ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ಆರ್ಥಿಕ ದಿಗ್ಬಂಧನ; ಭಾರತದ ರೂಪಾಯಿಯನ್ನು ಖರ್ಚು ಮಾಡಲಾಗದೆ ಒದ್ದಾಡುತ್ತಿದೆ ರಷ್ಯಾ

Team Udayavani, Jun 2, 2023, 7:45 AM IST

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ಬ್ಲೂಮ್‌ಬರ್ಗ್‌: ಉಕ್ರೇನ್‌ ಮೇಲೆ ಮುಗಿಬಿದ್ದು ಆರ್ಥಿಕ ದಿಗ್ಬಂಧನಕ್ಕೊಳಗಾಗಿ ಪರದಾಡುತ್ತಿರುವ ರಷ್ಯಾ ಒಂದು ವಿಚಿತ್ರ ಪೀಕಲಾಟದಲ್ಲಿ ಸಿಕ್ಕಿಬಿದ್ದಿದೆ.

ಭಾರತಕ್ಕೆ ಅದು ಪೆಟ್ರೋಲ್‌-ಡೀಸೆಲ್‌ ಸೇರಿದಂತೆ ಕೆಲವು ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ. ಅದಕ್ಕೆ ಪ್ರತಿಯಾಗಿ ಭಾರತ ರೂಪಾಯಿಯಲ್ಲಿ ಪಾವತಿ ಮಾಡುತ್ತಿದೆ. ಹೀಗಾಗಿ ರಷ್ಯಾ 147 ಬಿಲಿಯನ್‌ ಡಾಲರ್‌ (12 ಲಕ್ಷ ಕೋಟಿ ರೂ.) ಮೌಲ್ಯದ ರೂಪಾಯಿಗಳನ್ನು ಹೊಂದಿದೆ.

ಆದರೆ ಅದನ್ನು ಹೇಗೆ ಖರ್ಚು ಮಾಡುವುದು ಎಂದು ತಿಳಿಯದೇ ಒದ್ದಾಡುತ್ತಿದೆ. ರಷ್ಯಾದ ಬ್ಯಾಂಕುಗಳು, ಅದರ ಕರೆನ್ಸಿ ರೂಬೆಲ್‌ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಷೇಧವಿದೆ. ಆ ದೇಶದ ಕರೆನ್ಸಿ ತನ್ನ ಮೌಲ್ಯವನ್ನೇ ಕಳೆದುಕೊಂಡಿದೆ. ಇಂತಹ ಹೊತ್ತಿನಲ್ಲಿ ಅದಕ್ಕೆ ಆಸರೆಯಾಗಿರುವುದು ಭಾರತ. ಆದರೆ ಭಾರತದೊಂದಿಗೆ ವ್ಯಾಪಾರ ನಡೆಸಿದರೂ, ಅದಕ್ಕೆ ಉಪಯೋಗವಾಗುತ್ತಿಲ್ಲ.

ಭಾರತ ರಷ್ಯಾದಿಂದ ತರಿಸಿಕೊಳ್ಳುತ್ತಿದ್ದರೂ, ರಫ್ತು ಮಾಡುವ ಪ್ರಮಾಣ ತೀರಾ ಕಡಿಮೆಯಿದೆ. ಆಮದು-ರಫ್ತು ಪ್ರಮಾಣ ಒಂದು ಹಂತದಲ್ಲೇನಾದರೂ ಇದ್ದಿದ್ದರೆ ಹಾಗೆಯೇ ಸರಿಹೊಂದಿಸಬಹುದಿತ್ತು. ಅದೂ ಆಗುತ್ತಿಲ್ಲ. ಭಾರತದ ಕರೆನ್ಸಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಳಸಲು ರಷ್ಯಾಕ್ಕೆ ಆಗುತ್ತಿಲ್ಲ. ಪ್ರತೀ ತ್ತೈಮಾಸಿಕದಲ್ಲಿ ಅಸಮತೋಲನ 2ರಿಂದ 3 ಬಿಲಿಯನ್‌ ಡಾಲರ್‌ ಮೌಲ್ಯದ ರೂಪಾಯಿ ಸಂಗ್ರಹ ಹೆಚ್ಚಾಗುತ್ತಲೇ ಇದೆ. ಭಾರತವೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಕರೆನ್ಸಿ ಬಳಕೆಯನ್ನು ಹೆಚ್ಚಿಸಬೇಕೆಂಬ ಉದ್ದೇಶ ಹೊಂದಿದೆ.

