಹ್ವಾನ
“ರಫೇಲ್ ಒಪ್ಪಂದ ಕುರಿತಂತೆ ಐದೇ ಐದು ನಿಮಿಷದ ಬಹಿರಂಗ ಚರ್ಚೆಗೆ ಬನ್ನಿ’ ಎಂದು ಪ್ರಧಾನಿ ಮೋದಿಯವರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೂಮ್ಮೆ ಬಹಿರಂಗ ಸವಾಲು ಹಾಕಿದ್ದಾರೆ. ಹೊಸದಿಲ್ಲಿಯಲ್ಲಿ ಮಾತನಾಡಿದ ಅವರು, “”ಮೋದಿಯವರೇ ನಿಮಗೆ 56 ಇಂಚು ಎದೆ ಎಂದು ನೀವೇ ಹೇಳಿಕೊಂಡಿದ್ದೀರಿ. ಹಾಗಿದ್ದರೆ, ಬನ್ನಿ. ಸಾರ್ವಜನಿಕರ ಮುಂದೆ ರಫೇಲ್ ಕುರಿತಂತೆ ಚರ್ಚಿಸೋಣ” ಎಂದಿದ್ದಾರೆ. ಜತೆಗೆ, “”ಮೋದಿ ಈ ಚರ್ಚೆಗೆ ಆಗಮಿಸಲಾರರು. ಅವರೊಬ್ಬ ಪುಕ್ಕಲ ಆಸಾಮಿ” ಎಂದಿದ್ದಾರೆ. “”ಬಿಜೆಪಿಯ ಮೂಲಕ ಆರ್ಎಸ್ಎಸ್, ಸರ್ಕಾರಿ ಸಂಸ್ಥೆಗಳನ್ನು ಆಕ್ರಮಣ ಮಾಡುತ್ತಿದೆ. ಇದೇ ರೀತಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಡದಲ್ಲೂ ಆಕ್ರಮಣ ಮಾಡಿಕೊಳ್ಳಲು ಯತ್ನಿಸಿತ್ತು. ಆದರೀಗ, ಆ ರಾಜ್ಯಗಳಲ್ಲಿರುವ ಕಾಂಗ್ರೆಸ್ ಸರಕಾರ, ಅಂಥವರನ್ನು ಆಡಳಿತ ವ್ಯವಸ್ಥೆಯಿಂದ ಹೊರಗಿಡಲಿದೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು