ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ಆರ್ಥಿಕ ದಿಗ್ಬಂಧನ; ಭಾರತದ ರೂಪಾಯಿಯನ್ನು ಖರ್ಚು ಮಾಡಲಾಗದೆ ಒದ್ದಾಡುತ್ತಿದೆ ರಷ್ಯಾ

Team Udayavani, Jun 2, 2023, 7:45 AM IST

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ಬ್ಲೂಮ್‌ಬರ್ಗ್‌: ಉಕ್ರೇನ್‌ ಮೇಲೆ ಮುಗಿಬಿದ್ದು ಆರ್ಥಿಕ ದಿಗ್ಬಂಧನಕ್ಕೊಳಗಾಗಿ ಪರದಾಡುತ್ತಿರುವ ರಷ್ಯಾ ಒಂದು ವಿಚಿತ್ರ ಪೀಕಲಾಟದಲ್ಲಿ ಸಿಕ್ಕಿಬಿದ್ದಿದೆ.

ಭಾರತಕ್ಕೆ ಅದು ಪೆಟ್ರೋಲ್‌-ಡೀಸೆಲ್‌ ಸೇರಿದಂತೆ ಕೆಲವು ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ. ಅದಕ್ಕೆ ಪ್ರತಿಯಾಗಿ ಭಾರತ ರೂಪಾಯಿಯಲ್ಲಿ ಪಾವತಿ ಮಾಡುತ್ತಿದೆ. ಹೀಗಾಗಿ ರಷ್ಯಾ 147 ಬಿಲಿಯನ್‌ ಡಾಲರ್‌ (12 ಲಕ್ಷ ಕೋಟಿ ರೂ.) ಮೌಲ್ಯದ ರೂಪಾಯಿಗಳನ್ನು ಹೊಂದಿದೆ.

ಆದರೆ ಅದನ್ನು ಹೇಗೆ ಖರ್ಚು ಮಾಡುವುದು ಎಂದು ತಿಳಿಯದೇ ಒದ್ದಾಡುತ್ತಿದೆ. ರಷ್ಯಾದ ಬ್ಯಾಂಕುಗಳು, ಅದರ ಕರೆನ್ಸಿ ರೂಬೆಲ್‌ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಷೇಧವಿದೆ. ಆ ದೇಶದ ಕರೆನ್ಸಿ ತನ್ನ ಮೌಲ್ಯವನ್ನೇ ಕಳೆದುಕೊಂಡಿದೆ. ಇಂತಹ ಹೊತ್ತಿನಲ್ಲಿ ಅದಕ್ಕೆ ಆಸರೆಯಾಗಿರುವುದು ಭಾರತ. ಆದರೆ ಭಾರತದೊಂದಿಗೆ ವ್ಯಾಪಾರ ನಡೆಸಿದರೂ, ಅದಕ್ಕೆ ಉಪಯೋಗವಾಗುತ್ತಿಲ್ಲ.

ಭಾರತ ರಷ್ಯಾದಿಂದ ತರಿಸಿಕೊಳ್ಳುತ್ತಿದ್ದರೂ, ರಫ್ತು ಮಾಡುವ ಪ್ರಮಾಣ ತೀರಾ ಕಡಿಮೆಯಿದೆ. ಆಮದು-ರಫ್ತು ಪ್ರಮಾಣ ಒಂದು ಹಂತದಲ್ಲೇನಾದರೂ ಇದ್ದಿದ್ದರೆ ಹಾಗೆಯೇ ಸರಿಹೊಂದಿಸಬಹುದಿತ್ತು. ಅದೂ ಆಗುತ್ತಿಲ್ಲ. ಭಾರತದ ಕರೆನ್ಸಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಳಸಲು ರಷ್ಯಾಕ್ಕೆ ಆಗುತ್ತಿಲ್ಲ. ಪ್ರತೀ ತ್ತೈಮಾಸಿಕದಲ್ಲಿ ಅಸಮತೋಲನ 2ರಿಂದ 3 ಬಿಲಿಯನ್‌ ಡಾಲರ್‌ ಮೌಲ್ಯದ ರೂಪಾಯಿ ಸಂಗ್ರಹ ಹೆಚ್ಚಾಗುತ್ತಲೇ ಇದೆ. ಭಾರತವೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಕರೆನ್ಸಿ ಬಳಕೆಯನ್ನು ಹೆಚ್ಚಿಸಬೇಕೆಂಬ ಉದ್ದೇಶ ಹೊಂದಿದೆ.

ಹಾಗಾಗಿ ಭಾರತಕ್ಕೆ ರಫ್ತು ಮಾಡುವ ದೇಶಗಳಿಗೆ ಹೆಚ್ಚುವರಿ ರೂಪಾಯಿಯಲ್ಲೇ ಪಾವತಿ ಮಾಡುತ್ತಿದೆ. ರೂಪಾಯಿ ಉಳಿದರೆ, ಅದನ್ನು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಆರ್‌ಬಿಐ ವಿದೇಶಿ ಕಂಪನಿಗಳಿಗೆ ಸಲಹೆ ನೀಡಿದೆ.

ರಷ್ಯಾಕ್ಕಿರುವ ಆಯ್ಕೆಗಳೇನು?: ಭಾರತೀಯ ಬ್ಯಾಂಕುಗಳಲ್ಲಿ ಸಂಗ್ರಹವಾಗಿರುವ ರೂಪಾಯಿಯನ್ನು, ಭಾರತೀಯ ಮೂಲಸೌಕರ್ಯ ಯೋಜನೆಗಳಲ್ಲಿ ಹೂಡಿಕೆ ಮಾಡಿ, ಕಾಲಾನುಕ್ರಮದಲ್ಲಿ ಅದರ ಲಾಭ ಪಡೆಯಬಹುದು ಎಂಬ ಆಯ್ಕೆಯೂ ರಷ್ಯಾ ಮುಂದಿದೆ. ಆರಂಭದಲ್ಲಿ ಇದಕ್ಕೆ ಒಪ್ಪದಿದ್ದರೂ, ಸದ್ಯ ಇದೇ ರಷ್ಯಾ ಮುಂದಿರುವ ಉತ್ತಮ ಆಯ್ಕೆ ಎನಿಸಿದೆ. ಇನ್ನು ರಷ್ಯಾ ಮೂರನೇ ರಾಷ್ಟ್ರವಾದ ಚೀನಾದ ಯುವಾನ್‌, ಯುಎಇಯ ದಿರ್ಹಾಮ್‌ ಕರೆನ್ಸಿಯನ್ನು ಬಳಸಬಹುದು. ಇನ್ನೂ ಮುಖ್ಯವಾಗಿ ಭಾರತಕ್ಕೆ ಸರಿಸಮನಾಗಿ ರಷ್ಯಾದಿಂದ ತೈಲವನ್ನು ತರಿಸಿಕೊಳ್ಳುವ ರಾಷ್ಟ್ರಗಳು ತೀರಾ ಕಡಿಮೆಯಿವೆ. ಯಾವುದೇ ರೀತಿಯಲ್ಲಿ ನೋಡಿದರೂ ವಿಶ್ವದ ಬಹುತೇಕ ರಾಷ್ಟ್ರಗಳು ಹೇರಿರುವ ಆರ್ಥಿಕ ದಿಗ್ಬಂಧನ ಆ ದೇಶಕ್ಕೆ ಹೊರೆಯಾಗಿದೆ.

ರಷ್ಯಾದ ಸಂಕಷ್ಟಕ್ಕೆ ಇನ್ನೊಂದು ಮುಖ್ಯ ಕಾರಣವಿದೆ. ಆ ದೇಶದ ಬ್ಯಾಂಕುಗಳು ಪಾಶ್ಚಾತ್ಯ ರಾಷ್ಟ್ರಗಳಲ್ಲಿ ನಿಷೇಧಕ್ಕೊಳಗಾಗಿವೆ. ಹಾಗಾಗಿ ಅನ್ಯದೇಶಗಳಿಂದ ಹಣ ಪಡೆಯಲು ಕಷ್ಟವಾಗುತ್ತಿದೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.