Russia ಆತಂಕಕಾರಿ ಸ್ಥಿತಿ ನಿರ್ಮಾಣ: ಆಂತರಿಕ ಸಶಸ್ತ್ರ ದಂಗೆಯನ್ನು ದ್ರೋಹ ಎಂದ ಪುಟಿನ್

ದೇಶವನ್ನು ರಕ್ಷಿಸುವ ಭರವಸೆ ಇದೆ ಎಂದು ಪ್ರತಿಜ್ಞೆ !!

Team Udayavani, Jun 24, 2023, 4:18 PM IST

putin (2)

ಮಾಸ್ಕೋ:  ರಷ್ಯಾದ ಖಾಸಗಿ ಮಿಲಿಟರಿ ಗುತ್ತಿಗೆದಾರ ಸಂಸ್ಥೆ  ವ್ಯಾಗ್ನರ್ ಗ್ರೂಪ್ ಮಾಲಕ ಯೆವ್ಗೆನಿ ಪ್ರಿಗೊಝಿನ್ ಅವರು ಘೋಷಿಸಿದ ಸಶಸ್ತ್ರ ದಂಗೆಯಿಂದ ದೇಶವನ್ನು ರಕ್ಷಿಸುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶನಿವಾರ ಪ್ರತಿಜ್ಞೆ ಮಾಡಿದ್ದು, ಇದು ದೇಶಕ್ಕೆ ಬೆನ್ನ ಹಿಂದಿನಿಂದ ಇರಿದಂತಾಗಿದೆ ಎಂದು ಕರೆದಿದ್ದಾರೆ.

“ದಂಗೆಯನ್ನು ಮಾಡಿದವರೆಲ್ಲರೂ ಅನಿವಾರ್ಯ ಶಿಕ್ಷೆಯನ್ನು ಅನುಭವಿಸುತ್ತಾರೆ. ಸಶಸ್ತ್ರ ಪಡೆಗಳು ಮತ್ತು ಇತರ ಸರಕಾರಿ ಏಜೆನ್ಸಿಗಳು ಅಗತ್ಯ ಆದೇಶಗಳನ್ನು ಸ್ವೀಕರಿಸಿವೆ ”ಎಂದು ಪುಟಿನ್ ದೂರದರ್ಶನದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಹೇಳಿದ್ದಾರೆ.

ಉಕ್ರೇನ್‌ನಲ್ಲಿ ರಷ್ಯಾ “ತನ್ನ ಭವಿಷ್ಯಕ್ಕಾಗಿ ಕಠಿಣ ಯುದ್ಧವನ್ನು” ನಡೆಸುತ್ತಿರುವ ಸಮಯದಲ್ಲಿ ದಂಗೆಯನ್ನು ಖಂಡಿಸಿರುವ ಪುಟಿನ್ “ಪಶ್ಚಿಮ ದೇಶಗಳ ಸಂಪೂರ್ಣ ಮಿಲಿಟರಿ, ಆರ್ಥಿಕ ಮತ್ತು ಮಾಹಿತಿ ಯಂತ್ರವನ್ನು ನಮ್ಮ ವಿರುದ್ಧ ಬಳಸಿಕೊಳ್ಳಲಾಗಿದೆ” ಎಂದು ಕೆಂಡ ಕಾರಿದ್ದಾರೆ.

ಪುಟಿನ್ ವಿರುದ್ಧವೇ ತಿರುಗಿ ಬಿದ್ದು ದಂಗೆ ಎದ್ದಿರುವ ವ್ಯಾಗ್ನರ್ ಗ್ರೂಪ್ ಅನ್ನು ಅಧಿಕೃತವಾಗಿ PMC ವ್ಯಾಗ್ನರ್ ಎಂದು ಕರೆಯಲಾಗುತ್ತದೆ, ಇದು ರಷ್ಯಾದ ಖಾಸಗಿ ಮಿಲಿಟರಿ ಗುತ್ತಿಗೆದಾರ ಸಂಸ್ಥೆಯಾಗಿದ್ದು, ಅದರ ಮಾಲಕ ಪ್ರಿಗೊಝಿನ್ ಅವರು ಶನಿವಾರ ಬೆಳಗ್ಗೆ ಪಡೆಗಳು ಉಕ್ರೇನ್‌ನಿಂದ ಗಡಿಯನ್ನು ದಾಟಿದ ನಂತರ ರಷ್ಯಾದ ಪ್ರಮುಖ ನಗರವನ್ನು ತಲುಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ಪ್ರಿಗೊಝಿನ್, ಉಕ್ರೇನ್‌ನಲ್ಲಿನ ಹೋರಾಟವನ್ನು ಮೇಲ್ವಿಚಾರಣೆ ಮಾಡುವ ರಷ್ಯಾದ ಮಿಲಿಟರಿ ಪ್ರಧಾನ ಕಚೇರಿಯಲ್ಲಿ ರೋಸ್ಟೋವ್-ಆನ್-ಡಾನ್‌ನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ತನ್ನ ಪಡೆಗಳು ವಾಯುನೆಲೆ ಸೇರಿದಂತೆ ತಮ್ಮ ನಿಯಂತ್ರಣದಲ್ಲಿ ನಗರದ ಮಿಲಿಟರಿ ಸೌಲಭ್ಯಗಳನ್ನು ಹೊಂದಿದ್ದವು ಎಂದು ಹೇಳಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ವಿಡಿಯೋಗಳಲ್ಲಿ ಮಿಲಿಟರಿ ವಾಹನಗಳು, ಟ್ಯಾಂಕ್‌ಗಳನ್ನು ಹೊರಗಿನ ಬೀದಿಗಳಲ್ಲಿ ಕಂಡುಬಂದಿವೆ.

”ತನ್ನ ಪಡೆಗಳು ಮಕ್ಕಳ ವಿರುದ್ಧ ಹೋರಾಡುತ್ತಿಲ್ಲ, ಆದರೆ ನಮ್ಮ ದಾರಿಯಲ್ಲಿ ನಿಂತಿರುವ ಯಾರನ್ನಾದರೂ ನಾವು ನಾಶಪಡಿಸುತ್ತೇವೆ” ಎಂದು ಉಕ್ರೇನ್‌ನಿಂದ ರಷ್ಯಾಕ್ಕೆ ದಾಟಿದಾಗ ಚೆಕ್‌ಪಾಯಿಂಟ್‌ಗಳಲ್ಲಿ ತನ್ನ ಪಡೆಗಳು ಯಾವುದೇ ಪ್ರತಿರೋಧವನ್ನು ಎದುರಿಸಲಿಲ್ಲ ಎಂದು ಪ್ರಿಗೊಝಿನ್ ಹೇಳಿದ್ದಾರೆ.

ಪ್ರಿಗೊಝಿನ್, ತನ್ನ ನೇತೃತ್ವದಲ್ಲಿ 25,000 ಸೈನಿಕರು ಸಶಸ್ತ್ರ ದಂಗೆಯಲ್ಲಿರುವುದಾಗಿ ಹೇಳಿದ್ದು, ಸೈನ್ಯ ಪ್ರತಿರೋಧವನ್ನು ತೋರದಂತೆ ಒತ್ತಾಯಿಸಿದ್ದಾರೆ. ‘ಇದು ಮಿಲಿಟರಿ ದಂಗೆಯಲ್ಲ, ಆದರೆ ನ್ಯಾಯದ ಮೆರವಣಿಗೆ’ ಎಂದು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.