ಕಾಶ್ಮೀರ ಸಮಸ್ಯೆ ನಿವಾರಣೆಗಾಗಿ ಮಧ್ಯಸ್ಥಿಕೆ ವಹಿಸಲು ಸಿದ್ಧ: ಟ್ರಂಪ್
Team Udayavani, Jul 23, 2019, 5:00 AM IST
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನದ ನಡುವಿನ ದಶಕಗಳಷ್ಟು ಹಳೆಯದಾದ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವಲ್ಲಿ, ಎರಡೂ ದೇಶಗಳು ಒಪ್ಪಿದರೆ ತಾವು ಮಧ್ಯಸ್ಥಿಕೆಗೆ ವಹಿಸಲು ಸಿದ್ಧ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ಗೆ ತಿಳಿಸಿದ್ದಾರೆ.
ಸದ್ಯಕ್ಕೆ ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ‘ಶ್ವೇತಭವನ’ದಲ್ಲಿ ಭೇಟಿಯಾದ ವೇಳೆ ಟ್ರಂಪ್, ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈ ಹಿಂದೆ ತಮ್ಮನ್ನು ಭೇಟಿ ಮಾಡಿದ್ದಾಗ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಬೇಕೆಂದು ಕೋರಿದ್ದಾಗಿ ಟ್ರಂಪ್, ಖಾನ್ ಅವರಿಗೆ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಖಾನ್, ನೀವು ಮಧ್ಯಸ್ಥಿಕೆ ವಹಿಸಿದಲ್ಲಿ ಕಣಿವೆ ರಾಜ್ಯದ ಲಕ್ಷಾಂತರ ಮಂದಿಯ ಹಾರೈಕೆ ನಿಮ್ಮ ಬೆನ್ನಿಗಿರಲಿದೆ ಎಂದು ಹೇಳಿದ್ದಾರೆ.
ವಿವಾದಕ್ಕೀಡಾದ ಹೇಳಿಕೆ: ಮೋದಿಯವರ ಬಗ್ಗೆ ಟ್ರಂಪ್ ನೀಡಿರುವ ಹೇಳಿಕೆ ಭಾರತದಲ್ಲಿ ವಿವಾದಕ್ಕೀಡಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ, ಮೋದಿಯವರು ನಿಜಕ್ಕೂ ಹೀಗೊಂದು ಆಮಂತ್ರಣ ನೀಡಿದ್ದರೆ, ಅದು ಭಾರತದ ಹಿತಾಸಕ್ತಿಗೆ ಮಾರಕವಾಗಲಿದೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ, ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಈ ಕುರಿತಂತೆ ಸರ್ಕಾರದ ಸ್ಪಷ್ಟನೆ ಕೋರಿದ್ದಾರೆ.
ಸ್ಪಷ್ಟನೆ ನೀಡಿದ ರವೀಶ್: ಟ್ರಂಪ್ ಹೇಳಿಕೆ ವಿವಾದವಾಗಿ ಮಾರ್ಪಡುತ್ತಲೇ ಟ್ವಿಟರ್ನಲ್ಲಿ ಸ್ಪಷ್ಟನೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ‘ಕಾಶ್ಮೀರ ಸಮಸ್ಯೆಯನ್ನು ಭಾರತವು ದ್ವಿಪಕ್ಷೀಯ ನೆಲೆಯಲ್ಲೇ ಬಗೆಹರಿಸಲು ಇಚ್ಛಿಸುತ್ತದೆ. ತನ್ನ ನಿಲುವಿಗೆ ಭಾರತ ಎಂದಿಗೂ ಬದ್ಧವಾಗಿರಲಿದೆ. ಪ್ರಧಾನಿ ಮೋದಿಯವರು ಈ ಹಿಂದೆ ಎಲ್ಲೂ ಟ್ರಂಪ್ ಅವರ ಮಧ್ಯಸ್ಥಿಕೆಗಾಗಿ ಕೋರಿಲ್ಲ. ಭಯೋತ್ಪಾದನೆ ನಿಲ್ಲಿಸಿದರಷ್ಟೇ ಪಾಕಿಸ್ತಾನದ ಜತೆಗೆ ಭಾರತ ಮಾತುಕತೆಗೆ ಸಿದ್ಧ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು