ಲಂಕಾ: ಗುಂಡೆಸೆತಕ್ಕೆ 1 ಬಲಿ; ಸಚಿವ ಅರ್ಜುನ ರಣತುಂಗ ಅರೆಸ್ಟ್
Team Udayavani, Oct 29, 2018, 5:41 PM IST
ಕೊಲಂಬೋ : ಶ್ರೀಲಂಕೆಯಲ್ಲಿ ಪ್ರಕೃತ ಸಾಗುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ನಡೆದಿರುವ ಮೊದಲ ಹಿಂಸಾತ್ಮಕ ಘಟನೆಯಲ್ಲಿ ವ್ಯಕ್ತಿಯೊಬ್ಬ ಗುಂಡಿಗೆ ಬಲಿಯಾಗಿರುವುದನ್ನು ಅನುಸರಿಸಿ ಲಂಕೆಯ ಪೆಟ್ರೋಲಿಯಂ ಸಚಿವ ಮತ್ತು ಕ್ರಿಕೆಟ್ ದಂತಕಥೆ, ಅರ್ಜುನ ರಣತುಂಗ ಅವರನ್ನು ಬಂಧಿಸಲಾಗಿದೆ.
ಲಂಕೆಯ ಪ್ರಧಾನಿ ರಣಿಲ್ ವಿಕ್ರಮಸಿಂಘ ಅವರಿಗೆ ನಿಷ್ಠರಾಗಿರುವ 54ರ ಹರೆಯದ ಸಚಿವ ರಣತುಂಗ ಅವರ ಅಂಗರಕ್ಷಕರು ಹೊಸ ಪ್ರಧಾನಿ ಮಹಿಂದ ರಾಜಪಕ್ಷ ಅವರ ಬೆಂಬಲಿಗರ ಮೇಲೆ ನಿನ್ನೆ ಭಾನುವಾರ ನಡೆಸಿದ್ದ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದ.
ಈ ಗುಂಡಿನ ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ. ಘಟನೆಗೆ ಸಂಬಂಧಿಸಿ ಉಂಟಾದ ಉದ್ರಿಕ್ತ ಸನ್ನಿವೇಶದಲ್ಲಿ ದೇಮಾತಗೋಡ ದಲ್ಲಿನ ಸಿಲೋನ್ ಪೆಟ್ರೋಲಿಯಂ ಕಾರ್ಪೊರೇಶನ್ (ಸಿಪಿಸಿ) ಇದರ ಆವರಣದಲ್ಲಿ ಪೊಲೀಸರು ಒಬ್ಬ ಭದ್ರತಾ ಸಿಬಂದಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಅರ್ಜುನ ರಣತುಂಗ ಅವರನ್ನು ಇಂದು ಸೋಮವಾರ ಬಂಧಿಸಲಾಗಿದೆ. ರಣತುಂಗ ಅವರ ಸಚಿವಾಲಯದ ಆವರಣದೊಳಗೆ ಅವರ ಭದ್ರತಾ ಸಿಬಂದಿ ಪೆಟ್ರೋಲಿಯಂ ಕಾರ್ಮಿಕನೋರ್ವನನ್ನು ಗುಂಡಿಕ್ಕಿ ಕೊಂದ ಕಾರಣ ರಣತುಂಗ ಅವರ ಬಂಧನ ನಡೆದಿದೆ ಎಂದು ಪೊಲೀಸ್ ವಕ್ತಾರ ರುವಾನ್ ಗುಣಶೇಖರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!
UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು
MUST WATCH
ಹೊಸ ಸೇರ್ಪಡೆ
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!