ಹಾಗಾಗಿ ಭಾರತಕ್ಕೆ ರಫ್ತು ಮಾಡುವ ದೇಶಗಳಿಗೆ ಹೆಚ್ಚುವರಿ ರೂಪಾಯಿಯಲ್ಲೇ ಪಾವತಿ ಮಾಡುತ್ತಿದೆ. ರೂಪಾಯಿ ಉಳಿದರೆ, ಅದನ್ನು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಆರ್‌ಬಿಐ ವಿದೇಶಿ ಕಂಪನಿಗಳಿಗೆ ಸಲಹೆ ನೀಡಿದೆ.

ರಷ್ಯಾಕ್ಕಿರುವ ಆಯ್ಕೆಗಳೇನು?: ಭಾರತೀಯ ಬ್ಯಾಂಕುಗಳಲ್ಲಿ ಸಂಗ್ರಹವಾಗಿರುವ ರೂಪಾಯಿಯನ್ನು, ಭಾರತೀಯ ಮೂಲಸೌಕರ್ಯ ಯೋಜನೆಗಳಲ್ಲಿ ಹೂಡಿಕೆ ಮಾಡಿ, ಕಾಲಾನುಕ್ರಮದಲ್ಲಿ ಅದರ ಲಾಭ ಪಡೆಯಬಹುದು ಎಂಬ ಆಯ್ಕೆಯೂ ರಷ್ಯಾ ಮುಂದಿದೆ. ಆರಂಭದಲ್ಲಿ ಇದಕ್ಕೆ ಒಪ್ಪದಿದ್ದರೂ, ಸದ್ಯ ಇದೇ ರಷ್ಯಾ ಮುಂದಿರುವ ಉತ್ತಮ ಆಯ್ಕೆ ಎನಿಸಿದೆ. ಇನ್ನು ರಷ್ಯಾ ಮೂರನೇ ರಾಷ್ಟ್ರವಾದ ಚೀನಾದ ಯುವಾನ್‌, ಯುಎಇಯ ದಿರ್ಹಾಮ್‌ ಕರೆನ್ಸಿಯನ್ನು ಬಳಸಬಹುದು. ಇನ್ನೂ ಮುಖ್ಯವಾಗಿ ಭಾರತಕ್ಕೆ ಸರಿಸಮನಾಗಿ ರಷ್ಯಾದಿಂದ ತೈಲವನ್ನು ತರಿಸಿಕೊಳ್ಳುವ ರಾಷ್ಟ್ರಗಳು ತೀರಾ ಕಡಿಮೆಯಿವೆ. ಯಾವುದೇ ರೀತಿಯಲ್ಲಿ ನೋಡಿದರೂ ವಿಶ್ವದ ಬಹುತೇಕ ರಾಷ್ಟ್ರಗಳು ಹೇರಿರುವ ಆರ್ಥಿಕ ದಿಗ್ಬಂಧನ ಆ ದೇಶಕ್ಕೆ ಹೊರೆಯಾಗಿದೆ.

ರಷ್ಯಾದ ಸಂಕಷ್ಟಕ್ಕೆ ಇನ್ನೊಂದು ಮುಖ್ಯ ಕಾರಣವಿದೆ. ಆ ದೇಶದ ಬ್ಯಾಂಕುಗಳು ಪಾಶ್ಚಾತ್ಯ ರಾಷ್ಟ್ರಗಳಲ್ಲಿ ನಿಷೇಧಕ್ಕೊಳಗಾಗಿವೆ. ಹಾಗಾಗಿ ಅನ್ಯದೇಶಗಳಿಂದ ಹಣ ಪಡೆಯಲು ಕಷ್ಟವಾಗುತ್ತಿದೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.